Homeಮುಖಪುಟಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸುತ್ತಿದ್ದಂತೆ ಅಸ್ಸಾಂನ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರು ಹೂಕೋಸು ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ‘ಬಿಹಾರ ಹೂಕೋಸು ಕೃಷಿಗೆ ಒಪ್ಪಿಗೆ ನೀಡಿದೆ” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಬಿಹಾರದ ಗೆಲುವು ಅನುಮತಿ ನೀಡಿದೆ ಎಂಬ ದಾಟಿಯಲ್ಲಿ ಸಚಿವ ಸಿಂಘಾಲ್ ಹೇಳಿದ್ದಾರೆ.

ಸಾಂವಿಧಾನಿಕ ಹುದ್ದೆಯಲ್ಲಿರುವ ಸಚಿವನ ಈ ಆಘಾತಕಾರಿ ಪೋಸ್ಟ್‌ಗೆ ರಾಜಕೀಯ ನಾಯಕರು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಹೂಕೋಸು ಕೃಷಿ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ಉಲ್ಲೇಖಿಸುತ್ತದೆ. ಮುಸ್ಲಿಮರ ಹತ್ಯಾಕಾಂಡದ ಬಳಿಕ ಸಾಕ್ಷ್ಯ ಮರೆಮಾಚಲು ಲೋಗೇನ್ ಗ್ರಾಮದಲ್ಲಿ ಹೆಣಗಳ ಹೂತ ಸಮಾಧಿಗಳ ಮೇಲೆ ಹೂಕೋಸು ಕೃಷಿ ಮಾಡಲಾಗಿತ್ತು. ಭಾಗಲ್ಪುರ ಹತ್ಯಾಕಾಂಡದಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಅಂದಾಜು 50,000 ಜನರು ಸ್ಥಳಾಂತರಗೊಂಡಿದ್ದರು.

ಬಿಜೆಪಿ, ಸಂಘಪರಿವಾರದ ಬೆಂಬಲಿಗರು ಮತ್ತು ಇತರ ಕಟ್ಟರ್ ಬಲಪಂಥೀಯರು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹೂಕೋಸು ಫೋಟೋಗಳನ್ನು ಹಂಚಿಕೊಂಡು ಮುಸ್ಲಿಮರ ವಿರುದ್ದ ದ್ವೇಷ ಕಾರುವುದು ಮಾಡುತ್ತಿರುತ್ತಾರೆ.

“ಗೋಬಿ ಕೃಷಿ’ (ಹೂಕೋಸು ಕೃಷಿ) ಎಂದರೆ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ವೈಭವೀಕರಿಸುವುದಾಗಿದೆ. ಭಾಗಲ್ಪುರ ಹತ್ಯಾಕಾಂಡದ ಬಳಿಕ ಸಾಕ್ಷ್ಯಗಳನ್ನು ಮರೆಮಾಡಲು ಸಮಾಧಿಗಳ ಮೇಲೆ ಹೂಕೋಸು ನೆಡಲಾಗಿತ್ತು. ಇದು ಅಸ್ಸಾಂನ ಮೋದಿಯ ಬಿಜೆಪಿ ಸಚಿವರ ಪೋಸ್ಟ್ ಯಾವುದೋ ಒಂದು ಸಣ್ಣ ವಿಷಯವಲ್ಲ. ಹಾಗಾದರೆ, ಪ್ರಧಾನಿ ಮೋದಿಯವರು ಇದನ್ನು ಒಪ್ಪುತ್ತಾರೆಯೇ ಜಗತ್ತು ತಿಳಿದುಕೊಳ್ಳಬೇಕಿದೆ” ಎಂದು ಪಶ್ಚಿಮ ಬಂಗಾಳದ ಟಿಎಂಸಿ ಸಂಸದ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

“ಭಾಗಲ್ಪುರದಂತಹ ಸ್ಥಳಗಳಲ್ಲಿ ಹಿಂಸಾಚಾರದ ನೋವಿನ ಇತಿಹಾಸವಿದ್ದರೂ, ‘ಹೂಕೋಸು ಕೃಷಿ’ಯನ್ನು ಇಡೀ ಸಮುದಾಯವನ್ನು ಅಮಾನವೀಯಗೊಳಿಸಲು ಅಪಹಾಸ್ಯವಾಗಿ ಬಳಸಲಾಗುತ್ತಿರುವಾಗ, ಮುಸ್ಲಿಮರು ಮಾತ್ರ ಉಗ್ರಗಾಮಿಗಳು ಆಗುವುದು ಏಕೆ? ಅಮಾನವೀಯೀಕರಣವು ಪರಿಣಾಮಗಳನ್ನು ಬೀರುತ್ತದೆ” ಎಂದು ಮತ್ತೊಬ್ಬ ಎಕ್ಸ್‌ ಬಳಕೆದಾರರು ಬರೆದುಕೊಂಡಿದ್ದಾರೆ.

“ಒಬ್ಬ ಸಂಪುಟ ಸಚಿವ ಈ ರೀತಿ ವರ್ತಿಸಿದರೆ, ಅವರನ್ನು ಅನುಸರಿಸುವ ಜನರಿಗೆ ಅದು ನೀಡುವ ಧೈರ್ಯವನ್ನು ಊಹಿಸಿ” ಎಂದು ಮತ್ತೊಬ್ಬರು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...