Homeಮುಖಪುಟಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌...

ಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌ ಟೀಕೆ

- Advertisement -
- Advertisement -

ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮಹಾರಾಷ್ಟ್ರದ ಮುಂಬೈಯಲ್ಲಿ ಸಿಲುಕಿರುವ ತಮ್ಮ ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವಂತೆ ನಟ ಸೋನು ಸೂದ್ ಅವರನ್ನು ಟ್ವಿಟ್ಟರ್ ನಲ್ಲಿ ಕೇಳಿ ಭಾರೀ ಟೀಕೆಗೊಳಗಾಗಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಧ್ಯೆ ಮನೆಗೆ ಹಿಂತಿರುಗಲು ಸಾಧ್ಯವಾಗದೇ ಸಿಕ್ಕಿಕೊಂಡಿರುವ ಸಾವಿರಾರು ವಲಸೆ ಕಾರ್ಮಿಕರಿಗೆ ತನ್ನ ಸ್ವಂತ ಹಣದಲ್ಲಿ ಸಾರಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾ ಜಿಲ್ಲೆಗಳಿಂದ ವಲಸೆ ಬಂದವರ ಪಟ್ಟಿಯನ್ನು  ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಅವರನ್ನು ವಾಪಸ್‌ ಕಳಿಸುವಂತೆ ಸಹಾಯಕ್ಕಾಗಿ ಸೋನು ಸೂದ್‌ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್‌ ನಾಳೆಯೇ ಆ ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. “ನಿಮ್ಮ ವಲಸೆ ಸಹೋದರರನ್ನು ನಾಳೆ ನಿಮ್ಮ ಬಳಿಗೆ ಕಳುಹಿಸಲಾಗುವುದು ಸರ್. ನಾನು ಎಂದಾದರೂ ಮಧ್ಯಪ್ರದೇಶಕ್ಕೆ ಬಂದರೆ, ನನಗೆ ಪೋಹಾ (ಅವಲಕ್ಕಿ) ಕೊಡಿಸಿ.” ಎಂದು ಅವರು ಟ್ವೀಟ್‌ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

ಮುಂಬಯಿಯಲ್ಲಿ ಸಿಲುಕಿರುವ 168 ಜನರಲ್ಲಿ 55 ಜನರು ಸೂದ್ ಅವರ ಸಹಾಯದ ಮೇರೆಗೆ ತಮ್ಮ ಸ್ವಂತ ಸ್ಥಳಗಳಿಗ ಮರಳಬಹುದು ಎಂದು ಶುಕ್ಲಾ ನಂತರ ಹೇಳಿದ್ದಾರೆ.

ಆದರೆ, ಸೋಶಿಯಲ್ ಮೀಡಿಯಾ ಬಳಕೆದಾರರು ಶುಕ್ಲಾ ಅವರನ್ನು ಟ್ರೋಲ್ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಅದೇ ಬಿಜೆಪಿ ನಾಯಕ ಬಾಲಿವುಡ್ ನಟನ ಸಹಾಯ ಪಡೆಯಬೇಕಾಯಿತು ಎಂದರೆ ಅವುಗಳ ಕಾರ್ಯವೈಖರಿ ಹೇಗಿರಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಗುರಿಯಾಗಿಸಿ ತೀವ್ರ ಟೀಕೆ ನಡೆಸಿದೆ. “ರಾಜೇಂದ್ರ ಶುಕ್ಲಾ ಅವರ ಈ ಟ್ವೀಟ್ ಮಧ್ಯಪ್ರದೇಶದ ಕಹಿ ಸತ್ಯವನ್ನು ಬಹಿರಂಗಪಡಿಸುತ್ತದೆ. ಮಾಜಿ ಸಚಿವ ಮತ್ತು ಪ್ರಸ್ತುತ ರೇವಾ ಕ್ಷೇತ್ರದ ಬಿಜೆಪಿ ಶಾಸಕರಾದ ಶುಕ್ಲಾರವರು ಶಿವರಾಜ್ ಚೌಹಾಣ್‌ ಅವರ ಸರ್ಕಾರವನ್ನು ನಂಬುತ್ತಿಲ್ಲ. ಬದಲಿಗೆ ಅವರು ಮುಂಬೈನಲ್ಲಿ ಸಿಕ್ಕಿಬಿದ್ದ ವಲಸೆ ಕಾರ್ಮಿಕರಿಗಾಗಿ ನಟ ಸೋನು ಸೂದ್ ಅವರ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಕಾಂಗ್ರೆಸ್ ಮಾಜಿ ಸಂಸದ ಮುಖ್ಯಸ್ಥ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ವಲಸೆ ಕಾರ್ಮಿಕರನ್ನು ಮರಳಿ ಕರೆತಂದಿದೆ, ಆದರೆ “ಕಾಂಗ್ರೆಸ್ಸಿಗರು ತಮ್ಮ ಮನೆಗಳಲ್ಲಿ ಅಡಗಿದ್ದಾರೆ” ಎಂದು ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಲಸೆ ಕಾರ್ಮಿಕರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳು ಟೀಕೆಯಲ್ಲಿ ತೊಡಗಿದ್ದಾರೆ ಸೋನು ಸೂದ್‌ರಂತಹ ವ್ಯಕ್ತಿಗಳು ನಿಶ್ಕಲ್ಮಷ ಸೇವೆಯಲ್ಲಿ ತೊಡಗಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...