Homeಮುಖಪುಟಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

- Advertisement -
- Advertisement -

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲು ಮನವಿ ಮಾಡಿದರೆ ಶೇಕಡ 20ರಷ್ಟು ಕಮಿಷನ್ ಕೊಡಬೇಕೆಂದು ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ.ನಾಗೇಶ್ ಕೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಆಡಿಯೋದಲ್ಲಿರುವ ಮಾತುಗಳು ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹೀಗೆ ಮಾತನಾಡಿರುವುದು ಅಕ್ರೋಶಕ್ಕೆ ಕಾರಣವಾಗಿದೆ. ಕೊರೊನ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿರುವಾಗ ಬಿಜೆಪಿ ಕಾರ್ಯಕರ್ತ ಉಮಾಶಂಕರ್ ಎಂಬಾತ ನಮ್ಮ ಊರಿಗೆ ಆಹಾರದ ಕಿಟ್ ಗಳನ್ನು ವಿತರಿಸಬೇಕೆಂದು ಮನವಿ ಮಾಡಿದಾಗ ಆಗುತ್ತೆ ಆಗಲ್ಲ ಎಂದಷ್ಟೇ ಉತ್ತರ ಕೊಡಬಹುದಿತ್ತು. ಆದರೆ ಕಮಿಷನ್ ಕೊಡಬೇಕೆಂದು ತಾಕೀತು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಆಡಿಯೋ ಕೇಳಿ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ: ಆಡಿಯೋ ವೈರಲ್

Posted by Naanu Gauri on Wednesday, April 29, 2020

ವೈರಲ್‌ ಆಡಿಯೋದ ಸಂಭಾಷಣೆ ಕೆಳಗಿನಂತಿದೆ.

ಕಾರ್ಯಕರ್ತ:’ಅಣ್ಣಾ ನಾನು,
ಶಾಸಕ: ಹೇಳು ಉಮಾಶಂಕರ
ಕಾರ್ಯಕರ್ತ: ಅಣ್ಣಾ ಊಟ ಆಯ್ತ ಅಣ್ಣಾ
ಕಾರ್ಯಕರ್ತ: ನಗುತ್ತ ಅಣ್ಣಾ ಸಮ್ಮೂರಿಗೂ ಏನಾದ್ರು ನೋಡ್ಬೇಕಾಗಿತ್ತಣ್ಣಾ
ಶಾಸಕ :ಏನ್ ನಾ
ಕಾರ್ಯಕರ್ತ: ಅದೇ ಆಹಾರದ ಕಿಟ್ ಏನಾದ್ರೂ…ವಿತರಣೆ ಮಾ.
ಶಾಸಕ: ‘ಒಂದ್ ಕೆಲ್ಸ ಮಾಡು, ನಿಮಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲಾ 20 ಪರ್ಸೆಂಟ್ ದುಡ್ ತಂದ್ಕೊಡಿ ಕೊಡ್ತಿನಿ
ಅಣ್ಣಾ
ನಿಮ್ಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲೋ ಅದ್ಕೆಎಲ್ಲಾ ಎಂಎಲ್ಎ ಗಳು 20 ಪರ್ಸೆಂಟ್ ಬಸೂಲಿ ಮಾಡ್ತಾರಲ್ಲ ಹಂಗೆ ನೀವು ತಂಗಂಡ್ ಬಂದ್ ಕೊಡಿ 20 ಪರ್ಷೆಂಟ್ ಕೊಟ್ಬಿಡಿ’
ಕಾರ್ಯಕರ್ತ: ಕೆಲ್ಸ ಎಲ್ಲಣ್ಣ, ಯಾವ್ ಕೆಲ್ಸನಣ್ಣ, ನಗು
ಶಾಸಕ: ಕೆಲ್ಸ ಕೊಟ್ಟಿರೋದೆಲ್ಲ ನೀನ್ ಯಾವ್ದೋ ಒಂದು ಕೆಲ್ಸ ಮಾಡ್ತೀದ್ದೀಯ ನನಗೆ ಗೊತ್ತಿದೆ’
ಕಾರ್ಯಕರ್ತ: ‘ಇಲ್ಲ ಕಣಣ್ಣಾ ನನ್ಗೆ ಯಾವುದು ಕೊಡ್ಸಿಲ್ಲ
ಶಾಸಕ: ಕೊಡ್ಸಿಲ್ಲ, ಅವ್ರು ಕೊಡ್ಸಿರಬೇಕು, ಬೆಸ್ಟ್ ನಿಮಗೆಲ್ಲ ಸಹಾಯ ಮಾಡ್ತೀವಲ್ಲ  ಅವಾಗ 30 ಪರ್ಷೆಂಟ್ ಕಮಿಷನ್ ಹೊಡೀಬೇಕು ನಾವು
ಕಾರ್ಯಕರ್ತ: ನನಗೆ ಯಾರು ಕೊಡ್ಸಿಲ್ಲಣ್ಣ ಅವ್ರು
ಶಾಸಕ ‘ಸರಿ ಬಿಡು’.

ಹೀಗೆ ಇಬ್ಬರ ನಡುವೆ ಸಂಭಾಷಣೆ ನಡೆದು ಆಡಿಯೋ ಮುಕ್ತಾಯವಾಗುತ್ತದೆ. ಕೇವಲ 47 ಸೆಕೆಂಡ್ ಇರುವ ಆಡಿಯೋದಲ್ಲಿ ಕಾರ್ಯಕರ್ತರಿಗೆ ಕೆಲಸ ಕೊಡಿಸಿರುವ ವಿಷಯ, 20 ಪರ್ಸೆಂಟ್ ಕಮಿಷನ್ ಕೊಡಬೇಕೆಂಬುದು ಮತ್ತು ಬೇರೆ ಶಾಸಕರು 30 ಪರ್ಸೆಂಟ್ ಕಮಿಷನ್ ಹೊಡಿತಾರೆ ಎಂಬ ವಿಷಯ ಪ್ರಸ್ತಾಪವಾಗಿದೆ. ಇದು ಬೇರೆಯವರು ಲೂಟಿ ಮಾಡುತ್ತಿದ್ದಾರೆ. ತನಗೇನೂ ಸಿಗುತ್ತಿಲ್ಲ ಎಂಬ ಬೇಸರ ನೋವು ಹತಾಶೆಯನ್ನು ಹೊರಹಾಕಿದಂತೆ ನಾಗೇಶ್ ಮಾತುಗಳು ಇವೆ.  ಕೊರೊನ ಸಂಕಟ ಸಮಯದಲ್ಲಿ ಶಾಸಕರು ಕಮಿಷನ್ ಹೊಡಿಯುತ್ತಿದ್ದಾರೆ ಆರೋಪ ಕೇಳಿಬಂದಿರುವ ನಡುವೆಯೇ ಆಹಾರದ ಕಿಟ್ ಗಳನ್ನು ವಿತರಿಸುವಲ್ಲಿ ಬಾರಿ ಪ್ರಮಾಣದ ಗೋಲ್ ಮಾಲ್ ನಡೆಯುತ್ತಿದೆ ಎಂಬುದಕ್ಕೆ ಆಡಿಯೋ ಸಾಕ್ಷ್ಯ ನೀಡುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ತಮ್ಮ ಪೋಟೋಗಳನ್ನು ಆಹಾರದ ಕಿಟ್‌ಗಳ ಮೇಲೆ ಹಾಕಿಕೊಂಡು ವಿತರಿಸಿದರು. ಶಾಸಕ ಬಿ.ಸಿ.ನಾಗೇಶ್ ಮಾತುಗಳಲ್ಲಿ ವ್ಯಕ್ತವಾಗುವ ಅಂಶವೆಂದರೆ ಶಾಸಕರ ಬಳಿ ಸಹಾಯ ಮತ್ತು ಕೆಲಸ ಪಡೆದಿರುವ ವ್ಯಕ್ತಿಗಳು ಆಹಾರದ ಕಿಟ್ ಗಳಿಗೆ ಹಣ ತೆತ್ತಿದ್ದಾರೆ. ಗುತ್ತಿಗೆದಾರರಿಂದ ಹಣವೂ ಬಂದಿದೆ. ಆಹಾರದ ಕಿಟ್ ಗಳು ಲಭ್ಯವಾಗಿವೆ. ಇದರಿಂದ  ಬಿಜೆಪಿಯ ಬಹುತೇಕ ಶಾಸಕರು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲು ಸಾಧ್ಯವಾಗಿದೆ ಎಂಬುದರತ್ತ ನಾಗೇಶ ಮಾತುಗಳು ಬೊಟ್ಟುಮಾಡಿ ತೋರಿಸುತ್ತವೆ.

ದೇಶಭಕ್ತಿ, ಸೇವೆ ಎಂದೆಲ್ಲಾ ಹೇಳಿಕೊಳ್ಳುವ ಬಿಜೆಪಿ ಮುಖಂಡರ ಪೊಳ್ಳುತನವನ್ನು ಆಡಿಯೋ ಬಹಿರಂಗಗೊಳಿಸಿದೆ. ಕೊರೊನ ಸಂಕಷ್ಟದಲ್ಲೂ ಹಣ ಮಾಡುವುದರಲ್ಲಿ ಶಾಸಕರು ನಿರತರಾಗಿದ್ದಾರೆ. ಜನ ಸೇವೆ, ಜನರ ಕೆಲಸ ದೇವರ ಕೆಲಸ ಇವೆಲ್ಲ ಕೇವಲ ಬಾಯಿಯಲ್ಲಿ ಹೇಳುವುದಕ್ಕೆ ಮಾತ್ರ. ಗಾದೆ ಹೇಳೋಕಾಯ್ತು ಬಾನ ಉಣ್ಣೋಕಾಯ್ತು ಎಂಬಂತಿದೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...