Homeಮುಖಪುಟಕೊರೊನಾ ಸೋಂಕಿತ ಪತ್ನಿಯ ಬಗ್ಗೆ ಸಿಗದ ಮಾಹಿತಿ, ಬಡವರಿಗೆ ಈ ಸ್ಥಿತಿ ಬರದಿರಲಿ ಎಂದ ಬಿಜೆಪಿ...

ಕೊರೊನಾ ಸೋಂಕಿತ ಪತ್ನಿಯ ಬಗ್ಗೆ ಸಿಗದ ಮಾಹಿತಿ, ಬಡವರಿಗೆ ಈ ಸ್ಥಿತಿ ಬರದಿರಲಿ ಎಂದ ಬಿಜೆಪಿ ಶಾಸಕ

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಪತ್ನಿಯ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ದೊರಕುತ್ತಿಲ್ಲ ಎಂದು ಬಿಜೆಪಿ ಶಾಸಕರೊಬ್ಬರು ಅಳಲು ತೊಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಜಸ್ರಾನಾದ ಭಾರತೀಯ ಜನತಾ ಪಕ್ಷದ ಶಾಸಕ ರಾಮ್‌ಗೋಪಾಲ್ ಪಪ್ಪು ಲೋಧಿ ಮತ್ತು ಅವರ ಪತ್ನಿ ಸಂಧ್ಯಾ ಲೋಧಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇಬ್ಬರೂ ಫಿರೋಜಾಬಾದ್‌ನ ಓಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸಂಧ್ಯಾ ಲೋಧಿಯವರ ಆರೋಗ್ಯ ಪರಿಸ್ಥಿತಿ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗೆ ಆಗ್ರಾದ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಆದರೆ, ಅವರನ್ನು ಎಸ್‌ಎನ್ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಿ ಮೂರು ದಿನಗಳಾದರೂ, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿಲ್ಲ. ಅಲ್ಲಿ ಆಕೆಗೆ ಸರಿಯಾಗಿ ಆಹಾರ ಮತ್ತು ಕುಡಿಯಲು ನೀರು ಕೂಡ ದೊರಕುತ್ತಿಲ್ಲ. ಇಂತಹ ಸ್ಥಿತಿ ಬಡವರಿಗೆ ಎಂದಿಗೂ ಬರದಿರಲಿ ಎಂದು ನಾನು ಆಶಿಸುತ್ತೇನೆ ಎಂದು ವಿಡಿಯೊದಲ್ಲಿ ಅಳಲು ತೊಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಬಿಜೆಪಿ ಶಾಸಕರಾಗಿದ್ಧರೂ ಕೂಡ ಅವರ ಪತ್ನಿ ಸಂಧ್ಯಾ ಲೋಧಿ ಅವರಿಗೆ ಆಗ್ರಾದ ಆಸ್ಪತ್ರೆಯಲ್ಲಿ ಅಷ್ಟು ಸುಲಭದಲ್ಲಿ ಬೆಡ್ ದೊರೆತಿಲ್ಲ. ಆಗ್ರಾದ ಜಿಲ್ಲಾಧಿಕಾರಿ ಪ್ರಭು ಎನ್ ಸಿಂಗ್ ಅವರು ಬೆಡ್ ಕೊಡಿಸುವ ಭರವಸೆ ಇದ್ದರೂ, ಸಂಧ್ಯಾ ಲೋಧಿಯವರನ್ನು ಬೆಡ್‌ ಇಲ್ಲ ಎಂದು ಹಿಂದಿರುಗುವಂತೆ ಹೇಳಲಾಗಿತ್ತು.

ಚಿಕಿತ್ಸೆಗಾಗಿ ಪಟ್ಟ ಪಾಡು ಮತ್ತು ಭೀಕರ ಅನುಭವವನ್ನು ಎದುರಿಸಿರುವ ಬಗ್ಗೆಯೂ ಶಾಸಕರು ಮಾತನಾಡಿದ್ದಾರೆ. ಶಾಸಕನಾಗಿಯೂ ಇಂತಹ ಸ್ಥಿತಿ ನನಗೆ ಬಂದಿದೆ. ಇನ್ನು ಬಡವರ ಗತಿ ಏನು, ಅವರಿಗೆ ಎಂದಿಗೂ ಈ ಸ್ಥಿತಿ ಬರಬಾರದು ಎಂದಿದ್ದಾರೆ ಶಾಸಕ ರಾಮ್‌ಗೋಪಾಲ್ ಪಪ್ಪು ಲೋಧಿ.

ಶಾಸಕರ ಪತ್ನಿಯನ್ನು ಆಗ್ರಾದ ವೈದ್ಯಕೀಯ ಕಾಲೇಜಿನ ಕೋವಿಡ್ ವಾರ್ಡ್‌ನಲ್ಲಿ ದಾಖಲಿಸಿ ಮೂರು ದಿನಗಳಾಗಿವೆ. ಆದರೆ ಮೂರು ದಿನಗಳಾದರೂ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಶಾಸಕರಿಗೆ ಸಾಧ್ಯವಾಗಿಲ್ಲ. “ನನ್ನ ಹೆಂಡತಿ ಹೇಗಿದ್ದಾಳೆಂದು ದೇವರಿಗೆ ಮಾತ್ರ ತಿಳಿದಿದೆ. ಆಕೆಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಬಡವರಿಗೆ ಇಂತಹ ಸ್ಥಿತಿ ಎಂದಿಗೂ ಬರಬಾರದು ಎಂದು ನಾನು ಆಶಿಸುತ್ತೇನೆ ”ಎಂದು ರಾಮ್‌ಗೋಪಾಲ್ ಲೋಧಿ ಹೇಳಿದ್ದಾರೆ.


ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...