Homeಮುಖಪುಟವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ...

ವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ ಶಾಸಕ!

- Advertisement -
- Advertisement -

ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೇಳಿದ ಹಳ್ಳಿಯ ಗ್ರಾಮಸ್ಥರೊಬ್ಬರಿಗೆ, ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾಗಿ ಪ್ರಮಾಣ ಮಾಡುವಂತೆ ಬಿಜೆಪಿ ಶಾಸಕರೊಬ್ಬರು ಕೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದ ಕತ್ರಾ ಅಸೆಂಬ್ಲಿ ಕ್ಷೇತ್ರದ ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ (ಪ್ರಿನ್ಸ್), ಹಳ್ಳಿಯೊಂದರಲ್ಲಿ ಮರ ನೆಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿದ್ದ ಗ್ರಾಮಸ್ಥರೊಬ್ಬರು ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೋರಿದ್ದಾರೆ. ಆಗ, ಶಾಸಕ ವೀರ್ ವಿಕ್ರಮ್ ಸಿಂಗ್, ನೀವು ಬಿಜೆಪಿ ಪಕ್ಷಕ್ಕೆ ಮತ ಹಾಕಿದ್ದೆ ಎಂದು ಪ್ರಮಾಣ ಮಾಡಿ ಎಂದು ಕೇಳಿದ್ದಾರೆ. ಸೋಮವಾರ ಈ ವಿಡಿಯೊ ವೈರಲ್ ಆಗಿದೆ.

“ಗಂಗಾ ನದಿಯ ಕಡೆಗೆ ಮುಖ ಮಾಡಿ ಅಥವಾ ನಿಮ್ಮ ಮಗನ ಮೂಲಕ ಪ್ರಮಾಣ ಮಾಡಿ, ನೀವು ಬಿಜೆಪಿಗೆ ಮತ ಹಾಕಿದ್ದೀರಿ ಎಂದು ಹೇಳಿ. ಆಗ, ನಾನು ನಿಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತೇನೆ. ನೀವು ಏನನ್ನಾದರೂ ಕೊಟ್ಟ ವ್ಯಕ್ತಿಯಿಂದ ಮಾತ್ರ ಏನನ್ನಾದರೂ ನಿರೀಕ್ಷಿಸಲು ಸಾಧ್ಯ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ತಾನು ಕೇವಲ ಮನವಿ ಮಾಡುತ್ತಿದ್ದೇನೆ ಎಂದು ಗ್ರಾಮಸ್ಥ ಹೇಳುತ್ತಿದ್ದಂತೆ, ಬಿಜೆಪಿ ಶಾಸಕ, “ನೀವು ಮತ ನೀಡಿರುವ ವ್ಯಕ್ತಿಗೆ ಮನವಿ ಮಾಡಿ. ನೀವು ನನಗೆ ನಿಮ್ಮ ಮತ ನೀಡಿದ್ದರೆ, ನನ್ನನ್ನು ಪ್ರಶ್ನಿಸುವ ಹಕ್ಕು ನಿಮಗೆ ಇರುತ್ತದೆ. ನನ್ನನ್ನು ಯಾಮಾರಿಸಲು ಪ್ರಯತ್ನಿಸಬೇಡಿ. ನನ್ನ ತಂದೆ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನಾನು ಕೂಡ ಒಬ್ಬ ಶಾಸಕ” ಎಂದು ಹೇಳಿದ್ದಾರೆ.

“ಪ್ರತಿ ಬೂತ್‌ನಲ್ಲಿ ನಾನು ಎಷ್ಟು ಮತಗಳನ್ನು ಪಡೆದಿದ್ದೇನೆ ಎಂಬುದು ನನಗೆ ತಿಳಿದಿಲ್ಲ ಎಂದು ನೀವು ಅಂದುಕೊಂಡಿದ್ದೀರಾ…?, ನೀವು ನನಗೆ ಮತ ಹಾಕಿದ್ದರೇ, ನಾನು ನಿಮ್ಮ ಮನೆಗೆ ದೀಪಗಳನ್ನು ಅಳವಡಿಸದಿದ್ದರೇ ನೀವು ದೂರು ನೀಡಬಹುದಿತ್ತು” ಎಂದು ಶಾಸಕರು ವೀಡಿಯೊದಲ್ಲಿ ಹೇಳಿದ್ದಾರೆ.

ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಎಸ್‌ಪಿ ಶಾಸಕ ರಾಜೇಶ್ ಯಾದವ್, “ಚುನಾವಣೆಯಲ್ಲಿ ಜಯಗಳಿಸಿದ ನಂತರ ಒಬ್ಬ ಶಾಸಕರು ಎಲ್ಲರ ಪ್ರತಿನಿಧಿಯಾಗಿರುತ್ತಾರೆ. ಅವರಿಗೆ ಯಾರು ಮತ ಹಾಕಿದ್ದಾರೆ, ಯಾರು ಮತ ಚಲಾಯಿಸಲಿಲ್ಲ ಎಂಬುದು ಲೆಕ್ಕಕ್ಕೆ ಬರುವುದಿಲ್ಲ. ಮತ ರಾಜಕಾರಣದಲ್ಲಿ ಪಾಲ್ಗೊಳ್ಳುವುದು ಮತ್ತು ಜನರು ಪ್ರಮಾಣ ಮಾಡಬೇಕೆಂದು ಕೇಳಿಕೊಳ್ಳುವುದು ಶಾಸಕರಾದವರಿಗೆ ಸರಿಹೊಂದುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...