Homeಮುಖಪುಟಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸುತ್ತಿದ್ದಂತೆ ಅಸ್ಸಾಂನ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರು ಹೂಕೋಸು ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ‘ಬಿಹಾರ ಹೂಕೋಸು ಕೃಷಿಗೆ ಒಪ್ಪಿಗೆ ನೀಡಿದೆ” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಬಿಹಾರದ ಗೆಲುವು ಅನುಮತಿ ನೀಡಿದೆ ಎಂಬ ದಾಟಿಯಲ್ಲಿ ಸಚಿವ ಸಿಂಘಾಲ್ ಹೇಳಿದ್ದಾರೆ.

ಸಾಂವಿಧಾನಿಕ ಹುದ್ದೆಯಲ್ಲಿರುವ ಸಚಿವನ ಈ ಆಘಾತಕಾರಿ ಪೋಸ್ಟ್‌ಗೆ ರಾಜಕೀಯ ನಾಯಕರು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಹೂಕೋಸು ಕೃಷಿ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ಉಲ್ಲೇಖಿಸುತ್ತದೆ. ಮುಸ್ಲಿಮರ ಹತ್ಯಾಕಾಂಡದ ಬಳಿಕ ಸಾಕ್ಷ್ಯ ಮರೆಮಾಚಲು ಲೋಗೇನ್ ಗ್ರಾಮದಲ್ಲಿ ಹೆಣಗಳ ಹೂತ ಸಮಾಧಿಗಳ ಮೇಲೆ ಹೂಕೋಸು ಕೃಷಿ ಮಾಡಲಾಗಿತ್ತು. ಭಾಗಲ್ಪುರ ಹತ್ಯಾಕಾಂಡದಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಅಂದಾಜು 50,000 ಜನರು ಸ್ಥಳಾಂತರಗೊಂಡಿದ್ದರು.

ಬಿಜೆಪಿ, ಸಂಘಪರಿವಾರದ ಬೆಂಬಲಿಗರು ಮತ್ತು ಇತರ ಕಟ್ಟರ್ ಬಲಪಂಥೀಯರು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹೂಕೋಸು ಫೋಟೋಗಳನ್ನು ಹಂಚಿಕೊಂಡು ಮುಸ್ಲಿಮರ ವಿರುದ್ದ ದ್ವೇಷ ಕಾರುವುದು ಮಾಡುತ್ತಿರುತ್ತಾರೆ.

“ಗೋಬಿ ಕೃಷಿ’ (ಹೂಕೋಸು ಕೃಷಿ) ಎಂದರೆ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ವೈಭವೀಕರಿಸುವುದಾಗಿದೆ. ಭಾಗಲ್ಪುರ ಹತ್ಯಾಕಾಂಡದ ಬಳಿಕ ಸಾಕ್ಷ್ಯಗಳನ್ನು ಮರೆಮಾಡಲು ಸಮಾಧಿಗಳ ಮೇಲೆ ಹೂಕೋಸು ನೆಡಲಾಗಿತ್ತು. ಇದು ಅಸ್ಸಾಂನ ಮೋದಿಯ ಬಿಜೆಪಿ ಸಚಿವರ ಪೋಸ್ಟ್ ಯಾವುದೋ ಒಂದು ಸಣ್ಣ ವಿಷಯವಲ್ಲ. ಹಾಗಾದರೆ, ಪ್ರಧಾನಿ ಮೋದಿಯವರು ಇದನ್ನು ಒಪ್ಪುತ್ತಾರೆಯೇ ಜಗತ್ತು ತಿಳಿದುಕೊಳ್ಳಬೇಕಿದೆ” ಎಂದು ಪಶ್ಚಿಮ ಬಂಗಾಳದ ಟಿಎಂಸಿ ಸಂಸದ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

“ಭಾಗಲ್ಪುರದಂತಹ ಸ್ಥಳಗಳಲ್ಲಿ ಹಿಂಸಾಚಾರದ ನೋವಿನ ಇತಿಹಾಸವಿದ್ದರೂ, ‘ಹೂಕೋಸು ಕೃಷಿ’ಯನ್ನು ಇಡೀ ಸಮುದಾಯವನ್ನು ಅಮಾನವೀಯಗೊಳಿಸಲು ಅಪಹಾಸ್ಯವಾಗಿ ಬಳಸಲಾಗುತ್ತಿರುವಾಗ, ಮುಸ್ಲಿಮರು ಮಾತ್ರ ಉಗ್ರಗಾಮಿಗಳು ಆಗುವುದು ಏಕೆ? ಅಮಾನವೀಯೀಕರಣವು ಪರಿಣಾಮಗಳನ್ನು ಬೀರುತ್ತದೆ” ಎಂದು ಮತ್ತೊಬ್ಬ ಎಕ್ಸ್‌ ಬಳಕೆದಾರರು ಬರೆದುಕೊಂಡಿದ್ದಾರೆ.

“ಒಬ್ಬ ಸಂಪುಟ ಸಚಿವ ಈ ರೀತಿ ವರ್ತಿಸಿದರೆ, ಅವರನ್ನು ಅನುಸರಿಸುವ ಜನರಿಗೆ ಅದು ನೀಡುವ ಧೈರ್ಯವನ್ನು ಊಹಿಸಿ” ಎಂದು ಮತ್ತೊಬ್ಬರು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...