Homeಮುಖಪುಟ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ - ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

- Advertisement -
- Advertisement -

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಸಚಿವ ಓಂ ಪ್ರಕಾಶ್ ಸಕ್ಲೆಚಾ ಅವರು, ‘‘ಯಾವುದೆ ಕಷ್ಟಗಳು ಇಲ್ಲದಾಗ, ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಓಂ ಪ್ರಕಾಶ್‌, “ಕಷ್ಟಗಳು ನಿಮಗೆ ಒಳ್ಳೆಯ ಸಮಯದ ಸಂತೋಷವನ್ನು ಅರಿಯಲು ಸಹಾಯ ಮಾಡುತ್ತದೆ. ಯಾವುದೇ ತೊಂದರೆ ಇಲ್ಲದಿದ್ದರೆ, ನಿಮಗೆ ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ದೇಶದಲ್ಲಿ ಏರುತ್ತಿರುವ ಇಂಧನ ದರಗಳ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ ಮತ್ತು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಪ್ರಸ್ತುತ, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಅತ್ಯಂತ ದುಬಾರಿಯಾಗಿರುವುದು ಮುಂಬೈ ನಗರದಲ್ಲಾಗಿದೆ ಎಂದು ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆ ತಿಳಿಸಿದೆ. ಮೌಲ್ಯವರ್ಧಿತ ತೆರಿಗೆಯಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಇಂಧನ ದರಗಳು ಬೇರೆ ಬೇರೆಯಾಗಿ ಇರುತ್ತವೆ.

ಪ್ರಧಾನಿ ನರೇಂದ್ರ ಮೋದಿ ಇಂಧನ ದರದ ತೀವ್ರ ಏರಿಕೆ ತಡೆಯುವುದರಲ್ಲಿ ವಿಫಲರಾಗಿದ್ದಾರೆ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ಅವರು ಇದು ಮಾಧ್ಯಮಗಳು ಹರಡಿದ ವದಂತಿಗಳು ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ಸರ್ಕಾರವನ್ನು ಈ ಹಿಂದಿನ ಕಾಂಗ್ರೆಸ್ ಆಡಳಿತಕ್ಕೆ ಹೋಲಿಕೆ ಮಾಡಿದ ಓಂ ಪ್ರಕಾಶ್‌, ಕಾಂಗ್ರೆಸ್‌‌ ಪೋಲಿಯೊ ವಿರುದ್ಧ ಲಸಿಕೆ ನೀಡಲು 40 ವರ್ಷಗಳನ್ನು ತೆಗೆದುಕೊಂಡಿತು, ಆದರೆ ಪ್ರಧಾನಿ ಮೋದಿ ಅವರು ಒಂದು ವರ್ಷದಲ್ಲಿ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆ ನೀಡಿದ್ದಾರೆ ಮತ್ತು ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇಂಧನ ಬೆಲೆಗಳ ಏರಿಕೆಯ ವಿರುದ್ದ ತೀವ್ರ ಆಕ್ರೋಶಗಳು ಹೆಚ್ಚುತ್ತಿದ್ದರೂ, ಶನಿವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...