Homeಕರ್ನಾಟಕರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ...

ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ ಶಾಸಕ!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಕ್ಕವಳಿ ಬಳಿ ನಡೆದ ಅಪಘಾತದಲ್ಲಿ ಆರೋಗ್ಯಾಧಿಕಾರಿಯೊಬ್ಬರು ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದರು ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಸಹಾಯ ಮಾಡಲು ಕಾರಿನಿಂದ ಕೆಳಗಿಳಿಯದೆ, ದರ್ಪ ತೋರಿದ್ದಾರೆ. ಸಹಾಯ ಮಾಡಿದ್ದರೇ ಕೊರೊನಾ ವಾರಿಯರ್‌ ಉಳಿಯುತ್ತಿದ್ದರು ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದರು.

ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್. ಸುರೇಶ್  ಕಾರಿನಿಂದ ಇಳಿದು ಸ್ಪಲ್ಪ ಮಾನವೀಯತೆ ತೋರಿ ಆಸ್ಪತ್ರೆಗೆ ಸಾಗಿಸಿದ್ದರೂ  ಆರೋಗ್ಯಾಧಿಕಾರಿಯ ಪ್ರಾಣ ಉಳಿಯುತ್ತಿತ್ತು. ಆದರೆ, ಚಿಕಿತ್ಸೆ ಸಿಗುವುದು ತಡವಾಗಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಹಿರಿಯ ಆರೋಗ್ಯಾಧಿಕಾರಿ ರಮೇಶ್ ಬೈಕ್​ಗೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಅಪಘಾತವಾಗಿತ್ತು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಫೋನ್ ಮಾಡಿದ್ದರು. ಅದೇ ದಾರಿಯಲ್ಲಿ ಬಂದ ತರೀಕೆರೆ ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಕಾರು ರಸ್ತೆಯಲ್ಲೇ ನಿಲ್ಲಿಸಿದ್ದರು. ಸಹಾಯ ಮಾಡಲು ಕಾರಿನಿಂದ ಕೆಳಿಗೆ ಇಳಿಯಲೇ ಇಲ್ಲ. ಕಾರಿನ ಚಾಲಕ ಮತ್ತು ಗನ್‌ಮ್ಯಾನ್ ಮಾತ್ರ ಹೊರ ಬಂದು ಘಟನೆ ನೋಡಿದ್ದಾರೆ.

ಅಪಘಾತ ನಡೆದು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ರಕ್ತದ ಮಡುವಿನಲ್ಲೇ ಒದ್ದಾಡಿದ ಕೊರೊನಾ ವಾರಿಯರ್ ಆರೋಗ್ಯಾಧಿಕಾರಿ ನೋವಿನಿಂದ ನರಳಾಡುತ್ತಿದ್ದರು.  ನಂತರ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ, ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯೆಯೇ ಆರೋಗ್ಯಾಧಿಕಾರಿ ರಮೇಶ್ ಸಾವನ್ನಪ್ಪಿದ್ದಾರೆ. ಮಾನವೀಯತೆ ಮರೆತ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ವಿಡಿಯೋದಲ್ಲೂ ನೋಡಬಹುದಾಗಿದೆ.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಸುರೇಶ್, ನನಗೆ ಕಣ್ಣು ಬೇನೆ ಇದ್ದು ಕಾರಿನಲ್ಲಿ ನಿದ್ದೆ ಮಾಡುತ್ತಿದ್ದೆ. ಅಪಘಾತದ ಘಟನೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

’ಕಣ್ಣು ಬೇನೆ ಇದ್ದ ಕಾರಣ ಮಾತ್ರೆ ನುಂಗಿ, ಕಣ್ಣಿಗೆ ಔಷಧಿ ಹಾಕಿಕೊಂಡು ಕಾರಿನಲ್ಲಿ ನಿದ್ದೆ ಮಾಡುತ್ತಿದೆ. ಅಪಘಾತ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಆ ರಸ್ತೆಯಲ್ಲಿ ಅಷ್ಟು ಗಲಾಟೆ ಕೂಡ ಇರಲಿಲ್ಲ. ಅಪಘಾತ ನಡೆದಿರುವುದು ಕಂಡು ನನ್ನ ಕಾರು ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರು ಕಾರು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಹೋಗಿದ್ದಾರೆ. ನಾನು ನಿದ್ದೆ ಮಾಡುತ್ತಿದ್ದೆ ನನಗೆ ತಿಳಿದಿಲ್ಲ” ಎಂದಿದ್ದಾರೆ.

’ಕರೆ ಮಾಡಿದ ಒಂದೆರಡು ನಿಮಿಷದಲ್ಲೇ ಆಂಬ್ಯುಲೆನ್ಸ್ ಬಂದಿದ್ದರಿಂದ  ನನ್ನ ಕಾರನ್ನು ಬಳಸಿಲ್ಲ. ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಷ್ಟರಲ್ಲಿ ಯಾರೋ ಕಿಡಿಗೇಡಿಗಳು ನನ್ನ ವಿರುದ್ಧ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ’ ಎಂದು ತರೀಕೆರೆ ಶಾಸಕ ಸುರೇಶ್ ಹೇಳಿದ್ದಾರೆ.


ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...