Homeಕರ್ನಾಟಕನಗರಸಭೆಗೆ ಸ್ಪರ್ಧಿಸಿದ್ದ ಪ್ರತಿ ಅಭ್ಯರ್ಥಿಗೆ ಸಿ.ಟಿ.ರವಿ 15 ಲಕ್ಷ ರೂ. ನೀಡಿದ್ದರು: ಆಡಿಯೊ ರಿಲೀಸ್ ಮಾಡಿದ...

ನಗರಸಭೆಗೆ ಸ್ಪರ್ಧಿಸಿದ್ದ ಪ್ರತಿ ಅಭ್ಯರ್ಥಿಗೆ ಸಿ.ಟಿ.ರವಿ 15 ಲಕ್ಷ ರೂ. ನೀಡಿದ್ದರು: ಆಡಿಯೊ ರಿಲೀಸ್ ಮಾಡಿದ ಎಎಪಿ

ಚುನಾವಣಾ ಅಕ್ರಮ ನಡೆದಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದ್ದು, ಬಿಜೆಪಿ- ಆಪ್‌ ಅಭ್ಯರ್ಥಿಗಳು ಮಾತನಾಡಿದ್ದಾರೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಲಾಗಿದೆ.

- Advertisement -
- Advertisement -

ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರತಿ ಬಿಜೆಪಿ ಅಭ್ಯರ್ಥಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅವರು ಹದಿನೈದು ಲಕ್ಷ ರೂ. ನೀಡಿದ್ದರು ಎಂದು ಆರೋಪಿಸುವ ಆಮ್‌ ಆದ್ಮಿ ಪಾರ್ಟಿಯು ಆಡಿಯೊವನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಪಕ್ಷಗಳು ಇಡೀ ಚುನಾವಣೆಯಲ್ಲಿ ಹಣದ ಹೊಳೆಯನ್ನೇ ಹರಿಸಿದ್ದು, ಚಿಕ್ಕಮಗಳೂರಿನ ಮುಗ್ಧ ಮತದಾರರಿಗೆ ಆಸೆ-ಆಮಿಷಗಳನ್ನು ಒಡ್ಡಿ, ಮರಳು ಮಾಡಿ ಮತ ಸೆಳೆಯಲಾಗಿದೆ. ಅದರಲ್ಲೂ ಬಿಜೆಪಿಯೂ ಸಾಧ್ಯವಿರುವ ಎಲ್ಲ ಅಕ್ರಮಗಳನ್ನು ಎಸಗಿ ಚುಣಾವಣೆಯಲ್ಲಿ ಗೆದ್ದಿದೆ ಎಂದು ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಆರೋಪಿಸಿದ್ದಾರೆ.

ವಾರ್ಡ್ ನಂ. 27ರಲ್ಲಿ ಸ್ಪರ್ಧಿಸಿದ್ದ ಎಎಪಿ ಅಭ್ಯರ್ಥಿ ದೀಪಕ್‌ ಅವರು, ವಾರ್ಡ್ ನಂ. 33ರ ಬಿಜೆಪಿ ಅಭ್ಯರ್ಥಿ ನರಸಿಂಹಮೂರ್ತಿಯವರ ಜೊತೆ ನಡೆಸಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆಯನ್ನು ದರ್ಶನ್‌ ಜೈನ್‌ ಹಂಚಿಕೊಂಡಿದ್ದಾರೆ.

ಈ ಪೋನ್‌ ಸಂಭಾಷಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸ್ಥಳೀಯ ಶಾಸಕ ಸಿ.ಟಿ.ರವಿ ಹಾಗೂ ಬಿಜೆಪಿ ನಡೆಸಿದ ಅಕ್ರಮಗಳು ಬಯಲಿಗೆ ಬಂದಿವೆ. ಚುಣಾವಣಾ ಆಯೋಗವು ನಗರಸಭೆ ಚುನಾವಣೆಯಲ್ಲಿ ವಾರ್ಡ್ ಒಂದರ ಅಭ್ಯರ್ಥಿಗೆ ಚುನಾವಣಾ ಖರ್ಚಿಗೆ ನಿಗದಿಪಡಿಸಿರುವ ಮೊತ್ತ 2 ಲಕ್ಷ ರೂ.ಗಳು. ಆದರೆ ಈ ಮೊತ್ತದ ಹತ್ತು- ಇಪ್ಪತ್ತು ಪಟ್ಟು ಹೆಚ್ಚು ಖರ್ಚುನ್ನು ಜೆಸಿಬಿ (ಜೆಡಿಎಸ್‌‌-ಕಾಂಗ್ರೆಸ್‌-ಬಿಜೆಪಿ) ಪಕ್ಷಗಳು ಎಲ್ಲಾ ವಾರ್ಡ್‌ಗಳಲ್ಲೂ ಮಾಡಿವೆ. ಶಾಸಕ ಸಿ.ಟಿ.ರವಿಯವರೇ ಪ್ರತಿ ಅಭ್ಯರ್ಥಿಗೂ 15 ಲಕ್ಷ ರೂಪಾಯಿಗಳನ್ನು ಚುನಾವಣಾ ಅಕ್ರಮಣಕ್ಕೆ ನೀಡಿರುವುದು ಬಿಜೆಪಿ ಅಭ್ಯರ್ಥಿಯ ಬಾಯಿಂದಲೇ ಬಯಲಾಗಿದೆ ಎಂದು ದೂರಿದ್ದಾರೆ.

ಜೊತೆಗೆ ನಗರದ ಹಲವಾರು ವಾರ್ಡ್‌‌ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚುತ್ತಿರುವ ಫೋಟೋಗಳೂ ಎಎಪಿಗೆ ಲಭ್ಯವಾಗಿದೆ. ರಾಜಾರೋಷವಾಗಿ ಚುನಾವಣೆಯಲ್ಲಿ ಹಣ, ಮದ್ಯ ಹಂಚಿಕೆಯಾದರೂ ಚಿಕ್ಕಮಗಳೂರು ನಗರಸಭೆಯ ಚುನಾವಣಾ ಆಯುಕ್ತರು ರಾಜಕೀಯ ಪಕ್ಷಗಳ ಕಾವಲುಗಾರರಂತೆ ಕಾರ್ಯನಿರ್ವಹಿಸಿದ್ದು ಹಲವಾರು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು ನಗರಸಭೆಯ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಸದಸ್ಯತ್ವವನ್ನು ರದ್ದುಪಡಿಸಬೇಕು. ಸ್ಥಳೀಯ ಶಾಸಕ ಸಿ.ಟಿ.ರವಿ ಮತ್ತು ಗೆದ್ದ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸುತ್ತದೆ. ಜಿಲ್ಲಾಧಿಕಾರಿ ಮತ್ತು ಚುನಾವಣಾ ಆಯುಕ್ತರು ರಾಜಕೀಯ ಪಕ್ಷಗಳ ಕಾವಲುಗಾರಂತೆ ಕಾರ್ಯನಿರ್ವಹಿಸಿದ್ದಾರೆ. ಇದು ಹಲವಾರು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಿದೆ ಎಂದಿದ್ದಾರೆ.

ಚಿಕ್ಕಮಗಳೂರಿನ ನಗರಸಭೆಯ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಸದಸ್ಯತ್ವವನ್ನು ರದ್ದುಪಡಿಸಬೇಕು, ಸ್ಥಳೀಯ ಶಾಸಕ ಸಿ.ಟಿ.ರವಿ ಮತ್ತು ಗೆದ್ದ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಕ್ಷವು ಜಿಲ್ಲಾಧಿಕಾರಿಗಳು ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ. ಚಿಕ್ಕಮಗಳೂರಿನ ಇತಿಹಾಸದಲ್ಲೇ ಕಪ್ಪುಚುಕ್ಕೆಯಾದಂತಹ ನಗರಸಭೆ ಚುನಾವಣಾ ಆಕ್ರಮ ವಿರುದ್ಧ ಎಎಪಿ ಕಾನೂನು ಹೋರಾಟ ನಡೆಸಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...