Homeಕರ್ನಾಟಕರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ...

ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ ಶಾಸಕ!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಕ್ಕವಳಿ ಬಳಿ ನಡೆದ ಅಪಘಾತದಲ್ಲಿ ಆರೋಗ್ಯಾಧಿಕಾರಿಯೊಬ್ಬರು ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದರು ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಸಹಾಯ ಮಾಡಲು ಕಾರಿನಿಂದ ಕೆಳಗಿಳಿಯದೆ, ದರ್ಪ ತೋರಿದ್ದಾರೆ. ಸಹಾಯ ಮಾಡಿದ್ದರೇ ಕೊರೊನಾ ವಾರಿಯರ್‌ ಉಳಿಯುತ್ತಿದ್ದರು ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದರು.

ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್. ಸುರೇಶ್  ಕಾರಿನಿಂದ ಇಳಿದು ಸ್ಪಲ್ಪ ಮಾನವೀಯತೆ ತೋರಿ ಆಸ್ಪತ್ರೆಗೆ ಸಾಗಿಸಿದ್ದರೂ  ಆರೋಗ್ಯಾಧಿಕಾರಿಯ ಪ್ರಾಣ ಉಳಿಯುತ್ತಿತ್ತು. ಆದರೆ, ಚಿಕಿತ್ಸೆ ಸಿಗುವುದು ತಡವಾಗಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಹಿರಿಯ ಆರೋಗ್ಯಾಧಿಕಾರಿ ರಮೇಶ್ ಬೈಕ್​ಗೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಅಪಘಾತವಾಗಿತ್ತು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಫೋನ್ ಮಾಡಿದ್ದರು. ಅದೇ ದಾರಿಯಲ್ಲಿ ಬಂದ ತರೀಕೆರೆ ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಕಾರು ರಸ್ತೆಯಲ್ಲೇ ನಿಲ್ಲಿಸಿದ್ದರು. ಸಹಾಯ ಮಾಡಲು ಕಾರಿನಿಂದ ಕೆಳಿಗೆ ಇಳಿಯಲೇ ಇಲ್ಲ. ಕಾರಿನ ಚಾಲಕ ಮತ್ತು ಗನ್‌ಮ್ಯಾನ್ ಮಾತ್ರ ಹೊರ ಬಂದು ಘಟನೆ ನೋಡಿದ್ದಾರೆ.

ಅಪಘಾತ ನಡೆದು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ರಕ್ತದ ಮಡುವಿನಲ್ಲೇ ಒದ್ದಾಡಿದ ಕೊರೊನಾ ವಾರಿಯರ್ ಆರೋಗ್ಯಾಧಿಕಾರಿ ನೋವಿನಿಂದ ನರಳಾಡುತ್ತಿದ್ದರು.  ನಂತರ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ, ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯೆಯೇ ಆರೋಗ್ಯಾಧಿಕಾರಿ ರಮೇಶ್ ಸಾವನ್ನಪ್ಪಿದ್ದಾರೆ. ಮಾನವೀಯತೆ ಮರೆತ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ವಿಡಿಯೋದಲ್ಲೂ ನೋಡಬಹುದಾಗಿದೆ.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಸುರೇಶ್, ನನಗೆ ಕಣ್ಣು ಬೇನೆ ಇದ್ದು ಕಾರಿನಲ್ಲಿ ನಿದ್ದೆ ಮಾಡುತ್ತಿದ್ದೆ. ಅಪಘಾತದ ಘಟನೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

’ಕಣ್ಣು ಬೇನೆ ಇದ್ದ ಕಾರಣ ಮಾತ್ರೆ ನುಂಗಿ, ಕಣ್ಣಿಗೆ ಔಷಧಿ ಹಾಕಿಕೊಂಡು ಕಾರಿನಲ್ಲಿ ನಿದ್ದೆ ಮಾಡುತ್ತಿದೆ. ಅಪಘಾತ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಆ ರಸ್ತೆಯಲ್ಲಿ ಅಷ್ಟು ಗಲಾಟೆ ಕೂಡ ಇರಲಿಲ್ಲ. ಅಪಘಾತ ನಡೆದಿರುವುದು ಕಂಡು ನನ್ನ ಕಾರು ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರು ಕಾರು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಹೋಗಿದ್ದಾರೆ. ನಾನು ನಿದ್ದೆ ಮಾಡುತ್ತಿದ್ದೆ ನನಗೆ ತಿಳಿದಿಲ್ಲ” ಎಂದಿದ್ದಾರೆ.

’ಕರೆ ಮಾಡಿದ ಒಂದೆರಡು ನಿಮಿಷದಲ್ಲೇ ಆಂಬ್ಯುಲೆನ್ಸ್ ಬಂದಿದ್ದರಿಂದ  ನನ್ನ ಕಾರನ್ನು ಬಳಸಿಲ್ಲ. ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಷ್ಟರಲ್ಲಿ ಯಾರೋ ಕಿಡಿಗೇಡಿಗಳು ನನ್ನ ವಿರುದ್ಧ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ’ ಎಂದು ತರೀಕೆರೆ ಶಾಸಕ ಸುರೇಶ್ ಹೇಳಿದ್ದಾರೆ.


ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...