Homeಮುಖಪುಟನಕಲಿ ಶೈಕ್ಷಣಿಕ ದಾಖಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ

ನಕಲಿ ಶೈಕ್ಷಣಿಕ ದಾಖಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ

2015 ರಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿ ಶಾಸಕ ಪತ್ನಿಯ ನಕಲಿ ಶೈಕ್ಷಣಿಕ ದಾಖಲೆಯನ್ನು ನೀಡಿದ್ದರು.

- Advertisement -
- Advertisement -

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ ಲಾಲ್ ಮೀನಾ ಅವರನ್ನು ನಕಲಿ ಶೈಕ್ಷಣಿಕ ದಾಖಲೆ ನೀಡಿದ ಕಾರಣಕ್ಕೆ ಪೊಲೀಸರು ಬಂಧಿಸಿದ್ದಾರೆ. ಜುಲೈ 23 ರ ವರೆಗೆ ಮೀನಾ ಅವರನ್ನು ನ್ಯಾಯಂಗ ಬಂಧನಕ್ಕೆ ನೀಡಿ ಜೈಪುರ ನ್ಯಾಯಾಲಯ ಆದೇಶ ನೀಡಿದೆ.

2015ರಲ್ಲಿ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದ ಬಿಜೆಪಿ ಶಾಸಕ ನಕಲಿ ಶೈಕ್ಷಣಿಕ ದಾಖಲೆಯನ್ನು ನೀಡಿದ್ದರು. ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪತ್ನಿ ಶಾಂತಾ ದೇವಿಗೆ ಶಾಸಕ ಮೀನಾ ಗಾರ್ಡಿಯನ್‌ ಆಗಿ ಸಹಿ ಹಾಕಿದ್ದರು.

ಪತ್ನಿ ಶಾಂತಾದೇವಿ ಅವರು 5ನೇ ತರಗತಿಯನ್ನು ಓದಿದ್ದಾರೆ ಎಂದು ಮೀನಾ ದಾಖಲಾತಿ ನೀಡಿದ್ದಾಗಿ ವಿಚಾರಣೆಯ ವೇಳೆ ತಿಳಿದುಬಂದಿದೆ. ಶಾಂತಾ ದೇವಿ ಅವರು 5ನೇ ತರಗತಿ ಶಿಕ್ಷಣವನ್ನು ಪಡೆದಿಲ್ಲ. ನಕಲಿ ಶೈಕ್ಷಣಿಕ ದಾಖಲಾತಿ ನೀಡಿರುವುದು ತನಿಖೆಯಿಂದ ಕಂಡು ಬಂದಿದೆ. ಆ ಸಂಬಂಧ ಜೈಪುರ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್‌ ಕೂಡ ಸಲ್ಲಿಸಿದ್ದರು. ಪ್ರಕರಣದಲ್ಲಿ ಶಾಂತಾ ದೇವಿ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಮಂಗಳವಾರ ಶಾಸಕ ಅಮೃತ್‌ ಲಾಲ್‌ ಮೀನಾ ಅವರು ಪೊಲೀಸರಿಗೆ ಶರಣಾಗಿದ್ದಾರೆ. ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್‌ ವಜಾಗೊಳಿಸಿತ್ತು. ನಂತರ  ಸುಪ್ರೀಮ್‌ ಕೋರ್ಟ್‌ ಮೀನಾ ಅವರ ಬಂಧನಕ್ಕೆ 3 ವಾರಗಳ ತಡೆ ನಿಡಿ ಪೊಲೀಸರಿಗೆ ಶರಣಾಗುವಂತೆ ಆದೇಶ ನೀಡಿತ್ತು.

ಇದನ್ನೂ ಓದಿ: ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕನ ಬಂಧನ; ರಿಮ್ಯಾಂಡ್‌ಗೆ ಪಡೆದ ಪೊಲೀಸರು!

ಪ್ರಕರಣದ ತನಿಖೆ ನಡೆಸಿದ CB-CID ಶಾಂತಾ ದೇವಿ 5ನೇ ತರಗತಿ ಶಿಕ್ಷಣ ಪಡೆದಿಲ್ಲ ಎಂದು ಖಾತರಿ ಪಡಿಸಿದ್ದಲ್ಲದೇ ನ್ಯಾಯಲಯ ಅವರ ಚುನಾವಣಾ ಆಯ್ಕೆಯನ್ನು ರದ್ದುಗೊಳಿಸಿದೆ.

ಹಿಂದಿನ ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಸರ್ಕಾರ ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ನಿಗದಿ ಪಡಿಸಿತ್ತು. ಜಿಲ್ಲಾ ಪರಿಷತ್‌  ಚುನಾವಣೆಗೆ 10ನೇ ತರಗತಿಯನ್ನು ಕಡ್ಡಾಯಗೊಳಿಸಿದ್ದರೆ, ಸರಪಂಚ್ ಅಥವಾ ಗ್ರಾಮ ಪಂಚಾಯತ್‌ ಚುನಾವಣೆಗಳಿಗೆ ಅಭ್ಯರ್ಥಿಗಳು 8 ನೇ ತರಗತಿ ಶಿಕ್ಷಣ ಪಡೆಯುವುದು ಕಡ್ಡಾಯವಾಗಿಸಿ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ ಸರ್‌ ಪಂಚ್‌ ಚುನಾವಣೆಗೆ ಸ್ಪರ್ಧಿಸಲು 5 ತರಗತಿ ಶಿಕ್ಷಣವನ್ನು ಮಾನದಂಡವಾಗಿ ನಿರ್ಧರಿಸಲಾಗಿತ್ತು.

2018 ರಲ್ಲಿ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಶೈಕ್ಷಣಿಕ ವಿದ್ಯಾರ್ಹತೆ ಕಾನುನುಗಳನ್ನು ರದ್ದುಪಡಿಸಿ ಆದೇಶವನ್ನು ಹೊರಡಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಮೂವರು ಬಿಜೆಪಿ ಶಾಸಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...