Homeಮುಖಪುಟವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ...

ವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ ಶಾಸಕ!

- Advertisement -
- Advertisement -

ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೇಳಿದ ಹಳ್ಳಿಯ ಗ್ರಾಮಸ್ಥರೊಬ್ಬರಿಗೆ, ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾಗಿ ಪ್ರಮಾಣ ಮಾಡುವಂತೆ ಬಿಜೆಪಿ ಶಾಸಕರೊಬ್ಬರು ಕೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದ ಕತ್ರಾ ಅಸೆಂಬ್ಲಿ ಕ್ಷೇತ್ರದ ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ (ಪ್ರಿನ್ಸ್), ಹಳ್ಳಿಯೊಂದರಲ್ಲಿ ಮರ ನೆಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿದ್ದ ಗ್ರಾಮಸ್ಥರೊಬ್ಬರು ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೋರಿದ್ದಾರೆ. ಆಗ, ಶಾಸಕ ವೀರ್ ವಿಕ್ರಮ್ ಸಿಂಗ್, ನೀವು ಬಿಜೆಪಿ ಪಕ್ಷಕ್ಕೆ ಮತ ಹಾಕಿದ್ದೆ ಎಂದು ಪ್ರಮಾಣ ಮಾಡಿ ಎಂದು ಕೇಳಿದ್ದಾರೆ. ಸೋಮವಾರ ಈ ವಿಡಿಯೊ ವೈರಲ್ ಆಗಿದೆ.

“ಗಂಗಾ ನದಿಯ ಕಡೆಗೆ ಮುಖ ಮಾಡಿ ಅಥವಾ ನಿಮ್ಮ ಮಗನ ಮೂಲಕ ಪ್ರಮಾಣ ಮಾಡಿ, ನೀವು ಬಿಜೆಪಿಗೆ ಮತ ಹಾಕಿದ್ದೀರಿ ಎಂದು ಹೇಳಿ. ಆಗ, ನಾನು ನಿಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತೇನೆ. ನೀವು ಏನನ್ನಾದರೂ ಕೊಟ್ಟ ವ್ಯಕ್ತಿಯಿಂದ ಮಾತ್ರ ಏನನ್ನಾದರೂ ನಿರೀಕ್ಷಿಸಲು ಸಾಧ್ಯ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ತಾನು ಕೇವಲ ಮನವಿ ಮಾಡುತ್ತಿದ್ದೇನೆ ಎಂದು ಗ್ರಾಮಸ್ಥ ಹೇಳುತ್ತಿದ್ದಂತೆ, ಬಿಜೆಪಿ ಶಾಸಕ, “ನೀವು ಮತ ನೀಡಿರುವ ವ್ಯಕ್ತಿಗೆ ಮನವಿ ಮಾಡಿ. ನೀವು ನನಗೆ ನಿಮ್ಮ ಮತ ನೀಡಿದ್ದರೆ, ನನ್ನನ್ನು ಪ್ರಶ್ನಿಸುವ ಹಕ್ಕು ನಿಮಗೆ ಇರುತ್ತದೆ. ನನ್ನನ್ನು ಯಾಮಾರಿಸಲು ಪ್ರಯತ್ನಿಸಬೇಡಿ. ನನ್ನ ತಂದೆ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನಾನು ಕೂಡ ಒಬ್ಬ ಶಾಸಕ” ಎಂದು ಹೇಳಿದ್ದಾರೆ.

“ಪ್ರತಿ ಬೂತ್‌ನಲ್ಲಿ ನಾನು ಎಷ್ಟು ಮತಗಳನ್ನು ಪಡೆದಿದ್ದೇನೆ ಎಂಬುದು ನನಗೆ ತಿಳಿದಿಲ್ಲ ಎಂದು ನೀವು ಅಂದುಕೊಂಡಿದ್ದೀರಾ…?, ನೀವು ನನಗೆ ಮತ ಹಾಕಿದ್ದರೇ, ನಾನು ನಿಮ್ಮ ಮನೆಗೆ ದೀಪಗಳನ್ನು ಅಳವಡಿಸದಿದ್ದರೇ ನೀವು ದೂರು ನೀಡಬಹುದಿತ್ತು” ಎಂದು ಶಾಸಕರು ವೀಡಿಯೊದಲ್ಲಿ ಹೇಳಿದ್ದಾರೆ.

ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಎಸ್‌ಪಿ ಶಾಸಕ ರಾಜೇಶ್ ಯಾದವ್, “ಚುನಾವಣೆಯಲ್ಲಿ ಜಯಗಳಿಸಿದ ನಂತರ ಒಬ್ಬ ಶಾಸಕರು ಎಲ್ಲರ ಪ್ರತಿನಿಧಿಯಾಗಿರುತ್ತಾರೆ. ಅವರಿಗೆ ಯಾರು ಮತ ಹಾಕಿದ್ದಾರೆ, ಯಾರು ಮತ ಚಲಾಯಿಸಲಿಲ್ಲ ಎಂಬುದು ಲೆಕ್ಕಕ್ಕೆ ಬರುವುದಿಲ್ಲ. ಮತ ರಾಜಕಾರಣದಲ್ಲಿ ಪಾಲ್ಗೊಳ್ಳುವುದು ಮತ್ತು ಜನರು ಪ್ರಮಾಣ ಮಾಡಬೇಕೆಂದು ಕೇಳಿಕೊಳ್ಳುವುದು ಶಾಸಕರಾದವರಿಗೆ ಸರಿಹೊಂದುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...