Homeಮುಖಪುಟಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

- Advertisement -
- Advertisement -

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲು ಮನವಿ ಮಾಡಿದರೆ ಶೇಕಡ 20ರಷ್ಟು ಕಮಿಷನ್ ಕೊಡಬೇಕೆಂದು ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ.ನಾಗೇಶ್ ಕೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಆಡಿಯೋದಲ್ಲಿರುವ ಮಾತುಗಳು ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹೀಗೆ ಮಾತನಾಡಿರುವುದು ಅಕ್ರೋಶಕ್ಕೆ ಕಾರಣವಾಗಿದೆ. ಕೊರೊನ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿರುವಾಗ ಬಿಜೆಪಿ ಕಾರ್ಯಕರ್ತ ಉಮಾಶಂಕರ್ ಎಂಬಾತ ನಮ್ಮ ಊರಿಗೆ ಆಹಾರದ ಕಿಟ್ ಗಳನ್ನು ವಿತರಿಸಬೇಕೆಂದು ಮನವಿ ಮಾಡಿದಾಗ ಆಗುತ್ತೆ ಆಗಲ್ಲ ಎಂದಷ್ಟೇ ಉತ್ತರ ಕೊಡಬಹುದಿತ್ತು. ಆದರೆ ಕಮಿಷನ್ ಕೊಡಬೇಕೆಂದು ತಾಕೀತು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಆಡಿಯೋ ಕೇಳಿ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ: ಆಡಿಯೋ ವೈರಲ್

Posted by Naanu Gauri on Wednesday, April 29, 2020

ವೈರಲ್‌ ಆಡಿಯೋದ ಸಂಭಾಷಣೆ ಕೆಳಗಿನಂತಿದೆ.

ಕಾರ್ಯಕರ್ತ:’ಅಣ್ಣಾ ನಾನು,
ಶಾಸಕ: ಹೇಳು ಉಮಾಶಂಕರ
ಕಾರ್ಯಕರ್ತ: ಅಣ್ಣಾ ಊಟ ಆಯ್ತ ಅಣ್ಣಾ
ಕಾರ್ಯಕರ್ತ: ನಗುತ್ತ ಅಣ್ಣಾ ಸಮ್ಮೂರಿಗೂ ಏನಾದ್ರು ನೋಡ್ಬೇಕಾಗಿತ್ತಣ್ಣಾ
ಶಾಸಕ :ಏನ್ ನಾ
ಕಾರ್ಯಕರ್ತ: ಅದೇ ಆಹಾರದ ಕಿಟ್ ಏನಾದ್ರೂ…ವಿತರಣೆ ಮಾ.
ಶಾಸಕ: ‘ಒಂದ್ ಕೆಲ್ಸ ಮಾಡು, ನಿಮಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲಾ 20 ಪರ್ಸೆಂಟ್ ದುಡ್ ತಂದ್ಕೊಡಿ ಕೊಡ್ತಿನಿ
ಅಣ್ಣಾ
ನಿಮ್ಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲೋ ಅದ್ಕೆಎಲ್ಲಾ ಎಂಎಲ್ಎ ಗಳು 20 ಪರ್ಸೆಂಟ್ ಬಸೂಲಿ ಮಾಡ್ತಾರಲ್ಲ ಹಂಗೆ ನೀವು ತಂಗಂಡ್ ಬಂದ್ ಕೊಡಿ 20 ಪರ್ಷೆಂಟ್ ಕೊಟ್ಬಿಡಿ’
ಕಾರ್ಯಕರ್ತ: ಕೆಲ್ಸ ಎಲ್ಲಣ್ಣ, ಯಾವ್ ಕೆಲ್ಸನಣ್ಣ, ನಗು
ಶಾಸಕ: ಕೆಲ್ಸ ಕೊಟ್ಟಿರೋದೆಲ್ಲ ನೀನ್ ಯಾವ್ದೋ ಒಂದು ಕೆಲ್ಸ ಮಾಡ್ತೀದ್ದೀಯ ನನಗೆ ಗೊತ್ತಿದೆ’
ಕಾರ್ಯಕರ್ತ: ‘ಇಲ್ಲ ಕಣಣ್ಣಾ ನನ್ಗೆ ಯಾವುದು ಕೊಡ್ಸಿಲ್ಲ
ಶಾಸಕ: ಕೊಡ್ಸಿಲ್ಲ, ಅವ್ರು ಕೊಡ್ಸಿರಬೇಕು, ಬೆಸ್ಟ್ ನಿಮಗೆಲ್ಲ ಸಹಾಯ ಮಾಡ್ತೀವಲ್ಲ  ಅವಾಗ 30 ಪರ್ಷೆಂಟ್ ಕಮಿಷನ್ ಹೊಡೀಬೇಕು ನಾವು
ಕಾರ್ಯಕರ್ತ: ನನಗೆ ಯಾರು ಕೊಡ್ಸಿಲ್ಲಣ್ಣ ಅವ್ರು
ಶಾಸಕ ‘ಸರಿ ಬಿಡು’.

ಹೀಗೆ ಇಬ್ಬರ ನಡುವೆ ಸಂಭಾಷಣೆ ನಡೆದು ಆಡಿಯೋ ಮುಕ್ತಾಯವಾಗುತ್ತದೆ. ಕೇವಲ 47 ಸೆಕೆಂಡ್ ಇರುವ ಆಡಿಯೋದಲ್ಲಿ ಕಾರ್ಯಕರ್ತರಿಗೆ ಕೆಲಸ ಕೊಡಿಸಿರುವ ವಿಷಯ, 20 ಪರ್ಸೆಂಟ್ ಕಮಿಷನ್ ಕೊಡಬೇಕೆಂಬುದು ಮತ್ತು ಬೇರೆ ಶಾಸಕರು 30 ಪರ್ಸೆಂಟ್ ಕಮಿಷನ್ ಹೊಡಿತಾರೆ ಎಂಬ ವಿಷಯ ಪ್ರಸ್ತಾಪವಾಗಿದೆ. ಇದು ಬೇರೆಯವರು ಲೂಟಿ ಮಾಡುತ್ತಿದ್ದಾರೆ. ತನಗೇನೂ ಸಿಗುತ್ತಿಲ್ಲ ಎಂಬ ಬೇಸರ ನೋವು ಹತಾಶೆಯನ್ನು ಹೊರಹಾಕಿದಂತೆ ನಾಗೇಶ್ ಮಾತುಗಳು ಇವೆ.  ಕೊರೊನ ಸಂಕಟ ಸಮಯದಲ್ಲಿ ಶಾಸಕರು ಕಮಿಷನ್ ಹೊಡಿಯುತ್ತಿದ್ದಾರೆ ಆರೋಪ ಕೇಳಿಬಂದಿರುವ ನಡುವೆಯೇ ಆಹಾರದ ಕಿಟ್ ಗಳನ್ನು ವಿತರಿಸುವಲ್ಲಿ ಬಾರಿ ಪ್ರಮಾಣದ ಗೋಲ್ ಮಾಲ್ ನಡೆಯುತ್ತಿದೆ ಎಂಬುದಕ್ಕೆ ಆಡಿಯೋ ಸಾಕ್ಷ್ಯ ನೀಡುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ತಮ್ಮ ಪೋಟೋಗಳನ್ನು ಆಹಾರದ ಕಿಟ್‌ಗಳ ಮೇಲೆ ಹಾಕಿಕೊಂಡು ವಿತರಿಸಿದರು. ಶಾಸಕ ಬಿ.ಸಿ.ನಾಗೇಶ್ ಮಾತುಗಳಲ್ಲಿ ವ್ಯಕ್ತವಾಗುವ ಅಂಶವೆಂದರೆ ಶಾಸಕರ ಬಳಿ ಸಹಾಯ ಮತ್ತು ಕೆಲಸ ಪಡೆದಿರುವ ವ್ಯಕ್ತಿಗಳು ಆಹಾರದ ಕಿಟ್ ಗಳಿಗೆ ಹಣ ತೆತ್ತಿದ್ದಾರೆ. ಗುತ್ತಿಗೆದಾರರಿಂದ ಹಣವೂ ಬಂದಿದೆ. ಆಹಾರದ ಕಿಟ್ ಗಳು ಲಭ್ಯವಾಗಿವೆ. ಇದರಿಂದ  ಬಿಜೆಪಿಯ ಬಹುತೇಕ ಶಾಸಕರು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲು ಸಾಧ್ಯವಾಗಿದೆ ಎಂಬುದರತ್ತ ನಾಗೇಶ ಮಾತುಗಳು ಬೊಟ್ಟುಮಾಡಿ ತೋರಿಸುತ್ತವೆ.

ದೇಶಭಕ್ತಿ, ಸೇವೆ ಎಂದೆಲ್ಲಾ ಹೇಳಿಕೊಳ್ಳುವ ಬಿಜೆಪಿ ಮುಖಂಡರ ಪೊಳ್ಳುತನವನ್ನು ಆಡಿಯೋ ಬಹಿರಂಗಗೊಳಿಸಿದೆ. ಕೊರೊನ ಸಂಕಷ್ಟದಲ್ಲೂ ಹಣ ಮಾಡುವುದರಲ್ಲಿ ಶಾಸಕರು ನಿರತರಾಗಿದ್ದಾರೆ. ಜನ ಸೇವೆ, ಜನರ ಕೆಲಸ ದೇವರ ಕೆಲಸ ಇವೆಲ್ಲ ಕೇವಲ ಬಾಯಿಯಲ್ಲಿ ಹೇಳುವುದಕ್ಕೆ ಮಾತ್ರ. ಗಾದೆ ಹೇಳೋಕಾಯ್ತು ಬಾನ ಉಣ್ಣೋಕಾಯ್ತು ಎಂಬಂತಿದೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...