Homeಕರ್ನಾಟಕರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ...

ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ ಶಾಸಕ!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಕ್ಕವಳಿ ಬಳಿ ನಡೆದ ಅಪಘಾತದಲ್ಲಿ ಆರೋಗ್ಯಾಧಿಕಾರಿಯೊಬ್ಬರು ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದರು ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಸಹಾಯ ಮಾಡಲು ಕಾರಿನಿಂದ ಕೆಳಗಿಳಿಯದೆ, ದರ್ಪ ತೋರಿದ್ದಾರೆ. ಸಹಾಯ ಮಾಡಿದ್ದರೇ ಕೊರೊನಾ ವಾರಿಯರ್‌ ಉಳಿಯುತ್ತಿದ್ದರು ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದರು.

ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್. ಸುರೇಶ್  ಕಾರಿನಿಂದ ಇಳಿದು ಸ್ಪಲ್ಪ ಮಾನವೀಯತೆ ತೋರಿ ಆಸ್ಪತ್ರೆಗೆ ಸಾಗಿಸಿದ್ದರೂ  ಆರೋಗ್ಯಾಧಿಕಾರಿಯ ಪ್ರಾಣ ಉಳಿಯುತ್ತಿತ್ತು. ಆದರೆ, ಚಿಕಿತ್ಸೆ ಸಿಗುವುದು ತಡವಾಗಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಹಿರಿಯ ಆರೋಗ್ಯಾಧಿಕಾರಿ ರಮೇಶ್ ಬೈಕ್​ಗೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಅಪಘಾತವಾಗಿತ್ತು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಫೋನ್ ಮಾಡಿದ್ದರು. ಅದೇ ದಾರಿಯಲ್ಲಿ ಬಂದ ತರೀಕೆರೆ ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಕಾರು ರಸ್ತೆಯಲ್ಲೇ ನಿಲ್ಲಿಸಿದ್ದರು. ಸಹಾಯ ಮಾಡಲು ಕಾರಿನಿಂದ ಕೆಳಿಗೆ ಇಳಿಯಲೇ ಇಲ್ಲ. ಕಾರಿನ ಚಾಲಕ ಮತ್ತು ಗನ್‌ಮ್ಯಾನ್ ಮಾತ್ರ ಹೊರ ಬಂದು ಘಟನೆ ನೋಡಿದ್ದಾರೆ.

ಅಪಘಾತ ನಡೆದು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ರಕ್ತದ ಮಡುವಿನಲ್ಲೇ ಒದ್ದಾಡಿದ ಕೊರೊನಾ ವಾರಿಯರ್ ಆರೋಗ್ಯಾಧಿಕಾರಿ ನೋವಿನಿಂದ ನರಳಾಡುತ್ತಿದ್ದರು.  ನಂತರ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ, ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯೆಯೇ ಆರೋಗ್ಯಾಧಿಕಾರಿ ರಮೇಶ್ ಸಾವನ್ನಪ್ಪಿದ್ದಾರೆ. ಮಾನವೀಯತೆ ಮರೆತ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ವಿಡಿಯೋದಲ್ಲೂ ನೋಡಬಹುದಾಗಿದೆ.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಸುರೇಶ್, ನನಗೆ ಕಣ್ಣು ಬೇನೆ ಇದ್ದು ಕಾರಿನಲ್ಲಿ ನಿದ್ದೆ ಮಾಡುತ್ತಿದ್ದೆ. ಅಪಘಾತದ ಘಟನೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

’ಕಣ್ಣು ಬೇನೆ ಇದ್ದ ಕಾರಣ ಮಾತ್ರೆ ನುಂಗಿ, ಕಣ್ಣಿಗೆ ಔಷಧಿ ಹಾಕಿಕೊಂಡು ಕಾರಿನಲ್ಲಿ ನಿದ್ದೆ ಮಾಡುತ್ತಿದೆ. ಅಪಘಾತ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಆ ರಸ್ತೆಯಲ್ಲಿ ಅಷ್ಟು ಗಲಾಟೆ ಕೂಡ ಇರಲಿಲ್ಲ. ಅಪಘಾತ ನಡೆದಿರುವುದು ಕಂಡು ನನ್ನ ಕಾರು ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರು ಕಾರು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಹೋಗಿದ್ದಾರೆ. ನಾನು ನಿದ್ದೆ ಮಾಡುತ್ತಿದ್ದೆ ನನಗೆ ತಿಳಿದಿಲ್ಲ” ಎಂದಿದ್ದಾರೆ.

’ಕರೆ ಮಾಡಿದ ಒಂದೆರಡು ನಿಮಿಷದಲ್ಲೇ ಆಂಬ್ಯುಲೆನ್ಸ್ ಬಂದಿದ್ದರಿಂದ  ನನ್ನ ಕಾರನ್ನು ಬಳಸಿಲ್ಲ. ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಷ್ಟರಲ್ಲಿ ಯಾರೋ ಕಿಡಿಗೇಡಿಗಳು ನನ್ನ ವಿರುದ್ಧ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ’ ಎಂದು ತರೀಕೆರೆ ಶಾಸಕ ಸುರೇಶ್ ಹೇಳಿದ್ದಾರೆ.


ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...