Homeಕರ್ನಾಟಕಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಮಹಿಳೆ ವಿರುದ್ಧವೆ ವೈಟ್‌ಫೀಲ್ಡ್‌‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ

- Advertisement -
- Advertisement -

ತನ್ನ ಅಹವಾಲು ನೀಡಲು ಅರ್ಜಿಯೊಂದಿಗೆ ಬಂದ ಮಹಿಳೆಯೊಬ್ಬರ ವಿರುದ್ಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಕಿರುಚಾಡಿ, ಮಹಿಳೆ ಎಂಬುವುದನ್ನು ನೋಡದೆ ಕೆಟ್ಟದಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಶಾಸಕ ಲಿಂಬಾವಳಿ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದು ವಿಡಿಯೊದಲ್ಲಿ ಸೆರೆಯಾಗಿದೆ.

ಅರ್ಜಿಯೊಂದನ್ನು ತಂದು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಪ್ರಯತ್ನಿಸಿದ ಮಹಿಳೆಯಿಂದ ಮಹದೇವಪುರ ಬಿಜೆಪಿ ಶಾಸಕರೂ ಆಗಿರುವ ಲಿಂಬಾವಳಿ ಅವರು ಅರ್ಜಿಯನ್ನು ಕಿತ್ತುಕೊಂಡಿದ್ದಾರೆ. ಮಹಿಳೆಯ ವಿರುದ್ಧ ಆಕ್ರೋಶದಿಂದ ಕಿರುಚಿದ್ದಾರೆ. ನಂತರ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಶಾಸಕರ ಈ ನಡೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ವರ್ತೂರು ಕೆರೆಯ ಕೋಡಿ ಬಿದ್ದು ನೆರೆ ಉಂಟಾಗಿತ್ತು. ಹೀಗಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಅರವಿಂದ್ ಲಿಂಬಾವಳಿ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಅರವಿಂದ್ ಲಿಂಬಾವಳಿ ಮುಂದೆ ಅರ್ಜಿ ಹಿಡಿದುಕೊಂಡು ಬರುವ ಮಹಿಳೆ, ತನ್ನ ಮಾತನನ್ನು ಕೇಳುವಂತೆ ವಿನಂತಿಸುತ್ತಾರೆ. ಆದರೆ ಶಾಸಕ ಅದನ್ನು ಹೇಳದೆ ಅರ್ಜಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಾರೆ. ಆದ್ರೆ ಮಹಿಳೆ ಪತ್ರ ನೀಡದೇ ತಮ್ಮ ಮಾತು ಕೇಳಿ ಎಂದು ಒತ್ತಾಯಿಸಿದಾಗ ಶಾಸಕ ಕೋಪಗೊಂಡು, “ಏ ಇವರನ್ನು ಕರ್ಕೊಂಡು ಹೋಗಿ. ಪೊಲೀಸ್ ಠಾಣೆಯಲ್ಲಿ ಕೂರಿಸಿ” ಎಂದು ಕೂಗಿ ಹೇಳುತ್ತಾರೆ.

ತುಸು ಮುಂದೆ ಹೋಗಿ ಮತ್ತೆ ವಾಪಾಸು ಬಂದು ಮಹಿಳೆಯ ಕೈಯಲ್ಲಿದ್ದ ಅರ್ಜಿಯನ್ನು ಬಲವಂತವಾಗಿ ಕಸಿದುಕೊಳ್ಳುತ್ತಾರೆ. ಒತ್ತುವರಿ ಮಾಡ್ಕೊಂಡು ಬರ್ತಿರಾ, ನಾಚಿಕೆ ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾರೆ. “ಏಯ್ ಸುಮ್ನಿರು, ಇಲ್ಲವೆಂದರೆ ಬೇರೆ ಭಾಷೆ ಬರುತ್ತೆ. ಏನ್ ಮಾತನಾಡಬೇಕು, ಸುಮ್ನೆ ಬಿಡಲ್ಲ ನಿನ್ನ. ನ್ಯಾಯ ಕೇಳಲು ಬಂದಿದ್ದೀನಿ ಅಂತ ಹೇಳಲು ನಾಚಿಕೆ ಆಗಲ್ವಾ ನಿನಗೆ?” ಎಂದು ಮಹಿಳೆಯೊಂದಿಗೆ ಏಕವಚನದಲ್ಲೇ ಮಾತನಾಡುತ್ತಾರೆ.

ಈ ವೇಳೆ ಮಹಿಳೆ ಕೂಡಾ ಶಾಸಕನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ಬಳಿ ದಾಖಲೆಗಳಿದ್ದು, ನಾನು ನಮ್ಮ ಶಾಸಕರ ಬಳಿಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. “ಮಹಿಳೆ ಜೊತೆಗೆ ಹೇಗೆ ಮಾತನಾಡುತ್ತಾರೆ, ಮಾನ ಮರ್ಯಾದೆ ಇಲ್ಲವೆ. ನಾನು ನ್ಯಾಯ ಕೇಳಲು ಬಂದಿದ್ದು, ಒಬ್ಬ ಮಹಿಳೆ ಅನ್ನೋದನ್ನು ಕೂಡಾ ನೋಡದೆ ಈ ರೀತಿ ಮಾತನಾಡಿದರೆ ಹೇಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ಇದರ ನಂತರ ಮಹಿಳಾ ಪೊಲೀಸರೊಬ್ಬರು ಬಂದು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ಪೊಲೀಸರು ಮಹಿಳೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಕೂಗಾಡದೆ ಆರತಿ ಎತ್ತಬೇಕಿತ್ತೆ?: ಶಾಸಕನ ನಡೆ ಸಮರ್ಥಿಸಿಕೊಂಡ ವೈಟ್‌ಫೀಲ್ಡ್‌‌ ಎಸಿಪಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವೈಟ್‌ಫೀಲ್ಡ್‌ ಎಸಿಪಿ, “ಮಹಿಳೆಯ ಮೇಲೆ ಎಫ್‌ಐಆರ್‌ ಆಗಿರುವುದು ನಿಜ. ರಾಜಕಾಲುವೆಯನ್ನು ಒತ್ತುವರಿ ಮಾಡಿ ಕಾಂಪೋಂಡ್‌ ಕಟ್ಟಿದ್ದರಿಂದ ನೀರು ಸರಾಗವಾಗಿ ಹರಿಯದೆ 300 ಮನೆಗಳಿಗೆ ನೀರು ನುಗ್ಗಿದೆ. ಸಂತ್ರಸ್ತ ಜನರು ಊಟ ತಿಂಡಿಗಾಗಿ ಒದ್ದಾಡ್ತಾ ಇದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ದೂರು ಕೊಟ್ಟಿದ್ದರಿಂದ ಎಫ್‌ಐಆರ್‌ ದಾಖಲಾಗಿದೆ” ಎಂದು ಹೇಳಿದ್ದಾರೆ.

ಶಾಸಕನ ಜೊತೆಗೆ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಎಫ್‌ಐಆರ್‌ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸಿಪಿ,“ಬಿಬಿಎಂಪಿ ಕಂದಾಯ ಅಧಿಕಾರಿಗಳ ದೂರಿನ ಆಧಾರದಲ್ಲಿ ಎಫ್‌ಐಆರ್‌‌ ಆಗಿದೆ. ಶಾಸಕರು ಮಾತನಾಡಿರುವುದು ಸಾರ್ವಜನಿಕರ ಪರವಾಗಿ, ಆದರೆ ಅದನ್ನು ಯಾರೂ ಹೇಳುತ್ತಿಲ್ಲ” ಎಂದು ಹೇಳಿದ್ದಾರೆ.

“ಶಾಸಕರು ಕೂಗಾಡದೆ ಏನ್‌ ಮಾಡಬೇಕಿತ್ತು? ಆರತಿ ಎತ್ತಬೇಕಿತ್ತೆ ಅವರಿಗೆ? ಈ ಮಹಿಳೆ ರಾಜಕಾಲುವೆ ಮೇಲೆ ಕಾಂಪೋಂಡ್‌ ಹಾಕಿದ್ದರಿಂದ, ಮುನ್ನೂರು ಮನೆಗಳಿಗೆ ಊಟ-ತಿಂಡಿ ಇಲ್ಲದೆ ಒದ್ದಾಡ್ತಾ ಇದ್ದಾರೆ. ಅವರ ವಸ್ತುಗಳೆಲ್ಲವೂ ನೆನೆದು ಹೋಗಿವೆ. ಅಲ್ಲಿ ಆಗಿರುವುದನ್ನು ಬಂದು ನೋಡಿ, ನಂತರ ಮಾತನಾಡಿ. ಬರಿ ಶಾಸಕರು ಕೂಗಾಡಿರುವುದನ್ನು ಹೇಳುವುದಲ್ಲ” ಎಂದು ಎಸಿಪಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಸಾಮಾಜಿಕ ಮಾಧ್ಯಮಗಳಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಕಾನೂನು ಬಾಹಿರವಾಗಿ ಕಾಂಪೌಂಡ್ ಕಟ್ಟಿದ್ದರೂ, ಶಾಸಕರು ಈ ರೀತಿ ಕೂಗಾಡಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತವಾಗಿದೆ. “ಜನಪ್ರತಿನಿಧಿಯೊಬ್ಬ ತಟಸ್ಥವಾಗಿದ್ದು ಮಹಿಳೆಯ ಅಹವಾಲನ್ನು ಕೂಡಾ ಕೇಳಬೇಕಾತ್ತು. ಮಹಿಳೆ ಕೂಡಾ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ. ಅದನ್ನು ಪರಿಶೀಲಿಸಬೇಕಿತ್ತು” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಲಿಂಬಾವಳಿ ಅವರ ನಡೆಯನ್ನು ಕಾಂಗ್ರೆಸ್ ವಿರೋಧಿಸಿದ್ದು, “ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಬಿಜೆಪಿ ಮತ್ತು ಬಸವರಾಜ್ ಬೊಮ್ಮಾಯಿ ಅವರೆ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಶಾಸಕರ ನಡೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕವು ದೂರು ದಾಖಲಿಸಲಿದೆ ಎಂದು ಹೇಳಿದೆ. “ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಆಯೋಗದಲ್ಲಿ ಶಾಸಕರ ವಿರುದ್ಧ ಇಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದಿಂದ ದೂರನ್ನು ದಾಖಲಿಸಲಾಗುತ್ತಿದೆ” ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ಜೂನ್ ತಿಂಗಳಲ್ಲಿ ಶಾಸಕ ಲಿಂಬಾವಳಿ ಅವರ ಮಗಳು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಈ ವಿಡಿಯೊ ಕೂಡಾ ಇದೀಗ ಮತ್ತೊಮ್ಮೆ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...