Homeಮುಖಪುಟಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

- Advertisement -
- Advertisement -

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲು ಮನವಿ ಮಾಡಿದರೆ ಶೇಕಡ 20ರಷ್ಟು ಕಮಿಷನ್ ಕೊಡಬೇಕೆಂದು ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ.ನಾಗೇಶ್ ಕೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಆಡಿಯೋದಲ್ಲಿರುವ ಮಾತುಗಳು ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹೀಗೆ ಮಾತನಾಡಿರುವುದು ಅಕ್ರೋಶಕ್ಕೆ ಕಾರಣವಾಗಿದೆ. ಕೊರೊನ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿರುವಾಗ ಬಿಜೆಪಿ ಕಾರ್ಯಕರ್ತ ಉಮಾಶಂಕರ್ ಎಂಬಾತ ನಮ್ಮ ಊರಿಗೆ ಆಹಾರದ ಕಿಟ್ ಗಳನ್ನು ವಿತರಿಸಬೇಕೆಂದು ಮನವಿ ಮಾಡಿದಾಗ ಆಗುತ್ತೆ ಆಗಲ್ಲ ಎಂದಷ್ಟೇ ಉತ್ತರ ಕೊಡಬಹುದಿತ್ತು. ಆದರೆ ಕಮಿಷನ್ ಕೊಡಬೇಕೆಂದು ತಾಕೀತು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಆಡಿಯೋ ಕೇಳಿ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ: ಆಡಿಯೋ ವೈರಲ್

Posted by Naanu Gauri on Wednesday, April 29, 2020

ವೈರಲ್‌ ಆಡಿಯೋದ ಸಂಭಾಷಣೆ ಕೆಳಗಿನಂತಿದೆ.

ಕಾರ್ಯಕರ್ತ:’ಅಣ್ಣಾ ನಾನು,
ಶಾಸಕ: ಹೇಳು ಉಮಾಶಂಕರ
ಕಾರ್ಯಕರ್ತ: ಅಣ್ಣಾ ಊಟ ಆಯ್ತ ಅಣ್ಣಾ
ಕಾರ್ಯಕರ್ತ: ನಗುತ್ತ ಅಣ್ಣಾ ಸಮ್ಮೂರಿಗೂ ಏನಾದ್ರು ನೋಡ್ಬೇಕಾಗಿತ್ತಣ್ಣಾ
ಶಾಸಕ :ಏನ್ ನಾ
ಕಾರ್ಯಕರ್ತ: ಅದೇ ಆಹಾರದ ಕಿಟ್ ಏನಾದ್ರೂ…ವಿತರಣೆ ಮಾ.
ಶಾಸಕ: ‘ಒಂದ್ ಕೆಲ್ಸ ಮಾಡು, ನಿಮಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲಾ 20 ಪರ್ಸೆಂಟ್ ದುಡ್ ತಂದ್ಕೊಡಿ ಕೊಡ್ತಿನಿ
ಅಣ್ಣಾ
ನಿಮ್ಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲೋ ಅದ್ಕೆಎಲ್ಲಾ ಎಂಎಲ್ಎ ಗಳು 20 ಪರ್ಸೆಂಟ್ ಬಸೂಲಿ ಮಾಡ್ತಾರಲ್ಲ ಹಂಗೆ ನೀವು ತಂಗಂಡ್ ಬಂದ್ ಕೊಡಿ 20 ಪರ್ಷೆಂಟ್ ಕೊಟ್ಬಿಡಿ’
ಕಾರ್ಯಕರ್ತ: ಕೆಲ್ಸ ಎಲ್ಲಣ್ಣ, ಯಾವ್ ಕೆಲ್ಸನಣ್ಣ, ನಗು
ಶಾಸಕ: ಕೆಲ್ಸ ಕೊಟ್ಟಿರೋದೆಲ್ಲ ನೀನ್ ಯಾವ್ದೋ ಒಂದು ಕೆಲ್ಸ ಮಾಡ್ತೀದ್ದೀಯ ನನಗೆ ಗೊತ್ತಿದೆ’
ಕಾರ್ಯಕರ್ತ: ‘ಇಲ್ಲ ಕಣಣ್ಣಾ ನನ್ಗೆ ಯಾವುದು ಕೊಡ್ಸಿಲ್ಲ
ಶಾಸಕ: ಕೊಡ್ಸಿಲ್ಲ, ಅವ್ರು ಕೊಡ್ಸಿರಬೇಕು, ಬೆಸ್ಟ್ ನಿಮಗೆಲ್ಲ ಸಹಾಯ ಮಾಡ್ತೀವಲ್ಲ  ಅವಾಗ 30 ಪರ್ಷೆಂಟ್ ಕಮಿಷನ್ ಹೊಡೀಬೇಕು ನಾವು
ಕಾರ್ಯಕರ್ತ: ನನಗೆ ಯಾರು ಕೊಡ್ಸಿಲ್ಲಣ್ಣ ಅವ್ರು
ಶಾಸಕ ‘ಸರಿ ಬಿಡು’.

ಹೀಗೆ ಇಬ್ಬರ ನಡುವೆ ಸಂಭಾಷಣೆ ನಡೆದು ಆಡಿಯೋ ಮುಕ್ತಾಯವಾಗುತ್ತದೆ. ಕೇವಲ 47 ಸೆಕೆಂಡ್ ಇರುವ ಆಡಿಯೋದಲ್ಲಿ ಕಾರ್ಯಕರ್ತರಿಗೆ ಕೆಲಸ ಕೊಡಿಸಿರುವ ವಿಷಯ, 20 ಪರ್ಸೆಂಟ್ ಕಮಿಷನ್ ಕೊಡಬೇಕೆಂಬುದು ಮತ್ತು ಬೇರೆ ಶಾಸಕರು 30 ಪರ್ಸೆಂಟ್ ಕಮಿಷನ್ ಹೊಡಿತಾರೆ ಎಂಬ ವಿಷಯ ಪ್ರಸ್ತಾಪವಾಗಿದೆ. ಇದು ಬೇರೆಯವರು ಲೂಟಿ ಮಾಡುತ್ತಿದ್ದಾರೆ. ತನಗೇನೂ ಸಿಗುತ್ತಿಲ್ಲ ಎಂಬ ಬೇಸರ ನೋವು ಹತಾಶೆಯನ್ನು ಹೊರಹಾಕಿದಂತೆ ನಾಗೇಶ್ ಮಾತುಗಳು ಇವೆ.  ಕೊರೊನ ಸಂಕಟ ಸಮಯದಲ್ಲಿ ಶಾಸಕರು ಕಮಿಷನ್ ಹೊಡಿಯುತ್ತಿದ್ದಾರೆ ಆರೋಪ ಕೇಳಿಬಂದಿರುವ ನಡುವೆಯೇ ಆಹಾರದ ಕಿಟ್ ಗಳನ್ನು ವಿತರಿಸುವಲ್ಲಿ ಬಾರಿ ಪ್ರಮಾಣದ ಗೋಲ್ ಮಾಲ್ ನಡೆಯುತ್ತಿದೆ ಎಂಬುದಕ್ಕೆ ಆಡಿಯೋ ಸಾಕ್ಷ್ಯ ನೀಡುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ತಮ್ಮ ಪೋಟೋಗಳನ್ನು ಆಹಾರದ ಕಿಟ್‌ಗಳ ಮೇಲೆ ಹಾಕಿಕೊಂಡು ವಿತರಿಸಿದರು. ಶಾಸಕ ಬಿ.ಸಿ.ನಾಗೇಶ್ ಮಾತುಗಳಲ್ಲಿ ವ್ಯಕ್ತವಾಗುವ ಅಂಶವೆಂದರೆ ಶಾಸಕರ ಬಳಿ ಸಹಾಯ ಮತ್ತು ಕೆಲಸ ಪಡೆದಿರುವ ವ್ಯಕ್ತಿಗಳು ಆಹಾರದ ಕಿಟ್ ಗಳಿಗೆ ಹಣ ತೆತ್ತಿದ್ದಾರೆ. ಗುತ್ತಿಗೆದಾರರಿಂದ ಹಣವೂ ಬಂದಿದೆ. ಆಹಾರದ ಕಿಟ್ ಗಳು ಲಭ್ಯವಾಗಿವೆ. ಇದರಿಂದ  ಬಿಜೆಪಿಯ ಬಹುತೇಕ ಶಾಸಕರು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲು ಸಾಧ್ಯವಾಗಿದೆ ಎಂಬುದರತ್ತ ನಾಗೇಶ ಮಾತುಗಳು ಬೊಟ್ಟುಮಾಡಿ ತೋರಿಸುತ್ತವೆ.

ದೇಶಭಕ್ತಿ, ಸೇವೆ ಎಂದೆಲ್ಲಾ ಹೇಳಿಕೊಳ್ಳುವ ಬಿಜೆಪಿ ಮುಖಂಡರ ಪೊಳ್ಳುತನವನ್ನು ಆಡಿಯೋ ಬಹಿರಂಗಗೊಳಿಸಿದೆ. ಕೊರೊನ ಸಂಕಷ್ಟದಲ್ಲೂ ಹಣ ಮಾಡುವುದರಲ್ಲಿ ಶಾಸಕರು ನಿರತರಾಗಿದ್ದಾರೆ. ಜನ ಸೇವೆ, ಜನರ ಕೆಲಸ ದೇವರ ಕೆಲಸ ಇವೆಲ್ಲ ಕೇವಲ ಬಾಯಿಯಲ್ಲಿ ಹೇಳುವುದಕ್ಕೆ ಮಾತ್ರ. ಗಾದೆ ಹೇಳೋಕಾಯ್ತು ಬಾನ ಉಣ್ಣೋಕಾಯ್ತು ಎಂಬಂತಿದೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...