Homeಕರ್ನಾಟಕಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

"ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು" ಎಂದಿರುವ ಹರ್ಷವರ್ಧನ್‌ ಅವರು ಸಚಿವರಿಗೆ ಇತಿಹಾಸ ಪಾಠ ಮಾಡಿದ್ದಾರೆ.

- Advertisement -
- Advertisement -

ಬೌದ್ಧಧರ್ಮದ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಸದನದಲ್ಲೇ ಕ್ಷಮೆ ಕೇಳಬೇಕು. ವಿರೋಧ ಪಕ್ಷಗಳು ಇದರ ಕುರಿತು ಸದನದಲ್ಲಿ ಮಾತನಾಡಿದರೆ, ನಾನೂ ಅವರೊಂದಿಗೆ ಧ್ವನಿಗೂಡಿಸುತ್ತೇನೆ ಎಂದು ಬಿಜೆಪಿ ಶಾಸಕ ಬಿ.ಹರ್ಷವರ್ಧನ್‌ ಹೇಳಿದ್ದಾರೆ.

ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಹರ್ಷವರ್ಧನ್ ಅವರು, ಸುಧಾಕರ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಬೌದ್ಧ ಧರ್ಮದ ಇತಿಹಾಸವನ್ನು ವಿವರಿಸಿದ್ದಾರೆ.

“ರಕ್ತಪಾತವನ್ನು ನೋಡಿ ನೊಂದು ಸಾಮ್ರಾಟ್‌ ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿದರು. ಬಳಿಕ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಅಷ್ಟು ಶ್ರೇಷ್ಟತೆ ಬೌದ್ಧಧರ್ಮಕ್ಕೆ ಇದೆ. ಹೀಗಾಗಿ ಬೌದ್ಧಧರ್ಮದ ಕುರಿತು ಅಷ್ಟು ಲಘುವಾಗಿ ಸಚಿವರು ಮಾತನಾಡಬಾರದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಭಾರತದ ರಾಷ್ಟ್ರಧ್ವಜದಲ್ಲಿರುವ ಅಶೋಕ ಚಕ್ರವು ಬೌದ್ಧ ಧರ್ಮದ ಸಂಕೇತ. ರಾಷ್ಟ್ರ ಲಾಂಛನವೂ ಬೌದ್ಧಧರ್ಮದ ಪ್ರೇರಣೆಯಿಂದ ಬಂದಿದೆ. ಇಂದು ನಾವು ಅದನ್ನೆಲ್ಲ ಅನುಸರಿಸುತ್ತಿದ್ದೇವೆ. ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಏನೋ ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು” ಎಂದು ಎಚ್ಚರಿಸಿದ್ದಾರೆ.

“ಸಚಿವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು. ಸದನದಲ್ಲಿ ವಿರೋಧ ಪಕ್ಷಗಳು ಇದರ ಕುರಿತು ಧ್ವನಿ ಎತ್ತಿದರೆ ನಾನು ಕೂಡ ಇದಕ್ಕೆ ಧ್ವನಿಗೂಡಿಸುತ್ತೇನೆ. ಸಚಿವರು ಸದನದಲ್ಲೇ ಕ್ಷಮಾಪಣೆ ಕೇಳಲಿ. ಬೌದ್ಧಧರ್ಮದ ಕುರಿತು ಲಘವಾಗಿ ಮಾತನಾಡುವುದು ಬೇಡ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

“ಬೌದ್ಧಧರ್ಮದ ಇತಿಹಾಸ ಬೇಡ, ಸಾಮ್ರಾಟ್ ಅಶೋಕನ ಕುರಿತು ತಿಳಿದುಕೊಳ್ಳಿ ಸಾಕು. ರಷ್ಯಾ ಅಧ್ಯಕ್ಷ ಉಕ್ರೇನ್‌ ವಶಪಡಿಸಿಕೊಳ್ಳಲು ಹೊರಟಿದ್ದಾನೆ. ಸಾಮ್ರಾಟ್ ಅಶೋಕ ಅಫಘಾನಿಸ್ತಾನ, ಶ್ರೀಲಂಕಾ, ಬರ್ಮಾವರೆಗೂ ಸಾಮ್ರಾಜ್ಯ ವಿಸ್ತರಿಸಿದ್ದ. ಅಂಥವನು ಕಳಿಂಗ ಯುದ್ಧದ ಬಳಿಕ ಶಸ್ತ್ರಾಸ್ತ್ರ ತ್ಯಜಿಸುತ್ತಾನೆಂದರೆ ಅವನ ಮನಸ್ಸಿಗೆ ಎಷ್ಟು ನೋವಾಗಿರಬೇಡ” ಎಂದು ಹರ್ಷವರ್ಧನ ಹೇಳಿದ್ದಾರೆ.

“ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿ ತನ್ನ ಮಕ್ಕಳನ್ನು ಶ್ರೀಲಂಕಾಕ್ಕೆ ಕಳುಹಿಸಿ ಬೌದ್ಧಧರ್ಮದ ಬಗ್ಗೆ ಪ್ರಚಾರ ಮಾಡುತ್ತಾನೆ. ಶ್ರೀಲಂಕಾದಂತಹ ದೇಶದಲ್ಲಿ ಬೌದ್ಧಧರ್ಮವೇ ಇಂದಿಗೂ ಇದೆ. ನಮ್ಮ ದೇಶದಲ್ಲಿ ಬೌದ್ಧಧರ್ಮ ಯಾಕೆ ಇಲ್ಲವಾಯಿತು ಎಂಬ ಚರ್ಚೆ ಬೇರೆ ಮಾಡೋಣ” ಎಂದಿದ್ದಾರೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮವನ್ನು ತ್ಯಜಿಸುವುದಾಗಿ ಹೇಳಿದ ಮೇಲೆ ಎಲ್ಲ ಧರ್ಮಗಳ ಬಗ್ಗೆ ಅಧ್ಯಯನ ಮಾಡಿದರು. ಇಸ್ಲಾಂ, ಕ್ರೈಸ್ತ, ಸಿಖ್‌ ಧರ್ಮಗಳ ಕುರಿತು ಚಿಂತಿಸಿದರು. ಕೊನೆಗೆ ಅವರು ಆಯ್ಕೆ ಮಾಡಿದ್ದು ಬೌದ್ಧಧರ್ಮವನ್ನು. ಅಷ್ಟು ಶ್ರೇಷ್ಠತೆ ಹಾಗೂ ಪಾವಿತ್ರ್ಯತೆ ಬೌದ್ಧಧರ್ಮದಲ್ಲಿ ಇದೆ. ಸಚಿವರು ಮಾತನಾಡುವಾಗ ಈ ಎಲ್ಲಾ ವಿಷಯವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಏನಿದು ವಿವಾದ?

ಚಿಕ್ಕಬಳ್ಳಾಪುರ ತಾಲ್ಲೂಕು ಬ್ರಾಹ್ಮಣರ ಸಂಘವು ಇತ್ತೀಚೆಗೆ ಏರ್ಪಡಿಸಿದ್ದ ‘ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, “ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರ ಹೆಗ್ಗಳಿಕೆಯಾಗಿದೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾಕರ್‌ ಹೇಳಿದ್ದರು.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರು: ಸಚಿವ ಸುಧಾಕರ್‌ ಹೇಳಿಕೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...