Homeಮುಖಪುಟಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

- Advertisement -
- Advertisement -

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲು ಮನವಿ ಮಾಡಿದರೆ ಶೇಕಡ 20ರಷ್ಟು ಕಮಿಷನ್ ಕೊಡಬೇಕೆಂದು ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ.ನಾಗೇಶ್ ಕೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಆಡಿಯೋದಲ್ಲಿರುವ ಮಾತುಗಳು ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹೀಗೆ ಮಾತನಾಡಿರುವುದು ಅಕ್ರೋಶಕ್ಕೆ ಕಾರಣವಾಗಿದೆ. ಕೊರೊನ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿರುವಾಗ ಬಿಜೆಪಿ ಕಾರ್ಯಕರ್ತ ಉಮಾಶಂಕರ್ ಎಂಬಾತ ನಮ್ಮ ಊರಿಗೆ ಆಹಾರದ ಕಿಟ್ ಗಳನ್ನು ವಿತರಿಸಬೇಕೆಂದು ಮನವಿ ಮಾಡಿದಾಗ ಆಗುತ್ತೆ ಆಗಲ್ಲ ಎಂದಷ್ಟೇ ಉತ್ತರ ಕೊಡಬಹುದಿತ್ತು. ಆದರೆ ಕಮಿಷನ್ ಕೊಡಬೇಕೆಂದು ತಾಕೀತು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಆಡಿಯೋ ಕೇಳಿ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ: ಆಡಿಯೋ ವೈರಲ್

Posted by Naanu Gauri on Wednesday, April 29, 2020

ವೈರಲ್‌ ಆಡಿಯೋದ ಸಂಭಾಷಣೆ ಕೆಳಗಿನಂತಿದೆ.

ಕಾರ್ಯಕರ್ತ:’ಅಣ್ಣಾ ನಾನು,
ಶಾಸಕ: ಹೇಳು ಉಮಾಶಂಕರ
ಕಾರ್ಯಕರ್ತ: ಅಣ್ಣಾ ಊಟ ಆಯ್ತ ಅಣ್ಣಾ
ಕಾರ್ಯಕರ್ತ: ನಗುತ್ತ ಅಣ್ಣಾ ಸಮ್ಮೂರಿಗೂ ಏನಾದ್ರು ನೋಡ್ಬೇಕಾಗಿತ್ತಣ್ಣಾ
ಶಾಸಕ :ಏನ್ ನಾ
ಕಾರ್ಯಕರ್ತ: ಅದೇ ಆಹಾರದ ಕಿಟ್ ಏನಾದ್ರೂ…ವಿತರಣೆ ಮಾ.
ಶಾಸಕ: ‘ಒಂದ್ ಕೆಲ್ಸ ಮಾಡು, ನಿಮಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲಾ 20 ಪರ್ಸೆಂಟ್ ದುಡ್ ತಂದ್ಕೊಡಿ ಕೊಡ್ತಿನಿ
ಅಣ್ಣಾ
ನಿಮ್ಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲೋ ಅದ್ಕೆಎಲ್ಲಾ ಎಂಎಲ್ಎ ಗಳು 20 ಪರ್ಸೆಂಟ್ ಬಸೂಲಿ ಮಾಡ್ತಾರಲ್ಲ ಹಂಗೆ ನೀವು ತಂಗಂಡ್ ಬಂದ್ ಕೊಡಿ 20 ಪರ್ಷೆಂಟ್ ಕೊಟ್ಬಿಡಿ’
ಕಾರ್ಯಕರ್ತ: ಕೆಲ್ಸ ಎಲ್ಲಣ್ಣ, ಯಾವ್ ಕೆಲ್ಸನಣ್ಣ, ನಗು
ಶಾಸಕ: ಕೆಲ್ಸ ಕೊಟ್ಟಿರೋದೆಲ್ಲ ನೀನ್ ಯಾವ್ದೋ ಒಂದು ಕೆಲ್ಸ ಮಾಡ್ತೀದ್ದೀಯ ನನಗೆ ಗೊತ್ತಿದೆ’
ಕಾರ್ಯಕರ್ತ: ‘ಇಲ್ಲ ಕಣಣ್ಣಾ ನನ್ಗೆ ಯಾವುದು ಕೊಡ್ಸಿಲ್ಲ
ಶಾಸಕ: ಕೊಡ್ಸಿಲ್ಲ, ಅವ್ರು ಕೊಡ್ಸಿರಬೇಕು, ಬೆಸ್ಟ್ ನಿಮಗೆಲ್ಲ ಸಹಾಯ ಮಾಡ್ತೀವಲ್ಲ  ಅವಾಗ 30 ಪರ್ಷೆಂಟ್ ಕಮಿಷನ್ ಹೊಡೀಬೇಕು ನಾವು
ಕಾರ್ಯಕರ್ತ: ನನಗೆ ಯಾರು ಕೊಡ್ಸಿಲ್ಲಣ್ಣ ಅವ್ರು
ಶಾಸಕ ‘ಸರಿ ಬಿಡು’.

ಹೀಗೆ ಇಬ್ಬರ ನಡುವೆ ಸಂಭಾಷಣೆ ನಡೆದು ಆಡಿಯೋ ಮುಕ್ತಾಯವಾಗುತ್ತದೆ. ಕೇವಲ 47 ಸೆಕೆಂಡ್ ಇರುವ ಆಡಿಯೋದಲ್ಲಿ ಕಾರ್ಯಕರ್ತರಿಗೆ ಕೆಲಸ ಕೊಡಿಸಿರುವ ವಿಷಯ, 20 ಪರ್ಸೆಂಟ್ ಕಮಿಷನ್ ಕೊಡಬೇಕೆಂಬುದು ಮತ್ತು ಬೇರೆ ಶಾಸಕರು 30 ಪರ್ಸೆಂಟ್ ಕಮಿಷನ್ ಹೊಡಿತಾರೆ ಎಂಬ ವಿಷಯ ಪ್ರಸ್ತಾಪವಾಗಿದೆ. ಇದು ಬೇರೆಯವರು ಲೂಟಿ ಮಾಡುತ್ತಿದ್ದಾರೆ. ತನಗೇನೂ ಸಿಗುತ್ತಿಲ್ಲ ಎಂಬ ಬೇಸರ ನೋವು ಹತಾಶೆಯನ್ನು ಹೊರಹಾಕಿದಂತೆ ನಾಗೇಶ್ ಮಾತುಗಳು ಇವೆ.  ಕೊರೊನ ಸಂಕಟ ಸಮಯದಲ್ಲಿ ಶಾಸಕರು ಕಮಿಷನ್ ಹೊಡಿಯುತ್ತಿದ್ದಾರೆ ಆರೋಪ ಕೇಳಿಬಂದಿರುವ ನಡುವೆಯೇ ಆಹಾರದ ಕಿಟ್ ಗಳನ್ನು ವಿತರಿಸುವಲ್ಲಿ ಬಾರಿ ಪ್ರಮಾಣದ ಗೋಲ್ ಮಾಲ್ ನಡೆಯುತ್ತಿದೆ ಎಂಬುದಕ್ಕೆ ಆಡಿಯೋ ಸಾಕ್ಷ್ಯ ನೀಡುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ತಮ್ಮ ಪೋಟೋಗಳನ್ನು ಆಹಾರದ ಕಿಟ್‌ಗಳ ಮೇಲೆ ಹಾಕಿಕೊಂಡು ವಿತರಿಸಿದರು. ಶಾಸಕ ಬಿ.ಸಿ.ನಾಗೇಶ್ ಮಾತುಗಳಲ್ಲಿ ವ್ಯಕ್ತವಾಗುವ ಅಂಶವೆಂದರೆ ಶಾಸಕರ ಬಳಿ ಸಹಾಯ ಮತ್ತು ಕೆಲಸ ಪಡೆದಿರುವ ವ್ಯಕ್ತಿಗಳು ಆಹಾರದ ಕಿಟ್ ಗಳಿಗೆ ಹಣ ತೆತ್ತಿದ್ದಾರೆ. ಗುತ್ತಿಗೆದಾರರಿಂದ ಹಣವೂ ಬಂದಿದೆ. ಆಹಾರದ ಕಿಟ್ ಗಳು ಲಭ್ಯವಾಗಿವೆ. ಇದರಿಂದ  ಬಿಜೆಪಿಯ ಬಹುತೇಕ ಶಾಸಕರು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲು ಸಾಧ್ಯವಾಗಿದೆ ಎಂಬುದರತ್ತ ನಾಗೇಶ ಮಾತುಗಳು ಬೊಟ್ಟುಮಾಡಿ ತೋರಿಸುತ್ತವೆ.

ದೇಶಭಕ್ತಿ, ಸೇವೆ ಎಂದೆಲ್ಲಾ ಹೇಳಿಕೊಳ್ಳುವ ಬಿಜೆಪಿ ಮುಖಂಡರ ಪೊಳ್ಳುತನವನ್ನು ಆಡಿಯೋ ಬಹಿರಂಗಗೊಳಿಸಿದೆ. ಕೊರೊನ ಸಂಕಷ್ಟದಲ್ಲೂ ಹಣ ಮಾಡುವುದರಲ್ಲಿ ಶಾಸಕರು ನಿರತರಾಗಿದ್ದಾರೆ. ಜನ ಸೇವೆ, ಜನರ ಕೆಲಸ ದೇವರ ಕೆಲಸ ಇವೆಲ್ಲ ಕೇವಲ ಬಾಯಿಯಲ್ಲಿ ಹೇಳುವುದಕ್ಕೆ ಮಾತ್ರ. ಗಾದೆ ಹೇಳೋಕಾಯ್ತು ಬಾನ ಉಣ್ಣೋಕಾಯ್ತು ಎಂಬಂತಿದೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...