Homeಮುಖಪುಟಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌...

ಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌ ಟೀಕೆ

- Advertisement -
- Advertisement -

ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮಹಾರಾಷ್ಟ್ರದ ಮುಂಬೈಯಲ್ಲಿ ಸಿಲುಕಿರುವ ತಮ್ಮ ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವಂತೆ ನಟ ಸೋನು ಸೂದ್ ಅವರನ್ನು ಟ್ವಿಟ್ಟರ್ ನಲ್ಲಿ ಕೇಳಿ ಭಾರೀ ಟೀಕೆಗೊಳಗಾಗಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಧ್ಯೆ ಮನೆಗೆ ಹಿಂತಿರುಗಲು ಸಾಧ್ಯವಾಗದೇ ಸಿಕ್ಕಿಕೊಂಡಿರುವ ಸಾವಿರಾರು ವಲಸೆ ಕಾರ್ಮಿಕರಿಗೆ ತನ್ನ ಸ್ವಂತ ಹಣದಲ್ಲಿ ಸಾರಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾ ಜಿಲ್ಲೆಗಳಿಂದ ವಲಸೆ ಬಂದವರ ಪಟ್ಟಿಯನ್ನು  ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಅವರನ್ನು ವಾಪಸ್‌ ಕಳಿಸುವಂತೆ ಸಹಾಯಕ್ಕಾಗಿ ಸೋನು ಸೂದ್‌ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್‌ ನಾಳೆಯೇ ಆ ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. “ನಿಮ್ಮ ವಲಸೆ ಸಹೋದರರನ್ನು ನಾಳೆ ನಿಮ್ಮ ಬಳಿಗೆ ಕಳುಹಿಸಲಾಗುವುದು ಸರ್. ನಾನು ಎಂದಾದರೂ ಮಧ್ಯಪ್ರದೇಶಕ್ಕೆ ಬಂದರೆ, ನನಗೆ ಪೋಹಾ (ಅವಲಕ್ಕಿ) ಕೊಡಿಸಿ.” ಎಂದು ಅವರು ಟ್ವೀಟ್‌ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

ಮುಂಬಯಿಯಲ್ಲಿ ಸಿಲುಕಿರುವ 168 ಜನರಲ್ಲಿ 55 ಜನರು ಸೂದ್ ಅವರ ಸಹಾಯದ ಮೇರೆಗೆ ತಮ್ಮ ಸ್ವಂತ ಸ್ಥಳಗಳಿಗ ಮರಳಬಹುದು ಎಂದು ಶುಕ್ಲಾ ನಂತರ ಹೇಳಿದ್ದಾರೆ.

ಆದರೆ, ಸೋಶಿಯಲ್ ಮೀಡಿಯಾ ಬಳಕೆದಾರರು ಶುಕ್ಲಾ ಅವರನ್ನು ಟ್ರೋಲ್ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಅದೇ ಬಿಜೆಪಿ ನಾಯಕ ಬಾಲಿವುಡ್ ನಟನ ಸಹಾಯ ಪಡೆಯಬೇಕಾಯಿತು ಎಂದರೆ ಅವುಗಳ ಕಾರ್ಯವೈಖರಿ ಹೇಗಿರಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಗುರಿಯಾಗಿಸಿ ತೀವ್ರ ಟೀಕೆ ನಡೆಸಿದೆ. “ರಾಜೇಂದ್ರ ಶುಕ್ಲಾ ಅವರ ಈ ಟ್ವೀಟ್ ಮಧ್ಯಪ್ರದೇಶದ ಕಹಿ ಸತ್ಯವನ್ನು ಬಹಿರಂಗಪಡಿಸುತ್ತದೆ. ಮಾಜಿ ಸಚಿವ ಮತ್ತು ಪ್ರಸ್ತುತ ರೇವಾ ಕ್ಷೇತ್ರದ ಬಿಜೆಪಿ ಶಾಸಕರಾದ ಶುಕ್ಲಾರವರು ಶಿವರಾಜ್ ಚೌಹಾಣ್‌ ಅವರ ಸರ್ಕಾರವನ್ನು ನಂಬುತ್ತಿಲ್ಲ. ಬದಲಿಗೆ ಅವರು ಮುಂಬೈನಲ್ಲಿ ಸಿಕ್ಕಿಬಿದ್ದ ವಲಸೆ ಕಾರ್ಮಿಕರಿಗಾಗಿ ನಟ ಸೋನು ಸೂದ್ ಅವರ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಕಾಂಗ್ರೆಸ್ ಮಾಜಿ ಸಂಸದ ಮುಖ್ಯಸ್ಥ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ವಲಸೆ ಕಾರ್ಮಿಕರನ್ನು ಮರಳಿ ಕರೆತಂದಿದೆ, ಆದರೆ “ಕಾಂಗ್ರೆಸ್ಸಿಗರು ತಮ್ಮ ಮನೆಗಳಲ್ಲಿ ಅಡಗಿದ್ದಾರೆ” ಎಂದು ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಲಸೆ ಕಾರ್ಮಿಕರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳು ಟೀಕೆಯಲ್ಲಿ ತೊಡಗಿದ್ದಾರೆ ಸೋನು ಸೂದ್‌ರಂತಹ ವ್ಯಕ್ತಿಗಳು ನಿಶ್ಕಲ್ಮಷ ಸೇವೆಯಲ್ಲಿ ತೊಡಗಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...