Homeಮುಖಪುಟತನಗೇ ಮತ ಹಾಕುವಂತೆ ಮುಸ್ಲಿಮರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ ಪ್ರಿತಂ ಗೌಡ : ವಿಡಿಯೋ...

ತನಗೇ ಮತ ಹಾಕುವಂತೆ ಮುಸ್ಲಿಮರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ ಪ್ರಿತಂ ಗೌಡ : ವಿಡಿಯೋ ವೈರಲ್

- Advertisement -
- Advertisement -

ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಶ್ರೀನಗರದ ಮುಸ್ಲಿಂ ಮತದಾರರಿಗೆ ತನಗೇ ಮತ ಹಾಕುವಂತೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಳೆದ ವಾರ ರಾತ್ರಿ ಪ್ರೀತಂ ಗೌಡ ಶ್ರೀನಗರದ ಸ್ಥಳೀಯ ಮುಸ್ಲಿಂರನ್ನು ಉದ್ದೇಶಿಸಿ ಮಾತನಾಡುವಾಗ, “ದುಡಿದವರಿಗೆ ಮತ ಹಾಕಬೇಕು, ಬಾಯಲ್ಲಿ ಅಣ್ಣಾ ಎಂದು ಹೇಳಿ ಕೊನೆಗೆ ಬಿಜೆಪಿಗೆ ಮತ ಹಾಕುವುದಿಲ್ಲ ಎಂದರೆ ಕೆಲಸ ಮಾಡಿದವರಿಗೆ ಕೋಪ ಬರುತ್ತದೆ” ಎಂದಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನಗೆ ಮತ ಹಾಕದಿದ್ದರೆ ನಿಮ್ಮ ಕೆಲಸ ಏನೂ ಆಗುವುದಿಲ್ಲ.
ಈ ಹಿಂದೆ ವಿಧಾನಸಭೆ, ಲೋಕಸಭೆ ಮತ್ತು ನಗರಸಭೆ ಚುನಾವಣೆಗಳಲ್ಲಿ ನಮಗೆ ಮತ ಹಾಕಿಲ್ಲ. ಮುಸ್ಲಿಂ ಸಮುದಾಯ ಮೂರು ಬಾರಿ ಕೈ ಕೊಟ್ಟಿದ್ದಾರೆ ಎನ್ನುವುದು ವಿಡಿಯೋದಲ್ಲಿ ದಾಖಲಾಗಿದೆ.

ನೀವು ಕೂಲಿಗೆ ಹೋಗುವವರು ಅನ್ನುತ್ತೀರಿ. ಬೆಳಿಗ್ಗೆಯಿಂದ ಕೆಲಸ ಮಾಡಿ ಸಂಜೆ ಕೂಲಿ ಕೊಡದಿದ್ದರೆ ನಿಮಗೆ ಕೋಪ ಬರುತ್ತದೆ ಅಲ್ಲವೇ? ಹಾಗೆಯೇ ನನಗೂ ಸಹ. ಆದರೆ ಕೆಲಸ ಮಾಡಿದ ಸಂದರ್ಭದಲ್ಲಿ ಸಹಾಯ ಮಾಡದಿದ್ದರೆ ಈ ಕಡೆ ತಿರುಗಿ ನೋಡಬಾರದು ಎಂಬ ತೀರ್ಮಾನಕ್ಕೆ ಬರಬೇಕಾಗುತ್ತದೆ ಎಂದರು.

ಐದು ವರ್ಷಗಳ ನಂತರ ಮತ್ತೆ ಚುನಾವಣೆ ಬರಲಿದೆ. ನೀವು ನನಗೆ ಕೈ ಕೊಟ್ಟರೆ, ನಾನು ಕೈ, ಕೈಕಾಲು ಕೊಡುತ್ತೀನಿ. ಏಟಿಗೆ ಸಿಗುವುದಿಲ್ಲ. ನನ್ನ ಮನೆಗೆ ಬಂದರೆ ಕಾಫಿ ಕುಡಿಸಿ ಕಳುಹಿಸುತ್ತೇನೆ, ಯಾವುದೇ ಕೆಲಸ ಮಾಡಿಕೊಡುವುದಿಲ್ಲ. ಆ ತೀರ್ಮಾನಕ್ಕೆ ಬರದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

“ರಸ್ತೆ, ಚರಂಡಿ, ನೀರು ಒದಗಿಸುವುದು ನನ್ನ ಕರ್ತವ್ಯ. ಶಾಸಕನಾಗಿ ಅದನ್ನು ನಾನು ಮಾಡುತ್ತೇನೆ. ಬೇರೆ ಯಾವುದೇ ಕೆಲಸಗಳನ್ನು ಪ್ರತ್ಯೇಕವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಇದರಲ್ಲಿ ಯಾವುದೇ ಮುಲಾಜಿಲ್ಲ. ಇವತ್ತು ನೀವೆಲ್ಲರೂ ಸೇರಿ ಶಾಸಕರಿಗೆ ಒಂದೂವರೆ ಸಾವಿರ ಮತ ಕೊಡುತ್ತೇನೆ ಎಂದರೆ ಇಲ್ಲಿಂದ ಹೋಗುತ್ತೇನೆ
ತೀರ್ಮಾನಿಸಿ” ಎಂದು ಸ್ಥಳಿಯ ಮುಸ್ಲಿಮರಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...