Homeಕರ್ನಾಟಕರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ...

ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ ಶಾಸಕ!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಕ್ಕವಳಿ ಬಳಿ ನಡೆದ ಅಪಘಾತದಲ್ಲಿ ಆರೋಗ್ಯಾಧಿಕಾರಿಯೊಬ್ಬರು ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದರು ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಸಹಾಯ ಮಾಡಲು ಕಾರಿನಿಂದ ಕೆಳಗಿಳಿಯದೆ, ದರ್ಪ ತೋರಿದ್ದಾರೆ. ಸಹಾಯ ಮಾಡಿದ್ದರೇ ಕೊರೊನಾ ವಾರಿಯರ್‌ ಉಳಿಯುತ್ತಿದ್ದರು ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದರು.

ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್. ಸುರೇಶ್  ಕಾರಿನಿಂದ ಇಳಿದು ಸ್ಪಲ್ಪ ಮಾನವೀಯತೆ ತೋರಿ ಆಸ್ಪತ್ರೆಗೆ ಸಾಗಿಸಿದ್ದರೂ  ಆರೋಗ್ಯಾಧಿಕಾರಿಯ ಪ್ರಾಣ ಉಳಿಯುತ್ತಿತ್ತು. ಆದರೆ, ಚಿಕಿತ್ಸೆ ಸಿಗುವುದು ತಡವಾಗಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಹಿರಿಯ ಆರೋಗ್ಯಾಧಿಕಾರಿ ರಮೇಶ್ ಬೈಕ್​ಗೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಅಪಘಾತವಾಗಿತ್ತು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಫೋನ್ ಮಾಡಿದ್ದರು. ಅದೇ ದಾರಿಯಲ್ಲಿ ಬಂದ ತರೀಕೆರೆ ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಕಾರು ರಸ್ತೆಯಲ್ಲೇ ನಿಲ್ಲಿಸಿದ್ದರು. ಸಹಾಯ ಮಾಡಲು ಕಾರಿನಿಂದ ಕೆಳಿಗೆ ಇಳಿಯಲೇ ಇಲ್ಲ. ಕಾರಿನ ಚಾಲಕ ಮತ್ತು ಗನ್‌ಮ್ಯಾನ್ ಮಾತ್ರ ಹೊರ ಬಂದು ಘಟನೆ ನೋಡಿದ್ದಾರೆ.

ಅಪಘಾತ ನಡೆದು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ರಕ್ತದ ಮಡುವಿನಲ್ಲೇ ಒದ್ದಾಡಿದ ಕೊರೊನಾ ವಾರಿಯರ್ ಆರೋಗ್ಯಾಧಿಕಾರಿ ನೋವಿನಿಂದ ನರಳಾಡುತ್ತಿದ್ದರು.  ನಂತರ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ, ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯೆಯೇ ಆರೋಗ್ಯಾಧಿಕಾರಿ ರಮೇಶ್ ಸಾವನ್ನಪ್ಪಿದ್ದಾರೆ. ಮಾನವೀಯತೆ ಮರೆತ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ವಿಡಿಯೋದಲ್ಲೂ ನೋಡಬಹುದಾಗಿದೆ.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಸುರೇಶ್, ನನಗೆ ಕಣ್ಣು ಬೇನೆ ಇದ್ದು ಕಾರಿನಲ್ಲಿ ನಿದ್ದೆ ಮಾಡುತ್ತಿದ್ದೆ. ಅಪಘಾತದ ಘಟನೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

’ಕಣ್ಣು ಬೇನೆ ಇದ್ದ ಕಾರಣ ಮಾತ್ರೆ ನುಂಗಿ, ಕಣ್ಣಿಗೆ ಔಷಧಿ ಹಾಕಿಕೊಂಡು ಕಾರಿನಲ್ಲಿ ನಿದ್ದೆ ಮಾಡುತ್ತಿದೆ. ಅಪಘಾತ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಆ ರಸ್ತೆಯಲ್ಲಿ ಅಷ್ಟು ಗಲಾಟೆ ಕೂಡ ಇರಲಿಲ್ಲ. ಅಪಘಾತ ನಡೆದಿರುವುದು ಕಂಡು ನನ್ನ ಕಾರು ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರು ಕಾರು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಹೋಗಿದ್ದಾರೆ. ನಾನು ನಿದ್ದೆ ಮಾಡುತ್ತಿದ್ದೆ ನನಗೆ ತಿಳಿದಿಲ್ಲ” ಎಂದಿದ್ದಾರೆ.

’ಕರೆ ಮಾಡಿದ ಒಂದೆರಡು ನಿಮಿಷದಲ್ಲೇ ಆಂಬ್ಯುಲೆನ್ಸ್ ಬಂದಿದ್ದರಿಂದ  ನನ್ನ ಕಾರನ್ನು ಬಳಸಿಲ್ಲ. ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಷ್ಟರಲ್ಲಿ ಯಾರೋ ಕಿಡಿಗೇಡಿಗಳು ನನ್ನ ವಿರುದ್ಧ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ’ ಎಂದು ತರೀಕೆರೆ ಶಾಸಕ ಸುರೇಶ್ ಹೇಳಿದ್ದಾರೆ.


ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...