HomeUncategorizedಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಕಾಂಗ್ರೆಸ್ ಹಾಗೂ ಸ್ವಪಕ್ಷೀಯ ನಾಯಕರೆ ಅವರ ವಿರುದ್ದ ಕಿಡಿ ಕಾರಿದ್ದು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದ ಅಸ್ಸಾಮಿ ಸಾಹಿತಿ ಸೈಯದ್ ಅಬ್ದುಲ್ ಮಲಿಕ್ ಅವರನ್ನು “ಬೌದ್ಧಿಕ ಜಿಹಾದಿ” ಎಂದು ಕರೆದಿದ್ದ ಅಸ್ಸಾಂನ ವಿವಾದಾತ್ಮಕ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಿರುದ್ಧ ವಿವಿಧ ಸಂಸ್ಥೆಳಿಂದ ಹಲವಾರು ದೂರುಗಳು ದಾಖಲಾಗಿದೆ.

ಸೈಯ್ಯದ್ ಅಬ್ದುಲ್ ಮಲಿಕ್ ಅಸ್ಸಾಮಿ ಸಾಹಿತ್ಯದ ಪ್ರಸಿದ್ದ ಬರಹಗಾರರಾಗಿದ್ದು, 1977 ರಲ್ಲಿ ಅಭಯಪುರಿಯಲ್ಲಿ ನಡೆದ ಅಸಮ್ ಸಾಹಿತ್ಯ ಸಭೆಯ ಅಧ್ಯಕ್ಷರಾಗಿದ್ದರು. ಅವರಿಗೆ ಪದ್ಮಶ್ರೀ, ಪದ್ಮ ಭೂಷಣ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಅಸ್ಸಾಂ ಅಲ್ಪಸಂಖ್ಯಾತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅವಾಲ್ ಈ ಹೇಳಿಕೆಯನ್ನು ಖಂಡಿಸಿ ಶಿಲಾದಿತ್ಯ ಅವರನ್ನು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಶಿಲಾದಿತ್ಯ ದೇವ್ ಅವರನ್ನು “ಹುಚ್ಚು ವ್ಯಕ್ತಿ” ಎಂದು ಕರೆದಿದೆ. ಆಗಾಗ್ಗೆ ವಿವಾದಾತ್ಮಕ ಮತ್ತು ಕೋಮು-ಸೂಕ್ಷ್ಮ ಹೇಳಿಕೆ ಕೊಡುತ್ತಿರುವ ಅವರನ್ನು “ಮಾನಸಿಕ ಆಶ್ರಯ” ಕ್ಕೆ ಕಳುಹಿಸಬೇಕು ಎಂದಿದೆ. ಅಲ್ಲದೆ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಬಾಲಿವುಡ್ ನಟಿಯನ್ನ ಉಲ್ಲೇಖಿಸಿ, ಅವರು “ಬಿಜೆಪಿಯ ರಾಖಿ ಸಾವಂತ್” ಎಂದು ಕಾಂಗ್ರೆಸ್ ಬಣ್ಣಿಸಿದೆ.

ಶಿಲಾದಿತ್ಯ ದೇವ್ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಗುವಾಹಟಿಯ ಹಟಿಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದೆ.

ಸದೌ ಅಸೋಮ್ ಗೋರಿಯಾ ದೇಶಿ ಜತಿ ಪರಿಷತ್ ಬಾರ್‌ಪೇಟಾ, ಧುಬ್ರಿ ಮತ್ತು ಮೊರಿಗಾಂವ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದೆ. ಸದೌ ಅಸೋಮ್ ಗೋರಿಯಾ ಯುವ-ಛಾತ್ರ ಪರಿಷತ್ ಗುವಾಹಟಿಯ ಜಲುಕ್ಬರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

ಅಸೋಮ್ ಸೋಂಗ್ರಾಮಿ ಯುವ ಮಂಚ್ ಕೂಡ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

“ಶಿಲಾದಿತ್ಯ ಹೇಳಿದ್ದನ್ನು ನಾನು ವಿರೋಧಿಸುತ್ತೇನೆ ಮತ್ತು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಬಿಜೆಪಿ ನಾಯಕ ಅವಾಲ್ ಹೇಳಿದ್ದಾರೆ. “ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಬಲವಾದ ನಿಲುವನ್ನು ಯಾವಾಗಲೂ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಕವಿ, ಕಾದಂಬರಿಕಾರ ಮತ್ತು ಸಣ್ಣಕಥೆಗಾರ ಮಲಿಕ್ ವಿರುದ್ಧ ಶಿಲಾದಿತ್ಯ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರು ಬಿಜೆಪಿ ಶಾಸಕರನ್ನು “ಮಾನಸಿಕ ಆಶ್ರಯಕ್ಕೆ ಕಳುಹಿಸಬೇಕಾದ ಹುಚ್ಚು ವ್ಯಕ್ತಿ” ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬರಾದ ಮುಖಂಡ ಕಮಲ್ ಕುಮಾರ್ ಮೇಧಿ, “ಶಿಲಾದಿತ್ಯ ದೇವ್ ಬಿಜೆಪಿಯ ರಾಖಿ ಸಾವಂತ್. ಅಸ್ಸಾಮೀ ಸಮಾಜ ಅವರಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದು” ಎಂದಿದ್ದಾರೆ.

ಅಸ್ಸಾಮ್ ಸಾಹಿತ್ಯ ಸಭೆಯ ಅಧ್ಯಕ್ಷ ಕುಲಾಧರ್ ಸೈಕಿಯಾ ಸಾಹಿತ್ಯ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ಮಲಿಕ್ ವಿರುದ್ಧದ “ವಿವಾದಾತ್ಮಕ ಹೇಳಿಕೆಗಳನ್ನು” ಖಂಡಿಸಿದರು.

ಕವಿ ಮಲಿಕ್ ಅವರನ್ನು “ಬೌದ್ಧಿಕ ಜಿಹಾದ್” ನಲ್ಲಿ ತೊಡಗಿಸಿಕೊಂಡಿದ್ದರು ಎಂದು ಶಿಲಾದಿತ್ಯ ದೇವ್ ಕಳೆದ ಶುಕ್ರವಾರ ಹೇಳಿದ್ದರು. ರಾಮ ದೇವಸ್ಥಾನಕ್ಕೆ ಶಿಲಾನ್ಯಾಸ ಮಾಡಿದ ದಿನದಂದು ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಕುರಿತು ಪ್ರತಿಕ್ರಿಯಿಸುವಾಗ ಅವರು ಈ ಮಾತುಗಳನ್ನಾಡಿದರು.

ರಾಜಕೀಯ ಸಂಬಂಧಗಳಾಚೆ ಇದು ರಾಜ್ಯಾದ್ಯಂತ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು ಅನೇಕ ಸಂಘಟನೆಗಳು ಅವರ ವಿರುದ್ದ ಪ್ರತಿಭಟನೆ ನಡೆಸಿವೆ.

ಶಿಲಾದಿತ್ಯ ಕಳೆದ ತಿಂಗಳಷ್ಟೆ, ಬಿಜೆಪಿ ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ ಜುಲೈ 14 ರಂದು ಬಿಜೆಪಿಯಿಂದ ಹೊರಗುಳಿಯುವುದಾಗಿ ಹೇಳಿದ್ದರು. ಆದರೆ ನಂತರ ಅವರು ಯು-ಟರ್ನ್ ರಾಜೀನಾಮೆ ನೀಡಲಿಲ್ಲ.

ಈ ಹಿಂದಿನಿಂದಲೂ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಿಲಾದಿತ್ಯ ಸುದ್ದಿಯಲ್ಲಿದ್ದಾರೆ. ಅಸ್ಸಾಮೀ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿತ್ತು.


ಓದಿ: ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...