Homeಮುಖಪುಟಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌...

ಸೋನು ಸೂದ್‌ ಬಳಿ ಸಹಾಯ ಕೇಳಿದ ಮಾಜಿ ಸಚಿವ, ಹಾಲಿ BJP ಶಾಸಕ : ಕಾಂಗ್ರೆಸ್‌ ಟೀಕೆ

- Advertisement -
- Advertisement -

ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮಹಾರಾಷ್ಟ್ರದ ಮುಂಬೈಯಲ್ಲಿ ಸಿಲುಕಿರುವ ತಮ್ಮ ಮಧ್ಯಪ್ರದೇಶದ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವಂತೆ ನಟ ಸೋನು ಸೂದ್ ಅವರನ್ನು ಟ್ವಿಟ್ಟರ್ ನಲ್ಲಿ ಕೇಳಿ ಭಾರೀ ಟೀಕೆಗೊಳಗಾಗಿದ್ದಾರೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಧ್ಯೆ ಮನೆಗೆ ಹಿಂತಿರುಗಲು ಸಾಧ್ಯವಾಗದೇ ಸಿಕ್ಕಿಕೊಂಡಿರುವ ಸಾವಿರಾರು ವಲಸೆ ಕಾರ್ಮಿಕರಿಗೆ ತನ್ನ ಸ್ವಂತ ಹಣದಲ್ಲಿ ಸಾರಿಗೆ ವ್ಯವಸ್ಥೆ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಮಧ್ಯಪ್ರದೇಶದ ರೇವಾ ಮತ್ತು ಸತ್ನಾ ಜಿಲ್ಲೆಗಳಿಂದ ವಲಸೆ ಬಂದವರ ಪಟ್ಟಿಯನ್ನು  ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡು ಅವರನ್ನು ವಾಪಸ್‌ ಕಳಿಸುವಂತೆ ಸಹಾಯಕ್ಕಾಗಿ ಸೋನು ಸೂದ್‌ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್‌ ನಾಳೆಯೇ ಆ ಎಲ್ಲಾ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. “ನಿಮ್ಮ ವಲಸೆ ಸಹೋದರರನ್ನು ನಾಳೆ ನಿಮ್ಮ ಬಳಿಗೆ ಕಳುಹಿಸಲಾಗುವುದು ಸರ್. ನಾನು ಎಂದಾದರೂ ಮಧ್ಯಪ್ರದೇಶಕ್ಕೆ ಬಂದರೆ, ನನಗೆ ಪೋಹಾ (ಅವಲಕ್ಕಿ) ಕೊಡಿಸಿ.” ಎಂದು ಅವರು ಟ್ವೀಟ್‌ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದಾರೆ.

ಮುಂಬಯಿಯಲ್ಲಿ ಸಿಲುಕಿರುವ 168 ಜನರಲ್ಲಿ 55 ಜನರು ಸೂದ್ ಅವರ ಸಹಾಯದ ಮೇರೆಗೆ ತಮ್ಮ ಸ್ವಂತ ಸ್ಥಳಗಳಿಗ ಮರಳಬಹುದು ಎಂದು ಶುಕ್ಲಾ ನಂತರ ಹೇಳಿದ್ದಾರೆ.

ಆದರೆ, ಸೋಶಿಯಲ್ ಮೀಡಿಯಾ ಬಳಕೆದಾರರು ಶುಕ್ಲಾ ಅವರನ್ನು ಟ್ರೋಲ್ ಮಾಡಿದ್ದಾರೆ. ಕೇಂದ್ರದಲ್ಲಿ ಮತ್ತು ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ ಅದೇ ಬಿಜೆಪಿ ನಾಯಕ ಬಾಲಿವುಡ್ ನಟನ ಸಹಾಯ ಪಡೆಯಬೇಕಾಯಿತು ಎಂದರೆ ಅವುಗಳ ಕಾರ್ಯವೈಖರಿ ಹೇಗಿರಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸಹ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರನ್ನೂ ಗುರಿಯಾಗಿಸಿ ತೀವ್ರ ಟೀಕೆ ನಡೆಸಿದೆ. “ರಾಜೇಂದ್ರ ಶುಕ್ಲಾ ಅವರ ಈ ಟ್ವೀಟ್ ಮಧ್ಯಪ್ರದೇಶದ ಕಹಿ ಸತ್ಯವನ್ನು ಬಹಿರಂಗಪಡಿಸುತ್ತದೆ. ಮಾಜಿ ಸಚಿವ ಮತ್ತು ಪ್ರಸ್ತುತ ರೇವಾ ಕ್ಷೇತ್ರದ ಬಿಜೆಪಿ ಶಾಸಕರಾದ ಶುಕ್ಲಾರವರು ಶಿವರಾಜ್ ಚೌಹಾಣ್‌ ಅವರ ಸರ್ಕಾರವನ್ನು ನಂಬುತ್ತಿಲ್ಲ. ಬದಲಿಗೆ ಅವರು ಮುಂಬೈನಲ್ಲಿ ಸಿಕ್ಕಿಬಿದ್ದ ವಲಸೆ ಕಾರ್ಮಿಕರಿಗಾಗಿ ನಟ ಸೋನು ಸೂದ್ ಅವರ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ” ಎಂದು ಕಾಂಗ್ರೆಸ್ ಮಾಜಿ ಸಂಸದ ಮುಖ್ಯಸ್ಥ ಅರುಣ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಲಕ್ಷಾಂತರ ವಲಸೆ ಕಾರ್ಮಿಕರನ್ನು ಮರಳಿ ಕರೆತಂದಿದೆ, ಆದರೆ “ಕಾಂಗ್ರೆಸ್ಸಿಗರು ತಮ್ಮ ಮನೆಗಳಲ್ಲಿ ಅಡಗಿದ್ದಾರೆ” ಎಂದು ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಲಸೆ ಕಾರ್ಮಿಕರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳು ಟೀಕೆಯಲ್ಲಿ ತೊಡಗಿದ್ದಾರೆ ಸೋನು ಸೂದ್‌ರಂತಹ ವ್ಯಕ್ತಿಗಳು ನಿಶ್ಕಲ್ಮಷ ಸೇವೆಯಲ್ಲಿ ತೊಡಗಿದ್ದಾರೆ.

ಇಪ್ಪತ್ತು ದಿನಗಳ ಮೊದಲೇ ಮಹಾರಾಷ್ಟ್ರದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರು ತಮ್ಮ ಊರು ಕಲಬುರಗಿ ತಲುಪಲು ಸೋನು ಸೂದ್‌ 10 ಬಸ್‌ ವ್ಯವಸ್ಥೆ ಮಾಡಿದ್ದಲ್ಲದೆ, ಆ ಎಲ್ಲ ಕಾರ್ಮಿಕರಿಗೂ ಊಟದ ವ್ಯವಸ್ಥೆ ಮಾಡಿ ಮೆಚ್ಚುಗೆ ಪಡೆದಿದ್ದರು. ಅದಾದ ನಂತರ ಪಂಜಾಬ್‌ ಸರ್ಕಾರಕ್ಕೆ 1500 ಪಿಪಿಇ ಕಿಟ್‌ಗಳನ್ನು ದೇಣಿಗೆಯಾಗಿ ನೀಡಿ ಸುದ್ದಿಯಾದರು. ಜೊತೆಗೆ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್ ವಲಸೆ ಕಾರ್ಮಿಕರು ತಮ್ಮ ಮನೆ ಸೇರಲು ಸೋನು ಸಹಾಯ ಮಾಡಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಅವರು ಕೇರಳದಲ್ಲಿ ಸಿಕ್ಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಮಾಡಿದ ಸಹಾಯ ದೇಶಾದ್ಯಂತ ಸುದ್ದಿಯಾಯಿತು. ಏಕೆಂದರೆ ಕೇರಳದಿಂದ ಓಡಿಸ್ಸಾಗೆ ಬಸ್‌ ವ್ಯವಸ್ಥೆ ಸಾಧ್ಯವಿಲ್ಲ ಎಂದು ಅರಿತು ಸೋನು ಸೂದ್‌ ಅವರೆಲ್ಲರೂ ವಿಮಾನವನ್ನೇ ಬುಕ್‌ ಮಾಡಿ ತಮ್ಮ ಊರು ತಲುಪುವಂತೆ ಮಾಡಿದ್ದರು..

ಸೋನು ಸೂದ್‌ರವರ ಈ ಕಾಳಜಿಗೆ ಮೆಚ್ಚಿದ ಮಹಿಳೆಯೊಬ್ಬರು ತನ್ನ ಮಗುವಿಗೆ ಸೋನು ಸೂದ್‌ ಶ್ರೀವಾಸ್ತವ್‌ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ್ದರು. ಅಲ್ಲದೆ ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್‌ ಸಿಂಗ್‌ ಕೋಶಿಯಾರಿಯವರು ಸೋನು ಸೂದ್‌ರವರನ್ನು ರಾಜಭವನಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...