Homeಮುಖಪುಟನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸಂಜೀವ್‌ ಬಲ್ಯಾನ್‌ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

- Advertisement -
- Advertisement -

ಬೆಂಕಿ ಉಗುಳುವ ಮತ್ತು ವಿಭಜಿಸುವ ಹೇಳಿಕೆಗಳಿಗೆ ಹೆಸರುವಾಸಿಯಾದ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ “ಇದೇ ಸರಿಯಾದ ಚಿಕಿತ್ಸೆ” ಎಂದು ಘೋಷಿಸಿ ಬೆದರಿಕೆ ಹಾಕಿದ್ದಾರೆ.

ಸಿಎಎ ಪ್ರತಿಭಟನೆ ಮತ್ತು ಜೆಎನ್‌ಯು ಹಿಂಸಾಚಾರದ ನಂತರ ದೇಶಾದ್ಯಂತ ಪ್ರಸಂಶೆಗೆ ಒಳಗಾಗಿರುವ ಜೆಎನ್‌ಯು ಮತ್ತು ಜಾಮಿಯ ವಿದ್ಯಾರ್ಥಿಗಳಿಗೆ ಬುದ್ದಿ ಕಲಿಸಬೇಕೆಂದರೆ “ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಸ್ಥಾನಗಳನ್ನು ಮೀಸಲಿಡಬೇಕು” ಆಗ ಸರಿ ಹೋಗುತ್ತದೆ ಎಂದು ಸಂಜೀವ್‌ ಬಲ್ಯಾನ್‌ ಮೀರತ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ.

“ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರಲ್ಲಿ ವಿನಂತಿಸುತ್ತೇನೆ . ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಜೆಎನ್‌ಯು ಮತ್ತು ಜಾಮಿಯಾದ ವಿದ್ಯಾರ್ಥಿಗಳಿಗೆ ಒಂದೇ ಒಂದು ಚಿಕಿತ್ಸೆ ಇದೆ. ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಕೋಟಾ ಮೀಸಲಿಡಿ. ಆಗ ಎಲ್ಲರೂ ಗುಣಮುಖರಾಗುತ್ತಾರೆ ಮತ್ತೇನೂ ಇಲ್ಲ” ಎಂದು ಅವರು ಬೆದರಿಕೆ ಹಾಕಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶವು ಭಾರತದಲ್ಲಿಯೇ ಅತಿ ಹೆಚ್ಚು ಅಪರಾಧಗಳು ದಾಖಲಾಗುವ, ಅತಿ ಹೆಚ್ಚು ಗೂಂಡಾಗಳಿರುವ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗಿರುವುದರಿಂದ ಅಲ್ಲಿನ ಜನ ಈ ವಿಶ್ವವಿದ್ಯಾಲಯಗಳಿಗೆ ಬಂದರೆ ಹೊಡೆದು ಬಡಿದು ನಿಯಂತ್ರಣಕ್ಕೆ ತರುತ್ತಾರೆ ಎಂದು ಹೇಳುವ ಮೂಲಕ ಸಚಿವರು ಸ್ವತಃ ಹಿಂಸೆಗೆ ಬಹಿರಂಗವಾಗಿ ಕರೆ ನೀಡಿದ್ದಾರೆ.

ಬಾಲ್ಯನ್ ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾಗಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ ಸಹ ಕಿರಿಯ ಸಚಿವರಾಗಿದ್ದರು.

ಈ ಬಿಜೆಪಿ ಸಚಿವರು ತಮ್ಮ ಅತಿರೇಕದ ಹೇಳಿಕೆಗಳಿಂದ ಆಗಾಗ್ಗೆ ಜನರಿಂದ ಭಾರೀ ಟೀಕೆಗೊಳಗಾಗಿದ್ದಾರೆ. ಕಳೆದ ತಿಂಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ “ಮದರಾಸಾದ ಮಕ್ಕಳು” ಹಿಂಸಾಚಾರದಲ್ಲಿ ಪಾತ್ರವಹಿಸಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದರು.

ಅವರು 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಗಲಭೆಗೆ ಮುನ್ನ ನಡೆದ ದೊಡ್ಡ ಸಭೆ ಅಥವಾ ಮಹಾಪಂಚಾಯತ್‌ನಲ್ಲಿ ಕೋಮು ಪ್ರಚೋದನೆ ಭಾಷಣಗಳನ್ನು ಮಾಡಿದ ಆರೋಪ ಹೊತ್ತಿರುವ ಹಲವು ನಾಯಕರಲ್ಲಿ ಬಾಲ್ಯನ್ ಕೂಡ ಇದ್ದರು. ನಂತರ ಕೋಮು ಸಂಘರ್ಷಗಳು ಭುಗಿಲೆದ್ದವು. ಗಲಭೆಯಲ್ಲಿ ಅವರ ಪಾತ್ರದ ಕುರಿತ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಈ ಗಲಭೆಯ ವಿವಾದಾತ್ಮಕ ದಾಖಲೆಯ ಹೊರತಾಗಿಯೂ ಬಿಜೆಪಿ ಬಾಲ್ಯನ್‌ರನ್ನು ಕಣಕ್ಕಿಳಿಸಲಾಯಿತು ಮತ್ತು ಮುಜಫರ್‌ನಗರ ಕ್ಷೇತ್ರದಿಂದ 2014 ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಕಳೆದ ವರ್ಷದ ಚುನಾವಣೆಯಲ್ಲಿ ಅವರು ಮತ್ತೆ ಗೆದ್ದರು ಮತ್ತು ಅವರನ್ನು ಮಂತ್ರಿಯನ್ನಾಗಿ ಮಾಡಲಾಗಿದೆ. ಅವರು ನೋಡಿದರೆ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ಮಾಡಿದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಬೇಜವಬ್ದಾರಿ ಮಾತುಗಳನ್ನಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...