Homeಕರ್ನಾಟಕಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

"ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು" ಎಂದಿರುವ ಹರ್ಷವರ್ಧನ್‌ ಅವರು ಸಚಿವರಿಗೆ ಇತಿಹಾಸ ಪಾಠ ಮಾಡಿದ್ದಾರೆ.

- Advertisement -
- Advertisement -

ಬೌದ್ಧಧರ್ಮದ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಸದನದಲ್ಲೇ ಕ್ಷಮೆ ಕೇಳಬೇಕು. ವಿರೋಧ ಪಕ್ಷಗಳು ಇದರ ಕುರಿತು ಸದನದಲ್ಲಿ ಮಾತನಾಡಿದರೆ, ನಾನೂ ಅವರೊಂದಿಗೆ ಧ್ವನಿಗೂಡಿಸುತ್ತೇನೆ ಎಂದು ಬಿಜೆಪಿ ಶಾಸಕ ಬಿ.ಹರ್ಷವರ್ಧನ್‌ ಹೇಳಿದ್ದಾರೆ.

ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಹರ್ಷವರ್ಧನ್ ಅವರು, ಸುಧಾಕರ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಬೌದ್ಧ ಧರ್ಮದ ಇತಿಹಾಸವನ್ನು ವಿವರಿಸಿದ್ದಾರೆ.

“ರಕ್ತಪಾತವನ್ನು ನೋಡಿ ನೊಂದು ಸಾಮ್ರಾಟ್‌ ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿದರು. ಬಳಿಕ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಅಷ್ಟು ಶ್ರೇಷ್ಟತೆ ಬೌದ್ಧಧರ್ಮಕ್ಕೆ ಇದೆ. ಹೀಗಾಗಿ ಬೌದ್ಧಧರ್ಮದ ಕುರಿತು ಅಷ್ಟು ಲಘುವಾಗಿ ಸಚಿವರು ಮಾತನಾಡಬಾರದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಭಾರತದ ರಾಷ್ಟ್ರಧ್ವಜದಲ್ಲಿರುವ ಅಶೋಕ ಚಕ್ರವು ಬೌದ್ಧ ಧರ್ಮದ ಸಂಕೇತ. ರಾಷ್ಟ್ರ ಲಾಂಛನವೂ ಬೌದ್ಧಧರ್ಮದ ಪ್ರೇರಣೆಯಿಂದ ಬಂದಿದೆ. ಇಂದು ನಾವು ಅದನ್ನೆಲ್ಲ ಅನುಸರಿಸುತ್ತಿದ್ದೇವೆ. ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಏನೋ ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು” ಎಂದು ಎಚ್ಚರಿಸಿದ್ದಾರೆ.

“ಸಚಿವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು. ಸದನದಲ್ಲಿ ವಿರೋಧ ಪಕ್ಷಗಳು ಇದರ ಕುರಿತು ಧ್ವನಿ ಎತ್ತಿದರೆ ನಾನು ಕೂಡ ಇದಕ್ಕೆ ಧ್ವನಿಗೂಡಿಸುತ್ತೇನೆ. ಸಚಿವರು ಸದನದಲ್ಲೇ ಕ್ಷಮಾಪಣೆ ಕೇಳಲಿ. ಬೌದ್ಧಧರ್ಮದ ಕುರಿತು ಲಘವಾಗಿ ಮಾತನಾಡುವುದು ಬೇಡ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

“ಬೌದ್ಧಧರ್ಮದ ಇತಿಹಾಸ ಬೇಡ, ಸಾಮ್ರಾಟ್ ಅಶೋಕನ ಕುರಿತು ತಿಳಿದುಕೊಳ್ಳಿ ಸಾಕು. ರಷ್ಯಾ ಅಧ್ಯಕ್ಷ ಉಕ್ರೇನ್‌ ವಶಪಡಿಸಿಕೊಳ್ಳಲು ಹೊರಟಿದ್ದಾನೆ. ಸಾಮ್ರಾಟ್ ಅಶೋಕ ಅಫಘಾನಿಸ್ತಾನ, ಶ್ರೀಲಂಕಾ, ಬರ್ಮಾವರೆಗೂ ಸಾಮ್ರಾಜ್ಯ ವಿಸ್ತರಿಸಿದ್ದ. ಅಂಥವನು ಕಳಿಂಗ ಯುದ್ಧದ ಬಳಿಕ ಶಸ್ತ್ರಾಸ್ತ್ರ ತ್ಯಜಿಸುತ್ತಾನೆಂದರೆ ಅವನ ಮನಸ್ಸಿಗೆ ಎಷ್ಟು ನೋವಾಗಿರಬೇಡ” ಎಂದು ಹರ್ಷವರ್ಧನ ಹೇಳಿದ್ದಾರೆ.

“ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿ ತನ್ನ ಮಕ್ಕಳನ್ನು ಶ್ರೀಲಂಕಾಕ್ಕೆ ಕಳುಹಿಸಿ ಬೌದ್ಧಧರ್ಮದ ಬಗ್ಗೆ ಪ್ರಚಾರ ಮಾಡುತ್ತಾನೆ. ಶ್ರೀಲಂಕಾದಂತಹ ದೇಶದಲ್ಲಿ ಬೌದ್ಧಧರ್ಮವೇ ಇಂದಿಗೂ ಇದೆ. ನಮ್ಮ ದೇಶದಲ್ಲಿ ಬೌದ್ಧಧರ್ಮ ಯಾಕೆ ಇಲ್ಲವಾಯಿತು ಎಂಬ ಚರ್ಚೆ ಬೇರೆ ಮಾಡೋಣ” ಎಂದಿದ್ದಾರೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮವನ್ನು ತ್ಯಜಿಸುವುದಾಗಿ ಹೇಳಿದ ಮೇಲೆ ಎಲ್ಲ ಧರ್ಮಗಳ ಬಗ್ಗೆ ಅಧ್ಯಯನ ಮಾಡಿದರು. ಇಸ್ಲಾಂ, ಕ್ರೈಸ್ತ, ಸಿಖ್‌ ಧರ್ಮಗಳ ಕುರಿತು ಚಿಂತಿಸಿದರು. ಕೊನೆಗೆ ಅವರು ಆಯ್ಕೆ ಮಾಡಿದ್ದು ಬೌದ್ಧಧರ್ಮವನ್ನು. ಅಷ್ಟು ಶ್ರೇಷ್ಠತೆ ಹಾಗೂ ಪಾವಿತ್ರ್ಯತೆ ಬೌದ್ಧಧರ್ಮದಲ್ಲಿ ಇದೆ. ಸಚಿವರು ಮಾತನಾಡುವಾಗ ಈ ಎಲ್ಲಾ ವಿಷಯವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಏನಿದು ವಿವಾದ?

ಚಿಕ್ಕಬಳ್ಳಾಪುರ ತಾಲ್ಲೂಕು ಬ್ರಾಹ್ಮಣರ ಸಂಘವು ಇತ್ತೀಚೆಗೆ ಏರ್ಪಡಿಸಿದ್ದ ‘ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, “ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರ ಹೆಗ್ಗಳಿಕೆಯಾಗಿದೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾಕರ್‌ ಹೇಳಿದ್ದರು.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರು: ಸಚಿವ ಸುಧಾಕರ್‌ ಹೇಳಿಕೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...