Homeಮುಖಪುಟ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ - ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

- Advertisement -
- Advertisement -

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಸಚಿವ ಓಂ ಪ್ರಕಾಶ್ ಸಕ್ಲೆಚಾ ಅವರು, ‘‘ಯಾವುದೆ ಕಷ್ಟಗಳು ಇಲ್ಲದಾಗ, ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಓಂ ಪ್ರಕಾಶ್‌, “ಕಷ್ಟಗಳು ನಿಮಗೆ ಒಳ್ಳೆಯ ಸಮಯದ ಸಂತೋಷವನ್ನು ಅರಿಯಲು ಸಹಾಯ ಮಾಡುತ್ತದೆ. ಯಾವುದೇ ತೊಂದರೆ ಇಲ್ಲದಿದ್ದರೆ, ನಿಮಗೆ ಸಂತೋಷವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ” ಎಂದು ದೇಶದಲ್ಲಿ ಏರುತ್ತಿರುವ ಇಂಧನ ದರಗಳ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ ಮತ್ತು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಪ್ರಸ್ತುತ, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಅತ್ಯಂತ ದುಬಾರಿಯಾಗಿರುವುದು ಮುಂಬೈ ನಗರದಲ್ಲಾಗಿದೆ ಎಂದು ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆ ತಿಳಿಸಿದೆ. ಮೌಲ್ಯವರ್ಧಿತ ತೆರಿಗೆಯಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಇಂಧನ ದರಗಳು ಬೇರೆ ಬೇರೆಯಾಗಿ ಇರುತ್ತವೆ.

ಪ್ರಧಾನಿ ನರೇಂದ್ರ ಮೋದಿ ಇಂಧನ ದರದ ತೀವ್ರ ಏರಿಕೆ ತಡೆಯುವುದರಲ್ಲಿ ವಿಫಲರಾಗಿದ್ದಾರೆ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ಅವರು ಇದು ಮಾಧ್ಯಮಗಳು ಹರಡಿದ ವದಂತಿಗಳು ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ಸರ್ಕಾರವನ್ನು ಈ ಹಿಂದಿನ ಕಾಂಗ್ರೆಸ್ ಆಡಳಿತಕ್ಕೆ ಹೋಲಿಕೆ ಮಾಡಿದ ಓಂ ಪ್ರಕಾಶ್‌, ಕಾಂಗ್ರೆಸ್‌‌ ಪೋಲಿಯೊ ವಿರುದ್ಧ ಲಸಿಕೆ ನೀಡಲು 40 ವರ್ಷಗಳನ್ನು ತೆಗೆದುಕೊಂಡಿತು, ಆದರೆ ಪ್ರಧಾನಿ ಮೋದಿ ಅವರು ಒಂದು ವರ್ಷದಲ್ಲಿ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆ ನೀಡಿದ್ದಾರೆ ಮತ್ತು ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇಂಧನ ಬೆಲೆಗಳ ಏರಿಕೆಯ ವಿರುದ್ದ ತೀವ್ರ ಆಕ್ರೋಶಗಳು ಹೆಚ್ಚುತ್ತಿದ್ದರೂ, ಶನಿವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...