Homeಮುಖಪುಟರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ಶಾಸಕರು ಮತ್ತು ಸಂಸದರು ಪದೇ ಪದೇ ಕೋವಿಡ್ ಲಸಿಕೆ ವಿವಾದದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈಗ ಇದೆ ಸಾಲಿಗೆ ಬೆಂಗಳೂರಿನ ಸಿ.ವಿ.ರಾಮನ್ ನಗರ ಶಾಸಕ ಎಸ್.ರಘು, ಸರ್ಕಾರಿ ಲಸಿಕೆಯನ್ನು ಶಾಸಕರು ನೀಡುತ್ತಿರುವ ಉಚಿತ ಲಸಿಕೆ ಎಂದು ಸ್ವಂತ ಸ್ಥಳದಲ್ಲಿ ಲಸಿಕಾ ಅಭಿಯಾನ ನಡೆಸಿದ್ದಾರೆ.

ಬೆಂಗಳೂರಿನ ಭುವನೇಶ್ವರಿ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (PHC) ಮೇ 31 ರಂದು ನಡೆಯಬೇಕಿದ್ದ ವ್ಯಾಕ್ಸಿನೇಷನ್ ಡ್ರೈವ್ ಶಾಸಕರ ಆದೇಶದಂತೆ ರದ್ದುಗೊಳಿಸಲಾಗಿದೆ. ಸುಮಾರು 300 ಜನರಿಗೆ ಮುಂಜಾನೆ ಟೋಕನ್‌ಗಳನ್ನು ನೀಡಲಾಗಿತ್ತು. ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ಲಸಿಕಾ ಅಭಿಯಾನವನ್ನು, ಬಿಜೆಪಿ ಶಾಸಕ ಎಸ್.ರಘು ಅವರ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ನಡೆಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಶಾಸಕರು ಉಚಿತ ವ್ಯಾಕ್ಸಿನೇಷನ್ ಡ್ರೈವ್ ಮಾಡುತ್ತಿದ್ದಾರೆ ಎಂದು ಪ್ರಚಾರ ಪಡಿಸುವ ಬ್ಯಾನರ್‌ನೊಂದಿಗೆ ಲಸಿಕೆ ನೀಡಲಾಗಿದೆ. ಜೊತೆಗೆ ಬಿಜೆಪಿಯ ಕಾರ್ಯಕರ್ತರು, ಶಾಸಕರ ಸ್ನೇಹಿತರು ಮತ್ತು ಕುಟುಂಬಗಳಿಗೆ ಮಾತ್ರ ಲಸಿಕೆ ನೀಡಿದರು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಘಟನೆ ಬಗ್ಗೆ ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಶನಿವಾರವಷ್ಟೇ ಶಾಸಕ ರವಿ ಸುಬ್ರಮಣ್ಯ ಇದೇ ರೀತಿಯ ವಿವಾದಕ್ಕೆ ಸಿಲುಕಿದ್ದರು, ಅಲ್ಲಿ ಅವರು ಲಸಿಕೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ 72 ಮತ್ತು 65 ವರ್ಷದ ಪೋಷಕರಿಗೆ ಲಸಿಕೆ ಟೋಕನ್ ಸಂಗ್ರಹಿಸಲು ಬೆಳಿಗ್ಗೆ 7 ಗಂಟೆಗೆ ಆರೋಗ್ಯ ಕೇಂದ್ರಕ್ಕೆ ತೇರಳಿದ್ದ ಸ್ಥಳೀಯ ನಿವಾಸಿ ಮಂಜು ಹೇಳೂವಂತೆ, ’ಟೋಕನ್ ಪ್ರಕಾರ ಬೆಳಿಗ್ಗೆ 9: 45 ಕ್ಕೆ ಪೋಷಕರನ್ನು ಕರೆತರಲು ತಿಳಿಸಲಾಗಿತ್ತು. ನಾವು ನಿಗದಿತ ಸಮಯಕ್ಕಿಂತ ಮುಂಚೆಯೇ ಅಲ್ಲಿಗೆ ತಲುಪಿದ್ದೇವು.  ಆದರೆ ನಾವು ಅಲ್ಲಿಗೆ ಹೋದಾಗ ಬೆಳಿಗ್ಗೆ 10: 15 ಕ್ಕೆ ಇಲ್ಲಿ ಲಸಿಕೆ ನೀಡುವುದಿಲ್ಲ ಆದರೆ ಎಲ್ಲರೂ ಕಲ್ಯಾಣ ಮಂಟಪಕ್ಕೆ ಹೋಗಬೇಕು ಎಂದು ತಿಳಿಸಿದರು’ ಎಂದರು.

’ಕಲ್ಯಾಣ ಮಂಟಪದ ಬಳಿ ನೂರಾರು ಜನರು ದೈಹಿಕ ಅಂತರ ಕಾಯ್ದುಕೊಳ್ಳದೆ ನಿಂತಿದ್ದರು. ನಾನು ನನ್ನ ತಂದೆ-ತಾಯಿಯನ್ನು ಇಷ್ಟು ದಿನ ಹೊರಗೆ ಕಳುಹಿಸಿಲ್ಲ. ಇಲ್ಲಿನ ಜನಸಂದಣಿ ನೋಡಿ ಭಯವಾಯಿತು. ಅವರಿಗಾಗಿ ನಾನು 45 ನಿಮಿಷಗಳ ಕಾಲ ಸರದಿಯಲ್ಲಿ ಕಾಯುತ್ತಿದ್ದೆ. ಆದರೆ, ಅಲ್ಲೂ ಕೂಡ ಶಾಸಕರು ಬಂದು ಲಸಿಕಾ ಅಭಿಯಾನ ಉದ್ಘಾಟಿಸಬೇಕು ಎಂದು ತಿಳಿಸಿದರು. ಇವು ಸರ್ಕಾರದ ಲಸಿಕೆಗಳು, ಇವುಗಳನ್ನು ಅವರು ಹೇಗೆ ತಮ್ಮ ಜನರಿಗೆ ಮಾತ್ರ ನೀಡಲು ಸಾಧ್ಯ…? ನನ್ನ ಹೆತ್ತವರಿಗೆ ಯಾವಾಗ ಲಸಿಕೆ ದೊರೆಯುತ್ತದೋ ನನಗೆ ತಿಳಿದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನಿವಾಸಿ ಜಗದೀಶ್, “ಶಾಸಕರು ವ್ಯಾಕ್ಸಿನೇಷನ್ ಕೇಂದ್ರವನ್ನು ತಮ್ಮ ಸ್ವಂತ ಆಸ್ತಿಗೆ ಸ್ಥಳಾಂತರಿಸಿದ್ದಾರೆ. ಆದರೆ, ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬೇಕು. ಆರೋಗ್ಯ ಕೇಂದ್ರಗಳಿಗೆ ನೀಡಬೇಕಾದ ಸರ್ಕಾರಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದೇನೆ ಎಂದು ಹೇಳಿಕೊಂಡು ಬಿಜೆಪಿ ಶಾಸಕ ತಮ್ಮ ಫೋಟೋದೊಂದಿಗೆ ಬ್ಯಾನರ್ ಹಾಕಿದ್ದಾರೆ. ಜೊತೆಗೆ ಅವರು ತಮ್ಮ ಪಕ್ಷದ ಜನರಿಗೆ ಲಸಿಕೆಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.


 

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...