Homeಮುಖಪುಟನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸಂಜೀವ್‌ ಬಲ್ಯಾನ್‌ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

- Advertisement -
- Advertisement -

ಬೆಂಕಿ ಉಗುಳುವ ಮತ್ತು ವಿಭಜಿಸುವ ಹೇಳಿಕೆಗಳಿಗೆ ಹೆಸರುವಾಸಿಯಾದ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ “ಇದೇ ಸರಿಯಾದ ಚಿಕಿತ್ಸೆ” ಎಂದು ಘೋಷಿಸಿ ಬೆದರಿಕೆ ಹಾಕಿದ್ದಾರೆ.

ಸಿಎಎ ಪ್ರತಿಭಟನೆ ಮತ್ತು ಜೆಎನ್‌ಯು ಹಿಂಸಾಚಾರದ ನಂತರ ದೇಶಾದ್ಯಂತ ಪ್ರಸಂಶೆಗೆ ಒಳಗಾಗಿರುವ ಜೆಎನ್‌ಯು ಮತ್ತು ಜಾಮಿಯ ವಿದ್ಯಾರ್ಥಿಗಳಿಗೆ ಬುದ್ದಿ ಕಲಿಸಬೇಕೆಂದರೆ “ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಸ್ಥಾನಗಳನ್ನು ಮೀಸಲಿಡಬೇಕು” ಆಗ ಸರಿ ಹೋಗುತ್ತದೆ ಎಂದು ಸಂಜೀವ್‌ ಬಲ್ಯಾನ್‌ ಮೀರತ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ.

“ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರಲ್ಲಿ ವಿನಂತಿಸುತ್ತೇನೆ . ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಜೆಎನ್‌ಯು ಮತ್ತು ಜಾಮಿಯಾದ ವಿದ್ಯಾರ್ಥಿಗಳಿಗೆ ಒಂದೇ ಒಂದು ಚಿಕಿತ್ಸೆ ಇದೆ. ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಕೋಟಾ ಮೀಸಲಿಡಿ. ಆಗ ಎಲ್ಲರೂ ಗುಣಮುಖರಾಗುತ್ತಾರೆ ಮತ್ತೇನೂ ಇಲ್ಲ” ಎಂದು ಅವರು ಬೆದರಿಕೆ ಹಾಕಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶವು ಭಾರತದಲ್ಲಿಯೇ ಅತಿ ಹೆಚ್ಚು ಅಪರಾಧಗಳು ದಾಖಲಾಗುವ, ಅತಿ ಹೆಚ್ಚು ಗೂಂಡಾಗಳಿರುವ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗಿರುವುದರಿಂದ ಅಲ್ಲಿನ ಜನ ಈ ವಿಶ್ವವಿದ್ಯಾಲಯಗಳಿಗೆ ಬಂದರೆ ಹೊಡೆದು ಬಡಿದು ನಿಯಂತ್ರಣಕ್ಕೆ ತರುತ್ತಾರೆ ಎಂದು ಹೇಳುವ ಮೂಲಕ ಸಚಿವರು ಸ್ವತಃ ಹಿಂಸೆಗೆ ಬಹಿರಂಗವಾಗಿ ಕರೆ ನೀಡಿದ್ದಾರೆ.

ಬಾಲ್ಯನ್ ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾಗಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ ಸಹ ಕಿರಿಯ ಸಚಿವರಾಗಿದ್ದರು.

ಈ ಬಿಜೆಪಿ ಸಚಿವರು ತಮ್ಮ ಅತಿರೇಕದ ಹೇಳಿಕೆಗಳಿಂದ ಆಗಾಗ್ಗೆ ಜನರಿಂದ ಭಾರೀ ಟೀಕೆಗೊಳಗಾಗಿದ್ದಾರೆ. ಕಳೆದ ತಿಂಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ “ಮದರಾಸಾದ ಮಕ್ಕಳು” ಹಿಂಸಾಚಾರದಲ್ಲಿ ಪಾತ್ರವಹಿಸಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದರು.

ಅವರು 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಗಲಭೆಗೆ ಮುನ್ನ ನಡೆದ ದೊಡ್ಡ ಸಭೆ ಅಥವಾ ಮಹಾಪಂಚಾಯತ್‌ನಲ್ಲಿ ಕೋಮು ಪ್ರಚೋದನೆ ಭಾಷಣಗಳನ್ನು ಮಾಡಿದ ಆರೋಪ ಹೊತ್ತಿರುವ ಹಲವು ನಾಯಕರಲ್ಲಿ ಬಾಲ್ಯನ್ ಕೂಡ ಇದ್ದರು. ನಂತರ ಕೋಮು ಸಂಘರ್ಷಗಳು ಭುಗಿಲೆದ್ದವು. ಗಲಭೆಯಲ್ಲಿ ಅವರ ಪಾತ್ರದ ಕುರಿತ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಈ ಗಲಭೆಯ ವಿವಾದಾತ್ಮಕ ದಾಖಲೆಯ ಹೊರತಾಗಿಯೂ ಬಿಜೆಪಿ ಬಾಲ್ಯನ್‌ರನ್ನು ಕಣಕ್ಕಿಳಿಸಲಾಯಿತು ಮತ್ತು ಮುಜಫರ್‌ನಗರ ಕ್ಷೇತ್ರದಿಂದ 2014 ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಕಳೆದ ವರ್ಷದ ಚುನಾವಣೆಯಲ್ಲಿ ಅವರು ಮತ್ತೆ ಗೆದ್ದರು ಮತ್ತು ಅವರನ್ನು ಮಂತ್ರಿಯನ್ನಾಗಿ ಮಾಡಲಾಗಿದೆ. ಅವರು ನೋಡಿದರೆ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ಮಾಡಿದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಬೇಜವಬ್ದಾರಿ ಮಾತುಗಳನ್ನಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...