Homeಮುಖಪುಟಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸುತ್ತಿದ್ದಂತೆ ಅಸ್ಸಾಂನ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರು ಹೂಕೋಸು ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ‘ಬಿಹಾರ ಹೂಕೋಸು ಕೃಷಿಗೆ ಒಪ್ಪಿಗೆ ನೀಡಿದೆ” ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಬಿಹಾರದ ಗೆಲುವು ಅನುಮತಿ ನೀಡಿದೆ ಎಂಬ ದಾಟಿಯಲ್ಲಿ ಸಚಿವ ಸಿಂಘಾಲ್ ಹೇಳಿದ್ದಾರೆ.

ಸಾಂವಿಧಾನಿಕ ಹುದ್ದೆಯಲ್ಲಿರುವ ಸಚಿವನ ಈ ಆಘಾತಕಾರಿ ಪೋಸ್ಟ್‌ಗೆ ರಾಜಕೀಯ ನಾಯಕರು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಹೂಕೋಸು ಕೃಷಿ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ಉಲ್ಲೇಖಿಸುತ್ತದೆ. ಮುಸ್ಲಿಮರ ಹತ್ಯಾಕಾಂಡದ ಬಳಿಕ ಸಾಕ್ಷ್ಯ ಮರೆಮಾಚಲು ಲೋಗೇನ್ ಗ್ರಾಮದಲ್ಲಿ ಹೆಣಗಳ ಹೂತ ಸಮಾಧಿಗಳ ಮೇಲೆ ಹೂಕೋಸು ಕೃಷಿ ಮಾಡಲಾಗಿತ್ತು. ಭಾಗಲ್ಪುರ ಹತ್ಯಾಕಾಂಡದಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಅಂದಾಜು 50,000 ಜನರು ಸ್ಥಳಾಂತರಗೊಂಡಿದ್ದರು.

ಬಿಜೆಪಿ, ಸಂಘಪರಿವಾರದ ಬೆಂಬಲಿಗರು ಮತ್ತು ಇತರ ಕಟ್ಟರ್ ಬಲಪಂಥೀಯರು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹೂಕೋಸು ಫೋಟೋಗಳನ್ನು ಹಂಚಿಕೊಂಡು ಮುಸ್ಲಿಮರ ವಿರುದ್ದ ದ್ವೇಷ ಕಾರುವುದು ಮಾಡುತ್ತಿರುತ್ತಾರೆ.

“ಗೋಬಿ ಕೃಷಿ’ (ಹೂಕೋಸು ಕೃಷಿ) ಎಂದರೆ 1989ರಲ್ಲಿ ಬಿಹಾರದ ಭಾಗಲ್ಪುರದಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ವೈಭವೀಕರಿಸುವುದಾಗಿದೆ. ಭಾಗಲ್ಪುರ ಹತ್ಯಾಕಾಂಡದ ಬಳಿಕ ಸಾಕ್ಷ್ಯಗಳನ್ನು ಮರೆಮಾಡಲು ಸಮಾಧಿಗಳ ಮೇಲೆ ಹೂಕೋಸು ನೆಡಲಾಗಿತ್ತು. ಇದು ಅಸ್ಸಾಂನ ಮೋದಿಯ ಬಿಜೆಪಿ ಸಚಿವರ ಪೋಸ್ಟ್ ಯಾವುದೋ ಒಂದು ಸಣ್ಣ ವಿಷಯವಲ್ಲ. ಹಾಗಾದರೆ, ಪ್ರಧಾನಿ ಮೋದಿಯವರು ಇದನ್ನು ಒಪ್ಪುತ್ತಾರೆಯೇ ಜಗತ್ತು ತಿಳಿದುಕೊಳ್ಳಬೇಕಿದೆ” ಎಂದು ಪಶ್ಚಿಮ ಬಂಗಾಳದ ಟಿಎಂಸಿ ಸಂಸದ ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

“ಭಾಗಲ್ಪುರದಂತಹ ಸ್ಥಳಗಳಲ್ಲಿ ಹಿಂಸಾಚಾರದ ನೋವಿನ ಇತಿಹಾಸವಿದ್ದರೂ, ‘ಹೂಕೋಸು ಕೃಷಿ’ಯನ್ನು ಇಡೀ ಸಮುದಾಯವನ್ನು ಅಮಾನವೀಯಗೊಳಿಸಲು ಅಪಹಾಸ್ಯವಾಗಿ ಬಳಸಲಾಗುತ್ತಿರುವಾಗ, ಮುಸ್ಲಿಮರು ಮಾತ್ರ ಉಗ್ರಗಾಮಿಗಳು ಆಗುವುದು ಏಕೆ? ಅಮಾನವೀಯೀಕರಣವು ಪರಿಣಾಮಗಳನ್ನು ಬೀರುತ್ತದೆ” ಎಂದು ಮತ್ತೊಬ್ಬ ಎಕ್ಸ್‌ ಬಳಕೆದಾರರು ಬರೆದುಕೊಂಡಿದ್ದಾರೆ.

“ಒಬ್ಬ ಸಂಪುಟ ಸಚಿವ ಈ ರೀತಿ ವರ್ತಿಸಿದರೆ, ಅವರನ್ನು ಅನುಸರಿಸುವ ಜನರಿಗೆ ಅದು ನೀಡುವ ಧೈರ್ಯವನ್ನು ಊಹಿಸಿ” ಎಂದು ಮತ್ತೊಬ್ಬರು ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...