Homeಮುಖಪುಟಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ ಎನ್‌ಡಿಟಿವಿಯ ವರದಿಗಾರನನ್ನು ನಿಂದಿಸಿದ ಮತ್ತು ಬೇಜವಬ್ದಾರಿ ಹೇಳಿಕೆ ನೀಡಿದ ಮಧ್ಯಪ್ರದೇಶ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗೀಯ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಿಜಯವರ್ಗೀಯ ಅವರ ಸ್ವಕ್ಷೇತ್ರ ಇಂದೋರ್‌-1ರ ವ್ಯಾಪ್ತಿಯಲ್ಲಿ ಬರುವ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಏಳೆಂಟು ಜನರು ಸಾವನ್ನಪ್ಪಿದ ಮತ್ತು ಸಾವಿರಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ ಬಗ್ಗೆ ಬುಧವಾರ (ಡಿ.31) ವರದಿಯಾಗಿದೆ.

ಈ ಕುರಿತು ವಿಜಯವರ್ಗೀಯ ಅವರನ್ನು ಎನ್‌ಡಿಟಿವಿ ವರದಿಗಾರ ಅನುರಾಗ್ ದ್ವಾರಿ ಪ್ರಶ್ನಿಸಿದ್ದರು. ಘಟನೆಗೆ ಕಿರಿಯ ಮತ್ತು ತಳಮಟ್ಟದ ಅಧಿಕಾರಿಗಳನ್ನು ಮಾತ್ರ ಏಕೆ ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ? ನಗರಾಭಿವೃದ್ದಿ ಸಚಿವರಾದ ನೀವು ಮತ್ತು ಜಲಸಂಪನ್ಮೂಲ ಸಚಿವೆ ತುಳಸಿ ಸೇರಿದಂತೆ ಸಚಿವರು, ಹಿರಿಯ ನಾಯಕರು ಮತ್ತು ಅಧಿಕಾರಿಗಳನ್ನು ಏಕೆ ಹೊಣೆ ಮಾಡಲಾಗುತ್ತಿಲ್ಲ ಎಂದು ಕೇಳಿದ್ದರು.

ತಮ್ಮ ಸಂಬಂಧಿಕರನ್ನು ಕಳೆದುಕೊಂಡ ಹಾಗೂ ಸಂಬಂಧಿಕರು ಅನಾರೋಗ್ಯಕ್ಕೆ ತುತ್ತಾಗಿರುವ ಕುಟುಂಬಗಳಿಗೆ ಪರಿಹಾರ ಒದಗಿಸುವಲ್ಲಿ ವಿಳಂಬವಾಗಿದೆ ಎಂದಿದ್ದರು.

ಇಷ್ಟಕ್ಕೆ ಕೋಪಗೊಂಡ ವಿಜಯವರ್ಗೀಯ, ವರದಿಗಾರನ ಪ್ರಶ್ನೆ ‘ಅಸಂಬಂಧ; (nonsense)ಎಂದು ಹೇಳಿದ್ದಾರೆ. ಇದು ‘ಅನುಪಯುಕ್ತ’ ಎಂದಿದ್ದಾರೆ. “ತು ಕ್ಯಾ ಘಂಟಾ ಹೋಕೆ ಆಯಾ ಹೈ?” ಎಂದು ಅವಹೇಳನಕಾರಿ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಚಿವರ ಪ್ರತಿಕ್ರಿಯೆ ವರದಿಗಾರ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದು, “ಕೈಲಾಶ್ ಜಿ, ಬಾತ್ ಟೀಕ್ ಸೆ ಕಿಜಿಯೇ… ಯೇ ಕ್ಯಾ ಶಬ್ದ್ ಹೋತಾ ಹೈ?” (ಕೈಲಾಶ್ ಅವರೇ ಸರಿಯಾಗಿ ಮಾತನಾಡಿ, ಇದು ಯಾವ ರೀತಿಯ ಭಾಷೆ ಬಳಸುತ್ತಿದ್ದಾರಾ?) ಎಂದು ಕೇಳಿದ್ದಾರೆ.

ಸಚಿವರು ಮತ್ತು ವರದಿಗಾರನ ನಡುವಿನ ಈ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ, ಜನರ ಸಾವಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಯನ್ನು ‘ಅಸಂಬದ್ಧ’ ಎಂದು ಹೇಳಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ತನ್ನ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ವಿಜಯವರ್ಗೀಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಕ್ಷಮೆಯಾಚಿಸಿದ್ದಾರೆ.

“ಕಳೆದ ಎರಡು ದಿನಗಳಿಂದ ನಾನು ಮತ್ತು ನನ್ನ ತಂಡ ಕಲುಷಿತ ನೀರಿನಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಅವಿಶ್ರಾಂತವಾಗಿ ಶ್ರಮಿಸುತ್ತಿದ್ದೇವೆ. ನನ್ನ ಜನರು ಕಲುಷಿತ ನೀರಿನಿಂದ ಬಳಲುತ್ತಿದ್ದಾರೆ ಮತ್ತು ಕೆಲವರು ನಮ್ಮನ್ನು ಅಗಲಿದ್ದಾರೆ. ಈ ಆಳವಾದ ದುಃಖದ ಸ್ಥಿತಿಯಲ್ಲಿ, ಮಾಧ್ಯಮದ ಪ್ರಶ್ನೆಗೆ ಉತ್ತರಿಸುವಲ್ಲಿ ನಾನು ತಪ್ಪು ಮಾಡಿದ್ದೇನೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ವಿಜಯವರ್ಗೀಯ ಬರೆದುಕೊಂಡಿದ್ದಾರೆ.

ವಿಜಯವರ್ಗೀಯ ಕ್ಷಮೆ ಯಾಚಿಸಿದರೂ, ಅವರ ಹೇಳಿಕೆಗೆ ಈಗಲೂ ಜನರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜಕೀಯ ಬಣ್ಣವೂ ಪಡೆದುಕೊಂಡಿದೆ. ಮಧ್ಯಪ್ರದೇಶದ ವಿರೋಧ ಪಕ್ಷವಾದ ಕಾಂಗ್ರೆಸ್‌ನ ನಾಯಕ ಜಿತು ಪಟ್ವಾರಿ ಇದು “ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ, ವಿಜಯವರ್ಗೀಯ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...