HomeUncategorizedಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಕಾಂಗ್ರೆಸ್ ಹಾಗೂ ಸ್ವಪಕ್ಷೀಯ ನಾಯಕರೆ ಅವರ ವಿರುದ್ದ ಕಿಡಿ ಕಾರಿದ್ದು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದ ಅಸ್ಸಾಮಿ ಸಾಹಿತಿ ಸೈಯದ್ ಅಬ್ದುಲ್ ಮಲಿಕ್ ಅವರನ್ನು “ಬೌದ್ಧಿಕ ಜಿಹಾದಿ” ಎಂದು ಕರೆದಿದ್ದ ಅಸ್ಸಾಂನ ವಿವಾದಾತ್ಮಕ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಿರುದ್ಧ ವಿವಿಧ ಸಂಸ್ಥೆಳಿಂದ ಹಲವಾರು ದೂರುಗಳು ದಾಖಲಾಗಿದೆ.

ಸೈಯ್ಯದ್ ಅಬ್ದುಲ್ ಮಲಿಕ್ ಅಸ್ಸಾಮಿ ಸಾಹಿತ್ಯದ ಪ್ರಸಿದ್ದ ಬರಹಗಾರರಾಗಿದ್ದು, 1977 ರಲ್ಲಿ ಅಭಯಪುರಿಯಲ್ಲಿ ನಡೆದ ಅಸಮ್ ಸಾಹಿತ್ಯ ಸಭೆಯ ಅಧ್ಯಕ್ಷರಾಗಿದ್ದರು. ಅವರಿಗೆ ಪದ್ಮಶ್ರೀ, ಪದ್ಮ ಭೂಷಣ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಅಸ್ಸಾಂ ಅಲ್ಪಸಂಖ್ಯಾತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅವಾಲ್ ಈ ಹೇಳಿಕೆಯನ್ನು ಖಂಡಿಸಿ ಶಿಲಾದಿತ್ಯ ಅವರನ್ನು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಶಿಲಾದಿತ್ಯ ದೇವ್ ಅವರನ್ನು “ಹುಚ್ಚು ವ್ಯಕ್ತಿ” ಎಂದು ಕರೆದಿದೆ. ಆಗಾಗ್ಗೆ ವಿವಾದಾತ್ಮಕ ಮತ್ತು ಕೋಮು-ಸೂಕ್ಷ್ಮ ಹೇಳಿಕೆ ಕೊಡುತ್ತಿರುವ ಅವರನ್ನು “ಮಾನಸಿಕ ಆಶ್ರಯ” ಕ್ಕೆ ಕಳುಹಿಸಬೇಕು ಎಂದಿದೆ. ಅಲ್ಲದೆ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಬಾಲಿವುಡ್ ನಟಿಯನ್ನ ಉಲ್ಲೇಖಿಸಿ, ಅವರು “ಬಿಜೆಪಿಯ ರಾಖಿ ಸಾವಂತ್” ಎಂದು ಕಾಂಗ್ರೆಸ್ ಬಣ್ಣಿಸಿದೆ.

ಶಿಲಾದಿತ್ಯ ದೇವ್ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಗುವಾಹಟಿಯ ಹಟಿಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದೆ.

ಸದೌ ಅಸೋಮ್ ಗೋರಿಯಾ ದೇಶಿ ಜತಿ ಪರಿಷತ್ ಬಾರ್‌ಪೇಟಾ, ಧುಬ್ರಿ ಮತ್ತು ಮೊರಿಗಾಂವ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದೆ. ಸದೌ ಅಸೋಮ್ ಗೋರಿಯಾ ಯುವ-ಛಾತ್ರ ಪರಿಷತ್ ಗುವಾಹಟಿಯ ಜಲುಕ್ಬರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

ಅಸೋಮ್ ಸೋಂಗ್ರಾಮಿ ಯುವ ಮಂಚ್ ಕೂಡ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

“ಶಿಲಾದಿತ್ಯ ಹೇಳಿದ್ದನ್ನು ನಾನು ವಿರೋಧಿಸುತ್ತೇನೆ ಮತ್ತು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಬಿಜೆಪಿ ನಾಯಕ ಅವಾಲ್ ಹೇಳಿದ್ದಾರೆ. “ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಬಲವಾದ ನಿಲುವನ್ನು ಯಾವಾಗಲೂ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಕವಿ, ಕಾದಂಬರಿಕಾರ ಮತ್ತು ಸಣ್ಣಕಥೆಗಾರ ಮಲಿಕ್ ವಿರುದ್ಧ ಶಿಲಾದಿತ್ಯ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರು ಬಿಜೆಪಿ ಶಾಸಕರನ್ನು “ಮಾನಸಿಕ ಆಶ್ರಯಕ್ಕೆ ಕಳುಹಿಸಬೇಕಾದ ಹುಚ್ಚು ವ್ಯಕ್ತಿ” ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬರಾದ ಮುಖಂಡ ಕಮಲ್ ಕುಮಾರ್ ಮೇಧಿ, “ಶಿಲಾದಿತ್ಯ ದೇವ್ ಬಿಜೆಪಿಯ ರಾಖಿ ಸಾವಂತ್. ಅಸ್ಸಾಮೀ ಸಮಾಜ ಅವರಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದು” ಎಂದಿದ್ದಾರೆ.

ಅಸ್ಸಾಮ್ ಸಾಹಿತ್ಯ ಸಭೆಯ ಅಧ್ಯಕ್ಷ ಕುಲಾಧರ್ ಸೈಕಿಯಾ ಸಾಹಿತ್ಯ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ಮಲಿಕ್ ವಿರುದ್ಧದ “ವಿವಾದಾತ್ಮಕ ಹೇಳಿಕೆಗಳನ್ನು” ಖಂಡಿಸಿದರು.

ಕವಿ ಮಲಿಕ್ ಅವರನ್ನು “ಬೌದ್ಧಿಕ ಜಿಹಾದ್” ನಲ್ಲಿ ತೊಡಗಿಸಿಕೊಂಡಿದ್ದರು ಎಂದು ಶಿಲಾದಿತ್ಯ ದೇವ್ ಕಳೆದ ಶುಕ್ರವಾರ ಹೇಳಿದ್ದರು. ರಾಮ ದೇವಸ್ಥಾನಕ್ಕೆ ಶಿಲಾನ್ಯಾಸ ಮಾಡಿದ ದಿನದಂದು ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಕುರಿತು ಪ್ರತಿಕ್ರಿಯಿಸುವಾಗ ಅವರು ಈ ಮಾತುಗಳನ್ನಾಡಿದರು.

ರಾಜಕೀಯ ಸಂಬಂಧಗಳಾಚೆ ಇದು ರಾಜ್ಯಾದ್ಯಂತ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು ಅನೇಕ ಸಂಘಟನೆಗಳು ಅವರ ವಿರುದ್ದ ಪ್ರತಿಭಟನೆ ನಡೆಸಿವೆ.

ಶಿಲಾದಿತ್ಯ ಕಳೆದ ತಿಂಗಳಷ್ಟೆ, ಬಿಜೆಪಿ ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ ಜುಲೈ 14 ರಂದು ಬಿಜೆಪಿಯಿಂದ ಹೊರಗುಳಿಯುವುದಾಗಿ ಹೇಳಿದ್ದರು. ಆದರೆ ನಂತರ ಅವರು ಯು-ಟರ್ನ್ ರಾಜೀನಾಮೆ ನೀಡಲಿಲ್ಲ.

ಈ ಹಿಂದಿನಿಂದಲೂ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಿಲಾದಿತ್ಯ ಸುದ್ದಿಯಲ್ಲಿದ್ದಾರೆ. ಅಸ್ಸಾಮೀ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿತ್ತು.


ಓದಿ: ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...