Homeಮುಖಪುಟಮಹರಾಷ್ಟ್ರ: ಸಿಎಂ ಶಿಂಧೆ ಆಪ್ತನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ

ಮಹರಾಷ್ಟ್ರ: ಸಿಎಂ ಶಿಂಧೆ ಆಪ್ತನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮಹರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಪ್ತ ಮತ್ತು ಶಿಂಧೆ ನೇತೃತ್ವದ ಶಿವಸೇನೆಯ ನಾಯಕನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.

ಶುಕ್ರವಾರ ರಾತ್ರಿ ಉಲ್ಲಾಸ್‌ನಗರ ಪ್ರದೇಶದ ಹಿಲ್‌ಲೈನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್‌ನ ಕೊಠಡಿಯೊಳಗೆ ಕಲ್ಯಾಣ್‌ ಕ್ಷೇತ್ರದ ಶಿವಸೇನಾ(ಶಿಂಧೆ ಬಣ) ಮುಖ್ಯಸ್ಥ ಮಹೇಶ್ ಗಾಯಕ್ವಾಡ್ ಮೇಲೆ ಕಲ್ಯಾಣ್ ಕ್ಷೇತ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದತ್ತಾತ್ರ್ಯ ಶಿಂಧೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹೇಶ್ ಗಾಯಕ್ವಾಡ್ ಮತ್ತು ಗಣಪತ್ ಗಾಯಕ್ವಾಡ್ ನಡುವೆ ಭೂ ವಿವಾದವಿತ್ತು. ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ಬಂದಿದ್ದರು, ಆದರೆ ಗಣಪತ್ ಗಾಯಕ್ವಾಡ್‌ ಮಾತುಕತೆಯ ಸಮಯದಲ್ಲಿ ಮಹೇಶ್ ಗಾಯಕ್ವಾಡ್ ಮತ್ತು ಅವರ ಸಹಚರರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ಪಠಾರೆ ಹೇಳಿದ್ದಾರೆ.

ಘಟನೆಯ ನಂತರ ಬಂಧಿತರಾಗಿರುವ ಗಣಪತ್ ಗಾಯಕ್ವಾಡ್ ಅವರು ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿ, ಹೌದು, ನಾನೇ ಗುಂಡು ಹಾರಿಸಿದೆ. ನನಗೆ ಯಾವುದೇ ವಿಷಾದವಿಲ್ಲ. ಪೊಲೀಸ್ ಠಾಣೆಯೊಳಗೆ ಪೊಲೀಸರ ಮುಂದೆಯೇ ನನ್ನ ಮಗನಿಗೆ ಥಳಿಸಿದರೆ ನಾನೇನು ಮಾಡುತ್ತೇನೆ? ಐದು ಸುತ್ತು ಗುಂಡು ಹಾರಿಸಿದ್ದೇನೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಅಪರಾಧಿಗಳ ಸಾಮ್ರಾಜ್ಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಶಿಂಧೆ ಸಾಹೇಬ್, ಉದ್ಧವ್ ಠಾಕ್ರೆ ಸಾಹೇಬ್‌ಗೆ ದ್ರೋಹ ಮಾಡಿದ್ದಾರೆ, ಅವರು ಬಿಜೆಪಿಗೂ ದ್ರೋಹ ಮಾಡುತ್ತಾರೆ. ಮಹಾರಾಷ್ಟ್ರದ ಒಳಿತಿಗೆ ಶಿಂಧೆ ರಾಜೀನಾಮೆ ನೀಡಬೇಕು. ದೇವೇಂದ್ರ ಫಡ್ನವೀಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು ನನ್ನ ವಿನಮ್ರ ವಿನಂತಿ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಮಹೇಶ್ ಗಾಯಕ್ವಾಡ್ ಅವರನ್ನು ಥಾಣೆ ನಗರದ ಖಾಸಗಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದು ಶಿವಸೇನೆಯ ಕಲ್ಯಾಣ್ ಉಸ್ತುವಾರಿ ಗೋಪಾಲ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಗಣಪತ್ ಗಾಯಕ್‌ವಾಡ್ ಅವರಲ್ಲದೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ 307 (ಕೊಲೆ ಯತ್ನ) ಮತ್ತು 120 ಬಿ (ಅಪರಾಧ ಸಂಚು) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಗೃಹ ಖಾತೆಯನ್ನು ಹೊಂದಿರುವ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್   ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಯಾರೂ ಕೂಡ ಕಾನೂನು ಮತ್ತು ಸುವ್ಯವಸ್ಥೆಯನ್ನು ತನ್ನ ಕೈಗೆ ತೆಗೆದುಕೊಳ್ಳಬಾರದು ಎಂದು ಎನ್‌ಸಿಪಿ ನಾಯಕ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಟೀಕಿಸಿದ್ದು, ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕ ಗುಂಡಿನ ದಾಳಿ ನಡೆಸಿದ್ದು, ಗುಂಡು ತಗುಲಿದ ವ್ಯಕ್ತಿ ಮಾಜಿ ಕಾರ್ಪೋರೇಟರ್ ಮತ್ತು ಸಿಎಂ ಆಪ್ತ. ಆರೋಪಿ ಶಾಸಕರ ಪಕ್ಷವೂ ಅಧಿಕಾರದಲ್ಲಿದೆ. ಇವರಿಗೆ ಕಾನೂನಿನ ಭಯವಿಲ್ಲ. ಕಾನೂನು ಸುವ್ಯವಸ್ತೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಉದ್ಧವ್ ಬಣದ ವಕ್ತಾರ ಆನಂದ್ ದುಬೆ ಹೇಳಿದ್ದಾರೆ. ಈ ಬಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಅವರು ಸೋಮವಾರ ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದರೆ, ರಾಜ್ಯದಲ್ಲಿ ಗೂಂಡಾಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಹೇಳಿದ್ದಾರೆ.

ಇದನ್ನು ಓದಿ: ನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...