Homeಮುಖಪುಟಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌...

ಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌ ಟೀಕೆ

- Advertisement -
- Advertisement -

ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮಹಾರಾಷ್ಟ್ರದ ಮುಂಬೈಯಲ್ಲಿ ಸಿಲುಕಿರುವ ತಮ್ಮ ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವಂತೆ ನಟ ಸೋನು ಸೂದ್ ಅವರನ್ನು ಟ್ವಿಟ್ಟರ್ ನಲ್ಲಿ ಕೇಳಿ ಭಾರೀ ಟೀಕೆಗೊಳಗಾಗಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಧ್ಯೆ ಮನೆಗೆ ಹಿಂತಿರುಗಲು ಸಾಧ್ಯವಾಗದೇ ಸಿಕ್ಕಿಕೊಂಡಿರುವ ಸಾವಿರಾರು ವಲಸೆ ಕಾರ್ಮಿಕರಿಗೆ ತನ್ನ ಸ್ವಂತ ಹಣದಲ್ಲಿ ಸಾರಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾ ಜಿಲ್ಲೆಗಳಿಂದ ವಲಸೆ ಬಂದವರ ಪಟ್ಟಿಯನ್ನು  ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಅವರನ್ನು ವಾಪಸ್‌ ಕಳಿಸುವಂತೆ ಸಹಾಯಕ್ಕಾಗಿ ಸೋನು ಸೂದ್‌ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್‌ ನಾಳೆಯೇ ಆ ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. “ನಿಮ್ಮ ವಲಸೆ ಸಹೋದರರನ್ನು ನಾಳೆ ನಿಮ್ಮ ಬಳಿಗೆ ಕಳುಹಿಸಲಾಗುವುದು ಸರ್. ನಾನು ಎಂದಾದರೂ ಮಧ್ಯಪ್ರದೇಶಕ್ಕೆ ಬಂದರೆ, ನನಗೆ ಪೋಹಾ (ಅವಲಕ್ಕಿ) ಕೊಡಿಸಿ.” ಎಂದು ಅವರು ಟ್ವೀಟ್‌ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

ಮುಂಬಯಿಯಲ್ಲಿ ಸಿಲುಕಿರುವ 168 ಜನರಲ್ಲಿ 55 ಜನರು ಸೂದ್ ಅವರ ಸಹಾಯದ ಮೇರೆಗೆ ತಮ್ಮ ಸ್ವಂತ ಸ್ಥಳಗಳಿಗ ಮರಳಬಹುದು ಎಂದು ಶುಕ್ಲಾ ನಂತರ ಹೇಳಿದ್ದಾರೆ.

ಆದರೆ, ಸೋಶಿಯಲ್ ಮೀಡಿಯಾ ಬಳಕೆದಾರರು ಶುಕ್ಲಾ ಅವರನ್ನು ಟ್ರೋಲ್ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಅದೇ ಬಿಜೆಪಿ ನಾಯಕ ಬಾಲಿವುಡ್ ನಟನ ಸಹಾಯ ಪಡೆಯಬೇಕಾಯಿತು ಎಂದರೆ ಅವುಗಳ ಕಾರ್ಯವೈಖರಿ ಹೇಗಿರಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಗುರಿಯಾಗಿಸಿ ತೀವ್ರ ಟೀಕೆ ನಡೆಸಿದೆ. “ರಾಜೇಂದ್ರ ಶುಕ್ಲಾ ಅವರ ಈ ಟ್ವೀಟ್ ಮಧ್ಯಪ್ರದೇಶದ ಕಹಿ ಸತ್ಯವನ್ನು ಬಹಿರಂಗಪಡಿಸುತ್ತದೆ. ಮಾಜಿ ಸಚಿವ ಮತ್ತು ಪ್ರಸ್ತುತ ರೇವಾ ಕ್ಷೇತ್ರದ ಬಿಜೆಪಿ ಶಾಸಕರಾದ ಶುಕ್ಲಾರವರು ಶಿವರಾಜ್ ಚೌಹಾಣ್‌ ಅವರ ಸರ್ಕಾರವನ್ನು ನಂಬುತ್ತಿಲ್ಲ. ಬದಲಿಗೆ ಅವರು ಮುಂಬೈನಲ್ಲಿ ಸಿಕ್ಕಿಬಿದ್ದ ವಲಸೆ ಕಾರ್ಮಿಕರಿಗಾಗಿ ನಟ ಸೋನು ಸೂದ್ ಅವರ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಕಾಂಗ್ರೆಸ್ ಮಾಜಿ ಸಂಸದ ಮುಖ್ಯಸ್ಥ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ವಲಸೆ ಕಾರ್ಮಿಕರನ್ನು ಮರಳಿ ಕರೆತಂದಿದೆ, ಆದರೆ “ಕಾಂಗ್ರೆಸ್ಸಿಗರು ತಮ್ಮ ಮನೆಗಳಲ್ಲಿ ಅಡಗಿದ್ದಾರೆ” ಎಂದು ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಲಸೆ ಕಾರ್ಮಿಕರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳು ಟೀಕೆಯಲ್ಲಿ ತೊಡಗಿದ್ದಾರೆ ಸೋನು ಸೂದ್‌ರಂತಹ ವ್ಯಕ್ತಿಗಳು ನಿಶ್ಕಲ್ಮಷ ಸೇವೆಯಲ್ಲಿ ತೊಡಗಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...