Homeಮುಖಪುಟನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನೆಹರು ಅವರು ನಿಧನರಾದಾಗ ದೇಶದ ಶ್ರೇಷ್ಠನಾಯಕನೊಬ್ಬನನ್ನು ಕಳೆದುಕೊಂಡೆವು ಎಂದು ವಾಜಪೇಯಿಯವರು ಸಂತಾಪ ಸೂಚಿಸಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಅವರದೇ ಪಕ್ಷದ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷವಾಗಿ ಖಂಡಿಸಿದ್ದಾರೆ.

ನೆಹರು ಅವರ ಬಗೆಗಿನ ಹುಕ್ಕಾ ಸೇವನೆ ಕುರಿತು ಬಿಜೆಪಿ ನಾಯಕರು ನೀಡಿದ ಹೇಳಿಕೆಯನ್ನು ಖಂಡಿಸಿರುವ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ “ಇತ್ತೀಚೆಗೆ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷಗಳು ಹೇಗಿರಬೇಕೆಂದು ಹಿಂದಿನ ನಾಯಕರು ಮಾದರಿ ಹಾಕಿಕೊಟ್ಟಿದ್ದಾರೆ. ಅಂತಹ ನಾಯಕರನ್ನು ಟೀಕಿಸುವುದು ಸರಿಯಲ್ಲ” ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನೆಹರು ಪ್ರಧಾನಿಯಾಗಿದ್ದ ಕಾಲಾವಧಿಯಲ್ಲಿ ವಾಜಪೇಯಿ ಸಂಸದರಾಗಿದ್ದರು, ಸಂಸತ್ತಿನಲ್ಲಿ ಮಾತನಾಡಲು ವಾಜಪೇಯಿ ಸ್ಪೀಕರ್ ಅವರಲ್ಲಿ ಮನವಿ ಮಾಡುತ್ತಿರುವುದನ್ನು ಕಂಡ ನೆಹರು ಅವರು ವಾಜಪೇಯಿ ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ಲೋಕಸಭಾ ಅಧ್ಯಕ್ಷರ ಮೇಲೆ ಒತ್ತಡ ಹೇರುತ್ತಿದ್ದರು. ಅದೇ ರೀತಿ ವಾಜಪೇಯಿ ವಿದೇಶಾಂಗ ಸಚಿರಾಗಿದ್ದ ವೇಳೆ ಜವಹರಲಾಲ್ ನೆಹರು ಪೋಟೋವನ್ನು ತಮ್ಮ ಕಚೇರಿಯಲ್ಲಿ ತೆಗೆದುಹಾಕಿದ್ದನ್ನು ಗಮನಿಸಿ ಕೂಡಲೇ ಅವರ ಪೋಟೋ ವನ್ನು ಇರಿಸುವಂತೆ ಆದೇಶಿಸಿದ್ದರು” ಎಂದು ಅವರ ಸಂಬಂಧದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನೆಹರು ಅವರು ನಿಧನರಾದಾಗ ದೇಶದ ಶ್ರೇಷ್ಠನಾಯಕನೊಬ್ಬನನ್ನು ಕಳೆದುಕೊಂಡೆವು ಎಂದು ವಾಜಪೇಯಿಯವರು ಸಂತಾಪ ಸೂಚಿಸಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಚೀನಾ – ಭಾರತ ಯುದ್ಧದ ಸಂದರ್ಭದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರು. ಯುದ್ದ ಮಾಡಬೇಕೆಂಬ ಅವರ ಈ ನಿರ್ಧಾರವನ್ನು ಅಟಲ್ ಬಿಹಾರಿ ವಾಜಪೇಯಿ ಬೆಂಬಲಿಸಿ ಇಂದಿರಾ ಗಾಂಧಿಯನ್ನು ಅವರನ್ನು ದುರ್ಗೆಗೆ ಹೋಲಿಸಿದ್ದರು. ಯುದ್ಧದ ಸಂದರ್ಭದಲ್ಲಿ ಪ್ರತಿಪಕ್ಷ ಆಡಳಿತ ಪಕ್ಷ ಒಂದೇ ಎಂದು ಹುರಿದುಂಬಿಸಿದ್ದರು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿದ್ದ ಪ್ರಾರಂಭದಲ್ಲಿ ಇಂದಿರಾ ಗಾಂಧಿಜೀಯವರ ಬ್ಯಾಂಕ್ ರಾಷ್ಟ್ರೀಕರಣ ಕುರಿತು ಪ್ರಶಂಸೆ ವ್ಯಕ್ತಪಡಿಸಿ ಸಾಮಾನ್ಯ ಜನರಿಗೆ ಇದು ಅನುಕೂಲವಾಗಿದೆ ಎಂದು ಹೊಗಳಿದ್ದರು‌ ಈ ಹಿನ್ನಲೆಯಲ್ಲಿ ಯಾವುದೇ ಪಕ್ಷದ ನಾಯಕನನ್ನು ತಮ್ಮ ಸೈದಾಂತಿಕ ಪ್ರತಿಪಾದನೆ ಅಥವಾ ನಾಯಕರ ಮೆಚ್ಚುಗೆಗಾಗಿ ಅವರನ್ನು ಅಗೌರವಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಎಂ.ಪಿ ಕುಮಾರಸ್ವಾಮಿಯವರು ‘ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ವ್ಯಾಪ್ತಿಗೆ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿ, ಮನೆ, ಜಮೀನು ಮತ್ತು ಬೆಳೆಹಾನಿ ಆದವರಿಗೆ ಪರಿಹಾರ ನೀಡಿ’ ಎಂದು ಒತ್ತಾಯಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಎದುರು ತಮ್ಮದೇ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಧರಣಿ ನಡೆಸಿ ಗಮನ ಸೆಳೆದಿದ್ದರು.


ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...