Homeಮುಖಪುಟನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸಂಜೀವ್‌ ಬಲ್ಯಾನ್‌ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

- Advertisement -
- Advertisement -

ಬೆಂಕಿ ಉಗುಳುವ ಮತ್ತು ವಿಭಜಿಸುವ ಹೇಳಿಕೆಗಳಿಗೆ ಹೆಸರುವಾಸಿಯಾದ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ “ಇದೇ ಸರಿಯಾದ ಚಿಕಿತ್ಸೆ” ಎಂದು ಘೋಷಿಸಿ ಬೆದರಿಕೆ ಹಾಕಿದ್ದಾರೆ.

ಸಿಎಎ ಪ್ರತಿಭಟನೆ ಮತ್ತು ಜೆಎನ್‌ಯು ಹಿಂಸಾಚಾರದ ನಂತರ ದೇಶಾದ್ಯಂತ ಪ್ರಸಂಶೆಗೆ ಒಳಗಾಗಿರುವ ಜೆಎನ್‌ಯು ಮತ್ತು ಜಾಮಿಯ ವಿದ್ಯಾರ್ಥಿಗಳಿಗೆ ಬುದ್ದಿ ಕಲಿಸಬೇಕೆಂದರೆ “ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಸ್ಥಾನಗಳನ್ನು ಮೀಸಲಿಡಬೇಕು” ಆಗ ಸರಿ ಹೋಗುತ್ತದೆ ಎಂದು ಸಂಜೀವ್‌ ಬಲ್ಯಾನ್‌ ಮೀರತ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ.

“ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರಲ್ಲಿ ವಿನಂತಿಸುತ್ತೇನೆ . ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಜೆಎನ್‌ಯು ಮತ್ತು ಜಾಮಿಯಾದ ವಿದ್ಯಾರ್ಥಿಗಳಿಗೆ ಒಂದೇ ಒಂದು ಚಿಕಿತ್ಸೆ ಇದೆ. ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಕೋಟಾ ಮೀಸಲಿಡಿ. ಆಗ ಎಲ್ಲರೂ ಗುಣಮುಖರಾಗುತ್ತಾರೆ ಮತ್ತೇನೂ ಇಲ್ಲ” ಎಂದು ಅವರು ಬೆದರಿಕೆ ಹಾಕಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶವು ಭಾರತದಲ್ಲಿಯೇ ಅತಿ ಹೆಚ್ಚು ಅಪರಾಧಗಳು ದಾಖಲಾಗುವ, ಅತಿ ಹೆಚ್ಚು ಗೂಂಡಾಗಳಿರುವ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗಿರುವುದರಿಂದ ಅಲ್ಲಿನ ಜನ ಈ ವಿಶ್ವವಿದ್ಯಾಲಯಗಳಿಗೆ ಬಂದರೆ ಹೊಡೆದು ಬಡಿದು ನಿಯಂತ್ರಣಕ್ಕೆ ತರುತ್ತಾರೆ ಎಂದು ಹೇಳುವ ಮೂಲಕ ಸಚಿವರು ಸ್ವತಃ ಹಿಂಸೆಗೆ ಬಹಿರಂಗವಾಗಿ ಕರೆ ನೀಡಿದ್ದಾರೆ.

ಬಾಲ್ಯನ್ ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾಗಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ ಸಹ ಕಿರಿಯ ಸಚಿವರಾಗಿದ್ದರು.

ಈ ಬಿಜೆಪಿ ಸಚಿವರು ತಮ್ಮ ಅತಿರೇಕದ ಹೇಳಿಕೆಗಳಿಂದ ಆಗಾಗ್ಗೆ ಜನರಿಂದ ಭಾರೀ ಟೀಕೆಗೊಳಗಾಗಿದ್ದಾರೆ. ಕಳೆದ ತಿಂಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ “ಮದರಾಸಾದ ಮಕ್ಕಳು” ಹಿಂಸಾಚಾರದಲ್ಲಿ ಪಾತ್ರವಹಿಸಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದರು.

ಅವರು 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಗಲಭೆಗೆ ಮುನ್ನ ನಡೆದ ದೊಡ್ಡ ಸಭೆ ಅಥವಾ ಮಹಾಪಂಚಾಯತ್‌ನಲ್ಲಿ ಕೋಮು ಪ್ರಚೋದನೆ ಭಾಷಣಗಳನ್ನು ಮಾಡಿದ ಆರೋಪ ಹೊತ್ತಿರುವ ಹಲವು ನಾಯಕರಲ್ಲಿ ಬಾಲ್ಯನ್ ಕೂಡ ಇದ್ದರು. ನಂತರ ಕೋಮು ಸಂಘರ್ಷಗಳು ಭುಗಿಲೆದ್ದವು. ಗಲಭೆಯಲ್ಲಿ ಅವರ ಪಾತ್ರದ ಕುರಿತ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಈ ಗಲಭೆಯ ವಿವಾದಾತ್ಮಕ ದಾಖಲೆಯ ಹೊರತಾಗಿಯೂ ಬಿಜೆಪಿ ಬಾಲ್ಯನ್‌ರನ್ನು ಕಣಕ್ಕಿಳಿಸಲಾಯಿತು ಮತ್ತು ಮುಜಫರ್‌ನಗರ ಕ್ಷೇತ್ರದಿಂದ 2014 ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಕಳೆದ ವರ್ಷದ ಚುನಾವಣೆಯಲ್ಲಿ ಅವರು ಮತ್ತೆ ಗೆದ್ದರು ಮತ್ತು ಅವರನ್ನು ಮಂತ್ರಿಯನ್ನಾಗಿ ಮಾಡಲಾಗಿದೆ. ಅವರು ನೋಡಿದರೆ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ಮಾಡಿದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಬೇಜವಬ್ದಾರಿ ಮಾತುಗಳನ್ನಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...