HomeUncategorizedಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಕಾಂಗ್ರೆಸ್ ಹಾಗೂ ಸ್ವಪಕ್ಷೀಯ ನಾಯಕರೆ ಅವರ ವಿರುದ್ದ ಕಿಡಿ ಕಾರಿದ್ದು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದ ಅಸ್ಸಾಮಿ ಸಾಹಿತಿ ಸೈಯದ್ ಅಬ್ದುಲ್ ಮಲಿಕ್ ಅವರನ್ನು “ಬೌದ್ಧಿಕ ಜಿಹಾದಿ” ಎಂದು ಕರೆದಿದ್ದ ಅಸ್ಸಾಂನ ವಿವಾದಾತ್ಮಕ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಿರುದ್ಧ ವಿವಿಧ ಸಂಸ್ಥೆಳಿಂದ ಹಲವಾರು ದೂರುಗಳು ದಾಖಲಾಗಿದೆ.

ಸೈಯ್ಯದ್ ಅಬ್ದುಲ್ ಮಲಿಕ್ ಅಸ್ಸಾಮಿ ಸಾಹಿತ್ಯದ ಪ್ರಸಿದ್ದ ಬರಹಗಾರರಾಗಿದ್ದು, 1977 ರಲ್ಲಿ ಅಭಯಪುರಿಯಲ್ಲಿ ನಡೆದ ಅಸಮ್ ಸಾಹಿತ್ಯ ಸಭೆಯ ಅಧ್ಯಕ್ಷರಾಗಿದ್ದರು. ಅವರಿಗೆ ಪದ್ಮಶ್ರೀ, ಪದ್ಮ ಭೂಷಣ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಅಸ್ಸಾಂ ಅಲ್ಪಸಂಖ್ಯಾತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅವಾಲ್ ಈ ಹೇಳಿಕೆಯನ್ನು ಖಂಡಿಸಿ ಶಿಲಾದಿತ್ಯ ಅವರನ್ನು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಶಿಲಾದಿತ್ಯ ದೇವ್ ಅವರನ್ನು “ಹುಚ್ಚು ವ್ಯಕ್ತಿ” ಎಂದು ಕರೆದಿದೆ. ಆಗಾಗ್ಗೆ ವಿವಾದಾತ್ಮಕ ಮತ್ತು ಕೋಮು-ಸೂಕ್ಷ್ಮ ಹೇಳಿಕೆ ಕೊಡುತ್ತಿರುವ ಅವರನ್ನು “ಮಾನಸಿಕ ಆಶ್ರಯ” ಕ್ಕೆ ಕಳುಹಿಸಬೇಕು ಎಂದಿದೆ. ಅಲ್ಲದೆ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಬಾಲಿವುಡ್ ನಟಿಯನ್ನ ಉಲ್ಲೇಖಿಸಿ, ಅವರು “ಬಿಜೆಪಿಯ ರಾಖಿ ಸಾವಂತ್” ಎಂದು ಕಾಂಗ್ರೆಸ್ ಬಣ್ಣಿಸಿದೆ.

ಶಿಲಾದಿತ್ಯ ದೇವ್ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಗುವಾಹಟಿಯ ಹಟಿಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದೆ.

ಸದೌ ಅಸೋಮ್ ಗೋರಿಯಾ ದೇಶಿ ಜತಿ ಪರಿಷತ್ ಬಾರ್‌ಪೇಟಾ, ಧುಬ್ರಿ ಮತ್ತು ಮೊರಿಗಾಂವ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದೆ. ಸದೌ ಅಸೋಮ್ ಗೋರಿಯಾ ಯುವ-ಛಾತ್ರ ಪರಿಷತ್ ಗುವಾಹಟಿಯ ಜಲುಕ್ಬರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

ಅಸೋಮ್ ಸೋಂಗ್ರಾಮಿ ಯುವ ಮಂಚ್ ಕೂಡ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

“ಶಿಲಾದಿತ್ಯ ಹೇಳಿದ್ದನ್ನು ನಾನು ವಿರೋಧಿಸುತ್ತೇನೆ ಮತ್ತು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಬಿಜೆಪಿ ನಾಯಕ ಅವಾಲ್ ಹೇಳಿದ್ದಾರೆ. “ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಬಲವಾದ ನಿಲುವನ್ನು ಯಾವಾಗಲೂ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಕವಿ, ಕಾದಂಬರಿಕಾರ ಮತ್ತು ಸಣ್ಣಕಥೆಗಾರ ಮಲಿಕ್ ವಿರುದ್ಧ ಶಿಲಾದಿತ್ಯ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರು ಬಿಜೆಪಿ ಶಾಸಕರನ್ನು “ಮಾನಸಿಕ ಆಶ್ರಯಕ್ಕೆ ಕಳುಹಿಸಬೇಕಾದ ಹುಚ್ಚು ವ್ಯಕ್ತಿ” ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬರಾದ ಮುಖಂಡ ಕಮಲ್ ಕುಮಾರ್ ಮೇಧಿ, “ಶಿಲಾದಿತ್ಯ ದೇವ್ ಬಿಜೆಪಿಯ ರಾಖಿ ಸಾವಂತ್. ಅಸ್ಸಾಮೀ ಸಮಾಜ ಅವರಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದು” ಎಂದಿದ್ದಾರೆ.

ಅಸ್ಸಾಮ್ ಸಾಹಿತ್ಯ ಸಭೆಯ ಅಧ್ಯಕ್ಷ ಕುಲಾಧರ್ ಸೈಕಿಯಾ ಸಾಹಿತ್ಯ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ಮಲಿಕ್ ವಿರುದ್ಧದ “ವಿವಾದಾತ್ಮಕ ಹೇಳಿಕೆಗಳನ್ನು” ಖಂಡಿಸಿದರು.

ಕವಿ ಮಲಿಕ್ ಅವರನ್ನು “ಬೌದ್ಧಿಕ ಜಿಹಾದ್” ನಲ್ಲಿ ತೊಡಗಿಸಿಕೊಂಡಿದ್ದರು ಎಂದು ಶಿಲಾದಿತ್ಯ ದೇವ್ ಕಳೆದ ಶುಕ್ರವಾರ ಹೇಳಿದ್ದರು. ರಾಮ ದೇವಸ್ಥಾನಕ್ಕೆ ಶಿಲಾನ್ಯಾಸ ಮಾಡಿದ ದಿನದಂದು ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಕುರಿತು ಪ್ರತಿಕ್ರಿಯಿಸುವಾಗ ಅವರು ಈ ಮಾತುಗಳನ್ನಾಡಿದರು.

ರಾಜಕೀಯ ಸಂಬಂಧಗಳಾಚೆ ಇದು ರಾಜ್ಯಾದ್ಯಂತ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು ಅನೇಕ ಸಂಘಟನೆಗಳು ಅವರ ವಿರುದ್ದ ಪ್ರತಿಭಟನೆ ನಡೆಸಿವೆ.

ಶಿಲಾದಿತ್ಯ ಕಳೆದ ತಿಂಗಳಷ್ಟೆ, ಬಿಜೆಪಿ ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ ಜುಲೈ 14 ರಂದು ಬಿಜೆಪಿಯಿಂದ ಹೊರಗುಳಿಯುವುದಾಗಿ ಹೇಳಿದ್ದರು. ಆದರೆ ನಂತರ ಅವರು ಯು-ಟರ್ನ್ ರಾಜೀನಾಮೆ ನೀಡಲಿಲ್ಲ.

ಈ ಹಿಂದಿನಿಂದಲೂ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಿಲಾದಿತ್ಯ ಸುದ್ದಿಯಲ್ಲಿದ್ದಾರೆ. ಅಸ್ಸಾಮೀ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿತ್ತು.


ಓದಿ: ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...