Homeಕರ್ನಾಟಕಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

- Advertisement -
- Advertisement -

ಬಿಜೆಪಿ ಶಾಸಕ ಮತ್ತು ಪಂಚಮಸಾಲಿ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಇಂದು ಮತ್ತೊಮ್ಮೆ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದವರೇ ಜೈಲಿಗೆ ಹೋಗಿ ಬಂದ ಉದಾಹರಣೆ ಇದೆ. ಮುಂದೆ ಮತ್ತೊಮ್ಮೆ ಅಂತಹ ದಿನಗಳು ಬಂದರೂ ಬರಬಹುದು. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೂರಾರು ವರ್ಷ ದೇಶವನ್ನು ಆಳಿದ ಮೊಘಲರ ಸಂತತಿ ನಾಶವಾಗಿದೆ. ರಾಜ ಮಹಾರಾಜರೆಲ್ಲ ಅಳಿದು ಹೋಗಿದ್ದಾರೆ. ಈಗಿರುವವರೂ ಹೋಗುತ್ತಾರೆ. ಕೆಲವು ಮಠಾಧೀಶರನ್ನು ಖರೀದಿಸಿ ಹೆಚ್ಚು ದಿನ ಅಧಿಕಾರ ನಡೆಸಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ  ಬಿಎಸ್‌ ಯಡಿಯೂರಪ್ಪ ಮನೆಗೆ ಹೋಗುತ್ತಾರೆ ಎಂದು ಅವರು ಮುಖ್ಯಮಂತ್ರಿಯ ವಿರುದ್ಧ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ವೀರಶೈವ-ಲಿಂಗಾಯತ ರಾಜಕೀಯ ಬ್ರಿಗೇಡ್‌ನಲ್ಲಿ ಬಿ.ಎಸ್‌. ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಏಜೆಂಟ್‌ಗಳೇ ತುಂಬಿ ಹೋಗಿದ್ದಾರೆ. ಸರ್ಕಾರದಲ್ಲಿರುವ ಕೆಲವು ಮಂತ್ರಿಗಳು ಮುಂದೊಂದು ಹಿಂದೊಂದು ಮಾತನಾಡುತ್ತಾರೆ. ಯೋಗೀಶ್ವರ್, ವಿಶ್ವನಾಥ್, ಯತ್ನಾಲ್ ಮೂವರೇ ಮುಖ್ಯಮಂತ್ರಿಗಳನ್ನು ಇಳಿಸಲು ಪ್ರಯತ್ನಿಸುತ್ತಿಲ್ಲ, ಪ್ರಸ್ತುತ ಸರ್ಕಾರದ ಹಲವು ಮಂತ್ರಿಗಳು ಬಿ.ಎಸ್‌.ಯಡಿಯೂರಪ್ಪನವರನ್ನು ನಾಯಕತ್ವದಿಂದ ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳು ಮುಖ್ಯಮಂತ್ರಿಗಳ ಮರ್ಜಿಯಲ್ಲಿ ಇರುವುದರಿಂದ ಇದ್ಯಾವುದೂ ಕಾಣುತ್ತಿಲ್ಲ ಎಂದು ಕೆಲವು ಸುದ್ದಿ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ.

ಪಂಚಮಸಾಲಿಗಳ 3 ನೇ ಒಕ್ಕೂಟವೊಂದು ನಿರ್ಮಾಣವಾಗುತ್ತಿದೆ. ಸಚಿವ ಮುರುಗೇಶ್ ನಿರಾಣಿ ಪಂಚಮಸಾಲಿ ಸಮುದಾಯವನ್ನು ಒಡೆಯುವ ಪ್ರಯತ್ನಕ್ಕೆ ಕೈಹಾಕಿದ್ದು ಹಣಕ್ಕೆ ಸಮುದಾಯವನ್ನು ಖರೀದಿಸಲು ಸಾಧ್ಯವಿಲ್ಲವೆಂದು ಸಚಿವ ನಿರಾಣಿ ವಿರುದ್ಧವೂ ಬಸವನಗೌಡ ಪಾಟೀಲ ಯತ್ನಾಳ್ ಆರೋಪಗಳನ್ನು ಮಾಡಿದ್ದಾರೆ.

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸಕ್ಕೂ ಮೊದಲೇ ಇದರಿಂದ ಏನೂ ಪ್ರಯೋಜನವಿಲ್ಲವೆಂದು ಗೊತ್ತಿತ್ತು. ದುಷ್ಟರ ಸಂಹಾರದಿಂದ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಒಳ್ಳೆಯದಾಗಲಿದೆ. ಆ ದಿನ ಸದ್ಯದಲ್ಲಿಯೇ ಬರಲಿದೆ ಎಂದು ಯತ್ನಾಳ್ ನಾಯಕತ್ವ ಬದಲಾವಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...