Homeಕರ್ನಾಟಕಫೋನ್ ಕದ್ದಾಲಿಕೆ: ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ - ಸಿದ್ದರಾಮಯ್ಯ ಆರೋಪ

ಫೋನ್ ಕದ್ದಾಲಿಕೆ: ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ – ಸಿದ್ದರಾಮಯ್ಯ ಆರೋಪ

ಮೊದಲು 'ಆಪರೇಷನ್ ಕಮಲ'ವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ತಮ್ಮನ್ನು ಖರೀದಿಸಲು ದುಡ್ಡಿನ ಭರವಸೆ ನೀಡಿರುವುದನ್ನು ಕೆಲವು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ, ಜೆಡಿಎಸ್ ಶಾಸಕರ ಖರೀದಿ ವ್ಯವಹಾರದಲ್ಲಿ ಮುಖ್ಯಮಂತ್ರಿಗಳೇ ಭಾಗಿಯಾಗಿದ್ದ ಅಡಿಯೋ ಇದೆ. ಆ ಬಗ್ಗೆಯೂ ತನಿಖೆ ನಡೆಯಲಿ

- Advertisement -
- Advertisement -

ಫೋನ್ ಕದ್ದಾಲಿಕೆ ಆರೋಪವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾನು ಹೇಳಿದ್ದೆನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದು ಅಪ್ಪಟ ಸುಳ್ಳು, ನಾನು ಹಾಗೆ ಒತ್ತಾಯಿಸಿರುವುದನ್ನು ಅವರು ಸಾಬೀತು ಪಡಿಸಲಿ. ಒಬ್ಬ ಮುಖ್ಯಮಂತ್ರಿ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಪೋನ್ ಕದ್ದಾಲಿಕೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದಷ್ಟೇ ನಾನು ಹೇಳಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೆರೆ ಸಂತ್ರಸ್ತರನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಸಿದ್ದರಾಮಯ್ಯನವರು “ಬಿ.ಎಸ್.ಯಡಿಯೂರಪ್ಪನವರು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದು ನನ್ನ ಕೋರಿಕೆ ಮೇಲೆ ಅಲ್ಲ, ನನಗಿರುವ ಮಾಹಿತಿ ಪ್ರಕಾರ ಗೃಹಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ” ಎಂದಿದ್ದಾರೆ.

ಮುಖ್ಯಮಂತ್ರಿಗಳು ಈ ಸತ್ಯವನ್ನು ಒಪ್ಪಿಕೊಳ್ಳುವ ಧೈರ್ಯ ತೋರಿಸಲಿ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಸಲಹೆ ಕೇಳೋದಾದ್ರೆ, ಮೊದಲು ‘ಆಪರೇಷನ್ ಕಮಲ’ವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ತಮ್ಮನ್ನು ಖರೀದಿಸಲು ದುಡ್ಡಿನ ಭರವಸೆ ನೀಡಿರುವುದನ್ನು ಕೆಲವು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ, ಜೆಡಿಎಸ್ ಶಾಸಕರ ಖರೀದಿ ವ್ಯವಹಾರದಲ್ಲಿ ಮುಖ್ಯಮಂತ್ರಿಗಳೇ ಭಾಗಿಯಾಗಿದ್ದ ಅಡಿಯೋ ಇದೆ. ಆ ಬಗ್ಗೆಯೂ ತನಿಖೆ ನಡೆಯಲಿ ಎಂದರು.

ಸಿಬಿಐ ಕೇಂದ್ರೀಯ ತನಿಖಾ ಸಂಸ್ಥೆ, ಅದರ ಮೂಲಕ ತನಿಖೆಗೆ ನನ್ನ ವಿರೋಧ ಇಲ್ಲ. ಆದರೆ ಅದು ನೇರವಾಗಿ ಗೃಹಸಚಿವರ ಅಡಿಯಲ್ಲಿ ಕೆಲಸ ಮಾಡುವ ಸಂಸ್ಥೆ. ಕಳೆದ 5 ವರ್ಷಗಳಲ್ಲಿ ಬಿಜೆಪಿ ತಮ್ಮ ರಾಜಕೀಯ ವಿರೋಧಿಗಳ ದಮನಕ್ಕೆ ಸ್ವಾಯತ್ತ ಸಂಸ್ಥೆಗಳನ್ನು ಹೇಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದಕ್ಕಾಗಿಯಷ್ಟೇ ನಮ್ಮ ಆಕ್ಷೇಪ. ಹಿಂದೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ‘’ಚೋರ್ ಬಚಾವೋ ಸಂಸ್ಥೆ’’ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ಈಗ ಅದರ ಬಗ್ಗೆ ಇಷ್ಟೊಂದು ವಿಶ್ವಾಸ-ಗೌರವ ಯಾಕೆ ಹುಟ್ಟಿಕೊಂಡಿದೆ ಎನ್ನುವುದು ನನ್ನ ಪ್ರಶ್ನೆ ಎಂದಿದ್ದಾರೆ.

ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾದಲ್ಲಿದ್ದಾಗ ಗಣಿ ಹಗರಣವೂ ಸೇರಿದಂತೆ ಯಾವ ಹಗರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲಿಲ್ಲ. ಪೋನ್ ಕದ್ದಾಲಿಕೆ ಆರೋಪದ ತನಿಖೆಯನ್ನು ನಮ್ಮದೇ ಸಿಐಡಿಗೆ ಒಪ್ಪಿಸಬಹುದಿತ್ತಲ್ಲಾ? ಈಗ ಸಿಬಿಐ ಬಗ್ಗೆ ಎಲ್ಲಿಂದ ನಂಬಿಕೆ ಬಂತು? ಇದರ ಹಿಂದಿರುವ ರಹಸ್ಯವೇನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ತಾನೇ ಸಿಎಂ ಯಡಿಯೂರಪ್ಪನವರು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...