HomeUncategorizedಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಕಾಂಗ್ರೆಸ್ ಹಾಗೂ ಸ್ವಪಕ್ಷೀಯ ನಾಯಕರೆ ಅವರ ವಿರುದ್ದ ಕಿಡಿ ಕಾರಿದ್ದು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದ ಅಸ್ಸಾಮಿ ಸಾಹಿತಿ ಸೈಯದ್ ಅಬ್ದುಲ್ ಮಲಿಕ್ ಅವರನ್ನು “ಬೌದ್ಧಿಕ ಜಿಹಾದಿ” ಎಂದು ಕರೆದಿದ್ದ ಅಸ್ಸಾಂನ ವಿವಾದಾತ್ಮಕ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಿರುದ್ಧ ವಿವಿಧ ಸಂಸ್ಥೆಳಿಂದ ಹಲವಾರು ದೂರುಗಳು ದಾಖಲಾಗಿದೆ.

ಸೈಯ್ಯದ್ ಅಬ್ದುಲ್ ಮಲಿಕ್ ಅಸ್ಸಾಮಿ ಸಾಹಿತ್ಯದ ಪ್ರಸಿದ್ದ ಬರಹಗಾರರಾಗಿದ್ದು, 1977 ರಲ್ಲಿ ಅಭಯಪುರಿಯಲ್ಲಿ ನಡೆದ ಅಸಮ್ ಸಾಹಿತ್ಯ ಸಭೆಯ ಅಧ್ಯಕ್ಷರಾಗಿದ್ದರು. ಅವರಿಗೆ ಪದ್ಮಶ್ರೀ, ಪದ್ಮ ಭೂಷಣ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಅಸ್ಸಾಂ ಅಲ್ಪಸಂಖ್ಯಾತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅವಾಲ್ ಈ ಹೇಳಿಕೆಯನ್ನು ಖಂಡಿಸಿ ಶಿಲಾದಿತ್ಯ ಅವರನ್ನು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಶಿಲಾದಿತ್ಯ ದೇವ್ ಅವರನ್ನು “ಹುಚ್ಚು ವ್ಯಕ್ತಿ” ಎಂದು ಕರೆದಿದೆ. ಆಗಾಗ್ಗೆ ವಿವಾದಾತ್ಮಕ ಮತ್ತು ಕೋಮು-ಸೂಕ್ಷ್ಮ ಹೇಳಿಕೆ ಕೊಡುತ್ತಿರುವ ಅವರನ್ನು “ಮಾನಸಿಕ ಆಶ್ರಯ” ಕ್ಕೆ ಕಳುಹಿಸಬೇಕು ಎಂದಿದೆ. ಅಲ್ಲದೆ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಬಾಲಿವುಡ್ ನಟಿಯನ್ನ ಉಲ್ಲೇಖಿಸಿ, ಅವರು “ಬಿಜೆಪಿಯ ರಾಖಿ ಸಾವಂತ್” ಎಂದು ಕಾಂಗ್ರೆಸ್ ಬಣ್ಣಿಸಿದೆ.

ಶಿಲಾದಿತ್ಯ ದೇವ್ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಗುವಾಹಟಿಯ ಹಟಿಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದೆ.

ಸದೌ ಅಸೋಮ್ ಗೋರಿಯಾ ದೇಶಿ ಜತಿ ಪರಿಷತ್ ಬಾರ್‌ಪೇಟಾ, ಧುಬ್ರಿ ಮತ್ತು ಮೊರಿಗಾಂವ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದೆ. ಸದೌ ಅಸೋಮ್ ಗೋರಿಯಾ ಯುವ-ಛಾತ್ರ ಪರಿಷತ್ ಗುವಾಹಟಿಯ ಜಲುಕ್ಬರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

ಅಸೋಮ್ ಸೋಂಗ್ರಾಮಿ ಯುವ ಮಂಚ್ ಕೂಡ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

“ಶಿಲಾದಿತ್ಯ ಹೇಳಿದ್ದನ್ನು ನಾನು ವಿರೋಧಿಸುತ್ತೇನೆ ಮತ್ತು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಬಿಜೆಪಿ ನಾಯಕ ಅವಾಲ್ ಹೇಳಿದ್ದಾರೆ. “ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಬಲವಾದ ನಿಲುವನ್ನು ಯಾವಾಗಲೂ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಕವಿ, ಕಾದಂಬರಿಕಾರ ಮತ್ತು ಸಣ್ಣಕಥೆಗಾರ ಮಲಿಕ್ ವಿರುದ್ಧ ಶಿಲಾದಿತ್ಯ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರು ಬಿಜೆಪಿ ಶಾಸಕರನ್ನು “ಮಾನಸಿಕ ಆಶ್ರಯಕ್ಕೆ ಕಳುಹಿಸಬೇಕಾದ ಹುಚ್ಚು ವ್ಯಕ್ತಿ” ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬರಾದ ಮುಖಂಡ ಕಮಲ್ ಕುಮಾರ್ ಮೇಧಿ, “ಶಿಲಾದಿತ್ಯ ದೇವ್ ಬಿಜೆಪಿಯ ರಾಖಿ ಸಾವಂತ್. ಅಸ್ಸಾಮೀ ಸಮಾಜ ಅವರಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದು” ಎಂದಿದ್ದಾರೆ.

ಅಸ್ಸಾಮ್ ಸಾಹಿತ್ಯ ಸಭೆಯ ಅಧ್ಯಕ್ಷ ಕುಲಾಧರ್ ಸೈಕಿಯಾ ಸಾಹಿತ್ಯ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ಮಲಿಕ್ ವಿರುದ್ಧದ “ವಿವಾದಾತ್ಮಕ ಹೇಳಿಕೆಗಳನ್ನು” ಖಂಡಿಸಿದರು.

ಕವಿ ಮಲಿಕ್ ಅವರನ್ನು “ಬೌದ್ಧಿಕ ಜಿಹಾದ್” ನಲ್ಲಿ ತೊಡಗಿಸಿಕೊಂಡಿದ್ದರು ಎಂದು ಶಿಲಾದಿತ್ಯ ದೇವ್ ಕಳೆದ ಶುಕ್ರವಾರ ಹೇಳಿದ್ದರು. ರಾಮ ದೇವಸ್ಥಾನಕ್ಕೆ ಶಿಲಾನ್ಯಾಸ ಮಾಡಿದ ದಿನದಂದು ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಕುರಿತು ಪ್ರತಿಕ್ರಿಯಿಸುವಾಗ ಅವರು ಈ ಮಾತುಗಳನ್ನಾಡಿದರು.

ರಾಜಕೀಯ ಸಂಬಂಧಗಳಾಚೆ ಇದು ರಾಜ್ಯಾದ್ಯಂತ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು ಅನೇಕ ಸಂಘಟನೆಗಳು ಅವರ ವಿರುದ್ದ ಪ್ರತಿಭಟನೆ ನಡೆಸಿವೆ.

ಶಿಲಾದಿತ್ಯ ಕಳೆದ ತಿಂಗಳಷ್ಟೆ, ಬಿಜೆಪಿ ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ ಜುಲೈ 14 ರಂದು ಬಿಜೆಪಿಯಿಂದ ಹೊರಗುಳಿಯುವುದಾಗಿ ಹೇಳಿದ್ದರು. ಆದರೆ ನಂತರ ಅವರು ಯು-ಟರ್ನ್ ರಾಜೀನಾಮೆ ನೀಡಲಿಲ್ಲ.

ಈ ಹಿಂದಿನಿಂದಲೂ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಿಲಾದಿತ್ಯ ಸುದ್ದಿಯಲ್ಲಿದ್ದಾರೆ. ಅಸ್ಸಾಮೀ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿತ್ತು.


ಓದಿ: ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...