Homeಮುಖಪುಟಬಿಜೆಪಿ ಶಾಸಕ ಸೇರಿ 16 ಮಂದಿಯ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಬಿಜೆಪಿ ಶಾಸಕ ಸೇರಿ 16 ಮಂದಿಯ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಬದೌನ್‌ನಲ್ಲಿ ಬಿಜೆಪಿ ಶಾಸಕ ಹರೀಶ್ ಶಾಕ್ಯಾ, ಅವರ ಸಹೋದರ ಸತೇಂದ್ರ ಶಾಕ್ಯಾ ಸೇರಿದಂತೆ 16 ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಹಾಗೂ ಮತ್ತಿತರ ಆರೋಪಗಳ ಮೇಲೆ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಬದೌನ್‌ನ ಸಿವಿಲ್ ಲೈನ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಅತ್ಯಾಚಾರದ ಜೊತೆ ಭೂಕಬಳಿಕೆ ಸೇರಿದಂತೆ ಇತರ ಆರೋಪಗಳೂ ಇವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬದೌನ್‌ ಜಿಲ್ಲೆಯ ಜಾನಿ ಕೊತ್ವಾಲಿ ಪ್ರದೇಶದ ಗ್ರಾಮದ ನಿವಾಸಿಗಳಾದ ಸಂತ್ರಸ್ತೆಯ ಕುಟುಂಬವು ಕೋಟಿ ಮೌಲ್ಯದ ಜಮೀನು ಹೊಂದಿದೆ. ಅದನ್ನು ಕಡಿಮೆ ಬೆಲೆಗೆ ಖರೀದಿಸಲು ಜಿಲ್ಲೆಯ ಬಿಲ್ಸಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಹರೀಶ್ ಶಾಕ್ಯಾ ಮುಂದಾಗಿದ್ದರು. ಸಂತ್ರಸ್ತೆಯ ಕುಟುಂಬ ಕಡಿಮೆ ಬೆಲೆಗೆ ಜಮೀನು ಮಾರಲು ನಿರಾಕರಿಸಿದಾಗ ಬೆದರಿಕೆ ಹಾಕಿ, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

“ಶಾಸಕ ಮತ್ತು ಅವರ ತಂಡ ನನ್ನ ಪತಿಯ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಅವರನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದರು. ನಂತರ ನಮ್ಮ ನಡುವಿನ ಸಮಸ್ಯೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಶಾಸಕ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ಅಲ್ಲಿ ಶಾಸಕ, ಅವರ ಸಹೋದರ ಮತ್ತು ಇತರರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜಮೀನಿಗೆ ಸಂಬಂಧಿಸಿದ ಮೂರು ಒಪ್ಪಂದಗಳಿಗೆ ಒತ್ತಾಯಪೂರ್ವಕವಾಗಿ ಸಹಿ ಹಾಕಿಸಿದ್ದಾರೆ” ಎಂದು ಸಂತ್ರಸ್ತೆ ಆರೋಪಿಸಿದ್ದಾಗಿ ವರದಿಗಳು ವಿವರಿಸಿದೆ.

ಸಂತ್ರಸ್ತೆ ಶಾಸಕನ ವಿರುದ್ದ ದೂರು ನೀಡಲು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತೆರಳಿದ್ದರು. ನ್ಯಾಯಾಲಯವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದೆ. ಪೊಲೀಸರು ಶಾಸಕ ಮತ್ತು ಇತರ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

“ಆರೋಪಿಗಳು ಜಮೀನು ಮಾರಾಟಕ್ಕೆ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ಸೋದರ ಸಂಬಂಧಿ ರೋಹಿತ್‌ನನ್ನು ಅಪಹರಿಸಿ, ಥಳಿಸಿದ್ದರು. ಇದಾದ ಬಳಿಕ ಆಸಗ್ಟ್‌ 2022ರಲ್ಲಿ ರೋಹಿತ್ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ನ್ಯಾಯಕೋರಿ ನಾವು ಪೊಲೀಸರ ಬಳಿ ಹೋಗಿದ್ದೆವು. ಆದರೆ, ಪೊಲೀಸರು ನಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳು ನಮ್ಮ ಬೆಳೆಯನ್ನು ನಾಶ ಮಾಡಿದ್ದಾರೆ. ಕಡಿಮೆ ಬೆಲೆಗೆ ಜಮೀನು ಮಾರುವಂತೆ ಒತ್ತಾಯಿಸಿ ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಶಾಸಕ ಏನಂದ್ರು?

ಶಾಸಕ ಹರೀಶ್ ಶಾಕ್ಯ ಅವರು ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದು, ಆಧಾರ ರಹಿತ ಎಂದು ಹೇಳಿದ್ದಾರೆ. ಇದು ತನ್ನ ಹೆಸರಿಗೆ ಕಳಂಕ ತರುವ ಸಂಚು. ಪೊಲೀಸ್ ಮತ್ತು ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ” ಎಂದಿದ್ದಾರೆ.

ನ್ಯಾಯಾಲಯದ ಆದೇಶದ ಬಳಿಕ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಗಳ ಪಾಲಿಗ್ರಾಫ್ ಮತ್ತು ನಾರ್ಕೋ ಪರೀಕ್ಷೆ ಸೇರಿದಂತೆ ಸಮಗ್ರ ತನಿಖೆ ನಡೆಸುವಂತೆ ಸಂತ್ರಸ್ತೆಯ ಕುಟುಂಬ ಆಗ್ರಹಿಸಿದೆ.

ಇದನ್ನೂ ಓದಿ : ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...