Homeಮುಖಪುಟಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌...

ಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌ ಟೀಕೆ

- Advertisement -
- Advertisement -

ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮಹಾರಾಷ್ಟ್ರದ ಮುಂಬೈಯಲ್ಲಿ ಸಿಲುಕಿರುವ ತಮ್ಮ ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವಂತೆ ನಟ ಸೋನು ಸೂದ್ ಅವರನ್ನು ಟ್ವಿಟ್ಟರ್ ನಲ್ಲಿ ಕೇಳಿ ಭಾರೀ ಟೀಕೆಗೊಳಗಾಗಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಧ್ಯೆ ಮನೆಗೆ ಹಿಂತಿರುಗಲು ಸಾಧ್ಯವಾಗದೇ ಸಿಕ್ಕಿಕೊಂಡಿರುವ ಸಾವಿರಾರು ವಲಸೆ ಕಾರ್ಮಿಕರಿಗೆ ತನ್ನ ಸ್ವಂತ ಹಣದಲ್ಲಿ ಸಾರಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾ ಜಿಲ್ಲೆಗಳಿಂದ ವಲಸೆ ಬಂದವರ ಪಟ್ಟಿಯನ್ನು  ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಅವರನ್ನು ವಾಪಸ್‌ ಕಳಿಸುವಂತೆ ಸಹಾಯಕ್ಕಾಗಿ ಸೋನು ಸೂದ್‌ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್‌ ನಾಳೆಯೇ ಆ ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. “ನಿಮ್ಮ ವಲಸೆ ಸಹೋದರರನ್ನು ನಾಳೆ ನಿಮ್ಮ ಬಳಿಗೆ ಕಳುಹಿಸಲಾಗುವುದು ಸರ್. ನಾನು ಎಂದಾದರೂ ಮಧ್ಯಪ್ರದೇಶಕ್ಕೆ ಬಂದರೆ, ನನಗೆ ಪೋಹಾ (ಅವಲಕ್ಕಿ) ಕೊಡಿಸಿ.” ಎಂದು ಅವರು ಟ್ವೀಟ್‌ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

ಮುಂಬಯಿಯಲ್ಲಿ ಸಿಲುಕಿರುವ 168 ಜನರಲ್ಲಿ 55 ಜನರು ಸೂದ್ ಅವರ ಸಹಾಯದ ಮೇರೆಗೆ ತಮ್ಮ ಸ್ವಂತ ಸ್ಥಳಗಳಿಗ ಮರಳಬಹುದು ಎಂದು ಶುಕ್ಲಾ ನಂತರ ಹೇಳಿದ್ದಾರೆ.

ಆದರೆ, ಸೋಶಿಯಲ್ ಮೀಡಿಯಾ ಬಳಕೆದಾರರು ಶುಕ್ಲಾ ಅವರನ್ನು ಟ್ರೋಲ್ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಅದೇ ಬಿಜೆಪಿ ನಾಯಕ ಬಾಲಿವುಡ್ ನಟನ ಸಹಾಯ ಪಡೆಯಬೇಕಾಯಿತು ಎಂದರೆ ಅವುಗಳ ಕಾರ್ಯವೈಖರಿ ಹೇಗಿರಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಗುರಿಯಾಗಿಸಿ ತೀವ್ರ ಟೀಕೆ ನಡೆಸಿದೆ. “ರಾಜೇಂದ್ರ ಶುಕ್ಲಾ ಅವರ ಈ ಟ್ವೀಟ್ ಮಧ್ಯಪ್ರದೇಶದ ಕಹಿ ಸತ್ಯವನ್ನು ಬಹಿರಂಗಪಡಿಸುತ್ತದೆ. ಮಾಜಿ ಸಚಿವ ಮತ್ತು ಪ್ರಸ್ತುತ ರೇವಾ ಕ್ಷೇತ್ರದ ಬಿಜೆಪಿ ಶಾಸಕರಾದ ಶುಕ್ಲಾರವರು ಶಿವರಾಜ್ ಚೌಹಾಣ್‌ ಅವರ ಸರ್ಕಾರವನ್ನು ನಂಬುತ್ತಿಲ್ಲ. ಬದಲಿಗೆ ಅವರು ಮುಂಬೈನಲ್ಲಿ ಸಿಕ್ಕಿಬಿದ್ದ ವಲಸೆ ಕಾರ್ಮಿಕರಿಗಾಗಿ ನಟ ಸೋನು ಸೂದ್ ಅವರ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಕಾಂಗ್ರೆಸ್ ಮಾಜಿ ಸಂಸದ ಮುಖ್ಯಸ್ಥ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ವಲಸೆ ಕಾರ್ಮಿಕರನ್ನು ಮರಳಿ ಕರೆತಂದಿದೆ, ಆದರೆ “ಕಾಂಗ್ರೆಸ್ಸಿಗರು ತಮ್ಮ ಮನೆಗಳಲ್ಲಿ ಅಡಗಿದ್ದಾರೆ” ಎಂದು ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಲಸೆ ಕಾರ್ಮಿಕರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳು ಟೀಕೆಯಲ್ಲಿ ತೊಡಗಿದ್ದಾರೆ ಸೋನು ಸೂದ್‌ರಂತಹ ವ್ಯಕ್ತಿಗಳು ನಿಶ್ಕಲ್ಮಷ ಸೇವೆಯಲ್ಲಿ ತೊಡಗಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...