Homeಕರ್ನಾಟಕಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

"ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು" ಎಂದಿರುವ ಹರ್ಷವರ್ಧನ್‌ ಅವರು ಸಚಿವರಿಗೆ ಇತಿಹಾಸ ಪಾಠ ಮಾಡಿದ್ದಾರೆ.

- Advertisement -
- Advertisement -

ಬೌದ್ಧಧರ್ಮದ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಸದನದಲ್ಲೇ ಕ್ಷಮೆ ಕೇಳಬೇಕು. ವಿರೋಧ ಪಕ್ಷಗಳು ಇದರ ಕುರಿತು ಸದನದಲ್ಲಿ ಮಾತನಾಡಿದರೆ, ನಾನೂ ಅವರೊಂದಿಗೆ ಧ್ವನಿಗೂಡಿಸುತ್ತೇನೆ ಎಂದು ಬಿಜೆಪಿ ಶಾಸಕ ಬಿ.ಹರ್ಷವರ್ಧನ್‌ ಹೇಳಿದ್ದಾರೆ.

ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಹರ್ಷವರ್ಧನ್ ಅವರು, ಸುಧಾಕರ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಬೌದ್ಧ ಧರ್ಮದ ಇತಿಹಾಸವನ್ನು ವಿವರಿಸಿದ್ದಾರೆ.

“ರಕ್ತಪಾತವನ್ನು ನೋಡಿ ನೊಂದು ಸಾಮ್ರಾಟ್‌ ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿದರು. ಬಳಿಕ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಅಷ್ಟು ಶ್ರೇಷ್ಟತೆ ಬೌದ್ಧಧರ್ಮಕ್ಕೆ ಇದೆ. ಹೀಗಾಗಿ ಬೌದ್ಧಧರ್ಮದ ಕುರಿತು ಅಷ್ಟು ಲಘುವಾಗಿ ಸಚಿವರು ಮಾತನಾಡಬಾರದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಭಾರತದ ರಾಷ್ಟ್ರಧ್ವಜದಲ್ಲಿರುವ ಅಶೋಕ ಚಕ್ರವು ಬೌದ್ಧ ಧರ್ಮದ ಸಂಕೇತ. ರಾಷ್ಟ್ರ ಲಾಂಛನವೂ ಬೌದ್ಧಧರ್ಮದ ಪ್ರೇರಣೆಯಿಂದ ಬಂದಿದೆ. ಇಂದು ನಾವು ಅದನ್ನೆಲ್ಲ ಅನುಸರಿಸುತ್ತಿದ್ದೇವೆ. ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಏನೋ ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು” ಎಂದು ಎಚ್ಚರಿಸಿದ್ದಾರೆ.

“ಸಚಿವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು. ಸದನದಲ್ಲಿ ವಿರೋಧ ಪಕ್ಷಗಳು ಇದರ ಕುರಿತು ಧ್ವನಿ ಎತ್ತಿದರೆ ನಾನು ಕೂಡ ಇದಕ್ಕೆ ಧ್ವನಿಗೂಡಿಸುತ್ತೇನೆ. ಸಚಿವರು ಸದನದಲ್ಲೇ ಕ್ಷಮಾಪಣೆ ಕೇಳಲಿ. ಬೌದ್ಧಧರ್ಮದ ಕುರಿತು ಲಘವಾಗಿ ಮಾತನಾಡುವುದು ಬೇಡ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

“ಬೌದ್ಧಧರ್ಮದ ಇತಿಹಾಸ ಬೇಡ, ಸಾಮ್ರಾಟ್ ಅಶೋಕನ ಕುರಿತು ತಿಳಿದುಕೊಳ್ಳಿ ಸಾಕು. ರಷ್ಯಾ ಅಧ್ಯಕ್ಷ ಉಕ್ರೇನ್‌ ವಶಪಡಿಸಿಕೊಳ್ಳಲು ಹೊರಟಿದ್ದಾನೆ. ಸಾಮ್ರಾಟ್ ಅಶೋಕ ಅಫಘಾನಿಸ್ತಾನ, ಶ್ರೀಲಂಕಾ, ಬರ್ಮಾವರೆಗೂ ಸಾಮ್ರಾಜ್ಯ ವಿಸ್ತರಿಸಿದ್ದ. ಅಂಥವನು ಕಳಿಂಗ ಯುದ್ಧದ ಬಳಿಕ ಶಸ್ತ್ರಾಸ್ತ್ರ ತ್ಯಜಿಸುತ್ತಾನೆಂದರೆ ಅವನ ಮನಸ್ಸಿಗೆ ಎಷ್ಟು ನೋವಾಗಿರಬೇಡ” ಎಂದು ಹರ್ಷವರ್ಧನ ಹೇಳಿದ್ದಾರೆ.

“ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿ ತನ್ನ ಮಕ್ಕಳನ್ನು ಶ್ರೀಲಂಕಾಕ್ಕೆ ಕಳುಹಿಸಿ ಬೌದ್ಧಧರ್ಮದ ಬಗ್ಗೆ ಪ್ರಚಾರ ಮಾಡುತ್ತಾನೆ. ಶ್ರೀಲಂಕಾದಂತಹ ದೇಶದಲ್ಲಿ ಬೌದ್ಧಧರ್ಮವೇ ಇಂದಿಗೂ ಇದೆ. ನಮ್ಮ ದೇಶದಲ್ಲಿ ಬೌದ್ಧಧರ್ಮ ಯಾಕೆ ಇಲ್ಲವಾಯಿತು ಎಂಬ ಚರ್ಚೆ ಬೇರೆ ಮಾಡೋಣ” ಎಂದಿದ್ದಾರೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮವನ್ನು ತ್ಯಜಿಸುವುದಾಗಿ ಹೇಳಿದ ಮೇಲೆ ಎಲ್ಲ ಧರ್ಮಗಳ ಬಗ್ಗೆ ಅಧ್ಯಯನ ಮಾಡಿದರು. ಇಸ್ಲಾಂ, ಕ್ರೈಸ್ತ, ಸಿಖ್‌ ಧರ್ಮಗಳ ಕುರಿತು ಚಿಂತಿಸಿದರು. ಕೊನೆಗೆ ಅವರು ಆಯ್ಕೆ ಮಾಡಿದ್ದು ಬೌದ್ಧಧರ್ಮವನ್ನು. ಅಷ್ಟು ಶ್ರೇಷ್ಠತೆ ಹಾಗೂ ಪಾವಿತ್ರ್ಯತೆ ಬೌದ್ಧಧರ್ಮದಲ್ಲಿ ಇದೆ. ಸಚಿವರು ಮಾತನಾಡುವಾಗ ಈ ಎಲ್ಲಾ ವಿಷಯವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಏನಿದು ವಿವಾದ?

ಚಿಕ್ಕಬಳ್ಳಾಪುರ ತಾಲ್ಲೂಕು ಬ್ರಾಹ್ಮಣರ ಸಂಘವು ಇತ್ತೀಚೆಗೆ ಏರ್ಪಡಿಸಿದ್ದ ‘ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, “ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರ ಹೆಗ್ಗಳಿಕೆಯಾಗಿದೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾಕರ್‌ ಹೇಳಿದ್ದರು.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರು: ಸಚಿವ ಸುಧಾಕರ್‌ ಹೇಳಿಕೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...