Homeಮುಖಪುಟ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ - ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

- Advertisement -
- Advertisement -

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಸಚಿವ ಓಂ ಪ್ರಕಾಶ್ ಸಕ್ಲೆಚಾ ಅವರು, ‘‘ಯಾವುದೆ ಕಷ್ಟಗಳು ಇಲ್ಲದಾಗ, ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಓಂ ಪ್ರಕಾಶ್‌, “ಕಷ್ಟಗಳು ನಿಮಗೆ ಒಳ್ಳೆಯ ಸಮಯದ ಸಂತೋಷವನ್ನು ಅರಿಯಲು ಸಹಾಯ ಮಾಡುತ್ತದೆ. ಯಾವುದೇ ತೊಂದರೆ ಇಲ್ಲದಿದ್ದರೆ, ನಿಮಗೆ ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ದೇಶದಲ್ಲಿ ಏರುತ್ತಿರುವ ಇಂಧನ ದರಗಳ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ ಮತ್ತು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಪ್ರಸ್ತುತ, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಅತ್ಯಂತ ದುಬಾರಿಯಾಗಿರುವುದು ಮುಂಬೈ ನಗರದಲ್ಲಾಗಿದೆ ಎಂದು ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆ ತಿಳಿಸಿದೆ. ಮೌಲ್ಯವರ್ಧಿತ ತೆರಿಗೆಯಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಇಂಧನ ದರಗಳು ಬೇರೆ ಬೇರೆಯಾಗಿ ಇರುತ್ತವೆ.

ಪ್ರಧಾನಿ ನರೇಂದ್ರ ಮೋದಿ ಇಂಧನ ದರದ ತೀವ್ರ ಏರಿಕೆ ತಡೆಯುವುದರಲ್ಲಿ ವಿಫಲರಾಗಿದ್ದಾರೆ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ಅವರು ಇದು ಮಾಧ್ಯಮಗಳು ಹರಡಿದ ವದಂತಿಗಳು ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ಸರ್ಕಾರವನ್ನು ಈ ಹಿಂದಿನ ಕಾಂಗ್ರೆಸ್ ಆಡಳಿತಕ್ಕೆ ಹೋಲಿಕೆ ಮಾಡಿದ ಓಂ ಪ್ರಕಾಶ್‌, ಕಾಂಗ್ರೆಸ್‌‌ ಪೋಲಿಯೊ ವಿರುದ್ಧ ಲಸಿಕೆ ನೀಡಲು 40 ವರ್ಷಗಳನ್ನು ತೆಗೆದುಕೊಂಡಿತು, ಆದರೆ ಪ್ರಧಾನಿ ಮೋದಿ ಅವರು ಒಂದು ವರ್ಷದಲ್ಲಿ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆ ನೀಡಿದ್ದಾರೆ ಮತ್ತು ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇಂಧನ ಬೆಲೆಗಳ ಏರಿಕೆಯ ವಿರುದ್ದ ತೀವ್ರ ಆಕ್ರೋಶಗಳು ಹೆಚ್ಚುತ್ತಿದ್ದರೂ, ಶನಿವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...