Homeಮುಖಪುಟವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ...

ವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ ಶಾಸಕ!

- Advertisement -
- Advertisement -

ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೇಳಿದ ಹಳ್ಳಿಯ ಗ್ರಾಮಸ್ಥರೊಬ್ಬರಿಗೆ, ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾಗಿ ಪ್ರಮಾಣ ಮಾಡುವಂತೆ ಬಿಜೆಪಿ ಶಾಸಕರೊಬ್ಬರು ಕೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದ ಕತ್ರಾ ಅಸೆಂಬ್ಲಿ ಕ್ಷೇತ್ರದ ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ (ಪ್ರಿನ್ಸ್), ಹಳ್ಳಿಯೊಂದರಲ್ಲಿ ಮರ ನೆಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿದ್ದ ಗ್ರಾಮಸ್ಥರೊಬ್ಬರು ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೋರಿದ್ದಾರೆ. ಆಗ, ಶಾಸಕ ವೀರ್ ವಿಕ್ರಮ್ ಸಿಂಗ್, ನೀವು ಬಿಜೆಪಿ ಪಕ್ಷಕ್ಕೆ ಮತ ಹಾಕಿದ್ದೆ ಎಂದು ಪ್ರಮಾಣ ಮಾಡಿ ಎಂದು ಕೇಳಿದ್ದಾರೆ. ಸೋಮವಾರ ಈ ವಿಡಿಯೊ ವೈರಲ್ ಆಗಿದೆ.

“ಗಂಗಾ ನದಿಯ ಕಡೆಗೆ ಮುಖ ಮಾಡಿ ಅಥವಾ ನಿಮ್ಮ ಮಗನ ಮೂಲಕ ಪ್ರಮಾಣ ಮಾಡಿ, ನೀವು ಬಿಜೆಪಿಗೆ ಮತ ಹಾಕಿದ್ದೀರಿ ಎಂದು ಹೇಳಿ. ಆಗ, ನಾನು ನಿಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತೇನೆ. ನೀವು ಏನನ್ನಾದರೂ ಕೊಟ್ಟ ವ್ಯಕ್ತಿಯಿಂದ ಮಾತ್ರ ಏನನ್ನಾದರೂ ನಿರೀಕ್ಷಿಸಲು ಸಾಧ್ಯ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ತಾನು ಕೇವಲ ಮನವಿ ಮಾಡುತ್ತಿದ್ದೇನೆ ಎಂದು ಗ್ರಾಮಸ್ಥ ಹೇಳುತ್ತಿದ್ದಂತೆ, ಬಿಜೆಪಿ ಶಾಸಕ, “ನೀವು ಮತ ನೀಡಿರುವ ವ್ಯಕ್ತಿಗೆ ಮನವಿ ಮಾಡಿ. ನೀವು ನನಗೆ ನಿಮ್ಮ ಮತ ನೀಡಿದ್ದರೆ, ನನ್ನನ್ನು ಪ್ರಶ್ನಿಸುವ ಹಕ್ಕು ನಿಮಗೆ ಇರುತ್ತದೆ. ನನ್ನನ್ನು ಯಾಮಾರಿಸಲು ಪ್ರಯತ್ನಿಸಬೇಡಿ. ನನ್ನ ತಂದೆ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನಾನು ಕೂಡ ಒಬ್ಬ ಶಾಸಕ” ಎಂದು ಹೇಳಿದ್ದಾರೆ.

“ಪ್ರತಿ ಬೂತ್‌ನಲ್ಲಿ ನಾನು ಎಷ್ಟು ಮತಗಳನ್ನು ಪಡೆದಿದ್ದೇನೆ ಎಂಬುದು ನನಗೆ ತಿಳಿದಿಲ್ಲ ಎಂದು ನೀವು ಅಂದುಕೊಂಡಿದ್ದೀರಾ…?, ನೀವು ನನಗೆ ಮತ ಹಾಕಿದ್ದರೇ, ನಾನು ನಿಮ್ಮ ಮನೆಗೆ ದೀಪಗಳನ್ನು ಅಳವಡಿಸದಿದ್ದರೇ ನೀವು ದೂರು ನೀಡಬಹುದಿತ್ತು” ಎಂದು ಶಾಸಕರು ವೀಡಿಯೊದಲ್ಲಿ ಹೇಳಿದ್ದಾರೆ.

ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಎಸ್‌ಪಿ ಶಾಸಕ ರಾಜೇಶ್ ಯಾದವ್, “ಚುನಾವಣೆಯಲ್ಲಿ ಜಯಗಳಿಸಿದ ನಂತರ ಒಬ್ಬ ಶಾಸಕರು ಎಲ್ಲರ ಪ್ರತಿನಿಧಿಯಾಗಿರುತ್ತಾರೆ. ಅವರಿಗೆ ಯಾರು ಮತ ಹಾಕಿದ್ದಾರೆ, ಯಾರು ಮತ ಚಲಾಯಿಸಲಿಲ್ಲ ಎಂಬುದು ಲೆಕ್ಕಕ್ಕೆ ಬರುವುದಿಲ್ಲ. ಮತ ರಾಜಕಾರಣದಲ್ಲಿ ಪಾಲ್ಗೊಳ್ಳುವುದು ಮತ್ತು ಜನರು ಪ್ರಮಾಣ ಮಾಡಬೇಕೆಂದು ಕೇಳಿಕೊಳ್ಳುವುದು ಶಾಸಕರಾದವರಿಗೆ ಸರಿಹೊಂದುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...