Homeಕರ್ನಾಟಕಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಮಹಿಳೆ ವಿರುದ್ಧವೆ ವೈಟ್‌ಫೀಲ್ಡ್‌‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ

- Advertisement -
- Advertisement -

ತನ್ನ ಅಹವಾಲು ನೀಡಲು ಅರ್ಜಿಯೊಂದಿಗೆ ಬಂದ ಮಹಿಳೆಯೊಬ್ಬರ ವಿರುದ್ಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಕಿರುಚಾಡಿ, ಮಹಿಳೆ ಎಂಬುವುದನ್ನು ನೋಡದೆ ಕೆಟ್ಟದಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಶಾಸಕ ಲಿಂಬಾವಳಿ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದು ವಿಡಿಯೊದಲ್ಲಿ ಸೆರೆಯಾಗಿದೆ.

ಅರ್ಜಿಯೊಂದನ್ನು ತಂದು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಪ್ರಯತ್ನಿಸಿದ ಮಹಿಳೆಯಿಂದ ಮಹದೇವಪುರ ಬಿಜೆಪಿ ಶಾಸಕರೂ ಆಗಿರುವ ಲಿಂಬಾವಳಿ ಅವರು ಅರ್ಜಿಯನ್ನು ಕಿತ್ತುಕೊಂಡಿದ್ದಾರೆ. ಮಹಿಳೆಯ ವಿರುದ್ಧ ಆಕ್ರೋಶದಿಂದ ಕಿರುಚಿದ್ದಾರೆ. ನಂತರ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಶಾಸಕರ ಈ ನಡೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ವರ್ತೂರು ಕೆರೆಯ ಕೋಡಿ ಬಿದ್ದು ನೆರೆ ಉಂಟಾಗಿತ್ತು. ಹೀಗಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಅರವಿಂದ್ ಲಿಂಬಾವಳಿ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಅರವಿಂದ್ ಲಿಂಬಾವಳಿ ಮುಂದೆ ಅರ್ಜಿ ಹಿಡಿದುಕೊಂಡು ಬರುವ ಮಹಿಳೆ, ತನ್ನ ಮಾತನನ್ನು ಕೇಳುವಂತೆ ವಿನಂತಿಸುತ್ತಾರೆ. ಆದರೆ ಶಾಸಕ ಅದನ್ನು ಹೇಳದೆ ಅರ್ಜಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಾರೆ. ಆದ್ರೆ ಮಹಿಳೆ ಪತ್ರ ನೀಡದೇ ತಮ್ಮ ಮಾತು ಕೇಳಿ ಎಂದು ಒತ್ತಾಯಿಸಿದಾಗ ಶಾಸಕ ಕೋಪಗೊಂಡು, “ಏ ಇವರನ್ನು ಕರ್ಕೊಂಡು ಹೋಗಿ. ಪೊಲೀಸ್ ಠಾಣೆಯಲ್ಲಿ ಕೂರಿಸಿ” ಎಂದು ಕೂಗಿ ಹೇಳುತ್ತಾರೆ.

ತುಸು ಮುಂದೆ ಹೋಗಿ ಮತ್ತೆ ವಾಪಾಸು ಬಂದು ಮಹಿಳೆಯ ಕೈಯಲ್ಲಿದ್ದ ಅರ್ಜಿಯನ್ನು ಬಲವಂತವಾಗಿ ಕಸಿದುಕೊಳ್ಳುತ್ತಾರೆ. ಒತ್ತುವರಿ ಮಾಡ್ಕೊಂಡು ಬರ್ತಿರಾ, ನಾಚಿಕೆ ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾರೆ. “ಏಯ್ ಸುಮ್ನಿರು, ಇಲ್ಲವೆಂದರೆ ಬೇರೆ ಭಾಷೆ ಬರುತ್ತೆ. ಏನ್ ಮಾತನಾಡಬೇಕು, ಸುಮ್ನೆ ಬಿಡಲ್ಲ ನಿನ್ನ. ನ್ಯಾಯ ಕೇಳಲು ಬಂದಿದ್ದೀನಿ ಅಂತ ಹೇಳಲು ನಾಚಿಕೆ ಆಗಲ್ವಾ ನಿನಗೆ?” ಎಂದು ಮಹಿಳೆಯೊಂದಿಗೆ ಏಕವಚನದಲ್ಲೇ ಮಾತನಾಡುತ್ತಾರೆ.

ಈ ವೇಳೆ ಮಹಿಳೆ ಕೂಡಾ ಶಾಸಕನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ಬಳಿ ದಾಖಲೆಗಳಿದ್ದು, ನಾನು ನಮ್ಮ ಶಾಸಕರ ಬಳಿಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. “ಮಹಿಳೆ ಜೊತೆಗೆ ಹೇಗೆ ಮಾತನಾಡುತ್ತಾರೆ, ಮಾನ ಮರ್ಯಾದೆ ಇಲ್ಲವೆ. ನಾನು ನ್ಯಾಯ ಕೇಳಲು ಬಂದಿದ್ದು, ಒಬ್ಬ ಮಹಿಳೆ ಅನ್ನೋದನ್ನು ಕೂಡಾ ನೋಡದೆ ಈ ರೀತಿ ಮಾತನಾಡಿದರೆ ಹೇಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ಇದರ ನಂತರ ಮಹಿಳಾ ಪೊಲೀಸರೊಬ್ಬರು ಬಂದು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ಪೊಲೀಸರು ಮಹಿಳೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಕೂಗಾಡದೆ ಆರತಿ ಎತ್ತಬೇಕಿತ್ತೆ?: ಶಾಸಕನ ನಡೆ ಸಮರ್ಥಿಸಿಕೊಂಡ ವೈಟ್‌ಫೀಲ್ಡ್‌‌ ಎಸಿಪಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವೈಟ್‌ಫೀಲ್ಡ್‌ ಎಸಿಪಿ, “ಮಹಿಳೆಯ ಮೇಲೆ ಎಫ್‌ಐಆರ್‌ ಆಗಿರುವುದು ನಿಜ. ರಾಜಕಾಲುವೆಯನ್ನು ಒತ್ತುವರಿ ಮಾಡಿ ಕಾಂಪೋಂಡ್‌ ಕಟ್ಟಿದ್ದರಿಂದ ನೀರು ಸರಾಗವಾಗಿ ಹರಿಯದೆ 300 ಮನೆಗಳಿಗೆ ನೀರು ನುಗ್ಗಿದೆ. ಸಂತ್ರಸ್ತ ಜನರು ಊಟ ತಿಂಡಿಗಾಗಿ ಒದ್ದಾಡ್ತಾ ಇದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ದೂರು ಕೊಟ್ಟಿದ್ದರಿಂದ ಎಫ್‌ಐಆರ್‌ ದಾಖಲಾಗಿದೆ” ಎಂದು ಹೇಳಿದ್ದಾರೆ.

ಶಾಸಕನ ಜೊತೆಗೆ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಎಫ್‌ಐಆರ್‌ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸಿಪಿ,“ಬಿಬಿಎಂಪಿ ಕಂದಾಯ ಅಧಿಕಾರಿಗಳ ದೂರಿನ ಆಧಾರದಲ್ಲಿ ಎಫ್‌ಐಆರ್‌‌ ಆಗಿದೆ. ಶಾಸಕರು ಮಾತನಾಡಿರುವುದು ಸಾರ್ವಜನಿಕರ ಪರವಾಗಿ, ಆದರೆ ಅದನ್ನು ಯಾರೂ ಹೇಳುತ್ತಿಲ್ಲ” ಎಂದು ಹೇಳಿದ್ದಾರೆ.

“ಶಾಸಕರು ಕೂಗಾಡದೆ ಏನ್‌ ಮಾಡಬೇಕಿತ್ತು? ಆರತಿ ಎತ್ತಬೇಕಿತ್ತೆ ಅವರಿಗೆ? ಈ ಮಹಿಳೆ ರಾಜಕಾಲುವೆ ಮೇಲೆ ಕಾಂಪೋಂಡ್‌ ಹಾಕಿದ್ದರಿಂದ, ಮುನ್ನೂರು ಮನೆಗಳಿಗೆ ಊಟ-ತಿಂಡಿ ಇಲ್ಲದೆ ಒದ್ದಾಡ್ತಾ ಇದ್ದಾರೆ. ಅವರ ವಸ್ತುಗಳೆಲ್ಲವೂ ನೆನೆದು ಹೋಗಿವೆ. ಅಲ್ಲಿ ಆಗಿರುವುದನ್ನು ಬಂದು ನೋಡಿ, ನಂತರ ಮಾತನಾಡಿ. ಬರಿ ಶಾಸಕರು ಕೂಗಾಡಿರುವುದನ್ನು ಹೇಳುವುದಲ್ಲ” ಎಂದು ಎಸಿಪಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಸಾಮಾಜಿಕ ಮಾಧ್ಯಮಗಳಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಕಾನೂನು ಬಾಹಿರವಾಗಿ ಕಾಂಪೌಂಡ್ ಕಟ್ಟಿದ್ದರೂ, ಶಾಸಕರು ಈ ರೀತಿ ಕೂಗಾಡಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತವಾಗಿದೆ. “ಜನಪ್ರತಿನಿಧಿಯೊಬ್ಬ ತಟಸ್ಥವಾಗಿದ್ದು ಮಹಿಳೆಯ ಅಹವಾಲನ್ನು ಕೂಡಾ ಕೇಳಬೇಕಾತ್ತು. ಮಹಿಳೆ ಕೂಡಾ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ. ಅದನ್ನು ಪರಿಶೀಲಿಸಬೇಕಿತ್ತು” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಲಿಂಬಾವಳಿ ಅವರ ನಡೆಯನ್ನು ಕಾಂಗ್ರೆಸ್ ವಿರೋಧಿಸಿದ್ದು, “ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಬಿಜೆಪಿ ಮತ್ತು ಬಸವರಾಜ್ ಬೊಮ್ಮಾಯಿ ಅವರೆ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಶಾಸಕರ ನಡೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕವು ದೂರು ದಾಖಲಿಸಲಿದೆ ಎಂದು ಹೇಳಿದೆ. “ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಆಯೋಗದಲ್ಲಿ ಶಾಸಕರ ವಿರುದ್ಧ ಇಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದಿಂದ ದೂರನ್ನು ದಾಖಲಿಸಲಾಗುತ್ತಿದೆ” ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ಜೂನ್ ತಿಂಗಳಲ್ಲಿ ಶಾಸಕ ಲಿಂಬಾವಳಿ ಅವರ ಮಗಳು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಈ ವಿಡಿಯೊ ಕೂಡಾ ಇದೀಗ ಮತ್ತೊಮ್ಮೆ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...