Homeಮುಖಪುಟರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ಶಾಸಕರು ಮತ್ತು ಸಂಸದರು ಪದೇ ಪದೇ ಕೋವಿಡ್ ಲಸಿಕೆ ವಿವಾದದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈಗ ಇದೆ ಸಾಲಿಗೆ ಬೆಂಗಳೂರಿನ ಸಿ.ವಿ.ರಾಮನ್ ನಗರ ಶಾಸಕ ಎಸ್.ರಘು, ಸರ್ಕಾರಿ ಲಸಿಕೆಯನ್ನು ಶಾಸಕರು ನೀಡುತ್ತಿರುವ ಉಚಿತ ಲಸಿಕೆ ಎಂದು ಸ್ವಂತ ಸ್ಥಳದಲ್ಲಿ ಲಸಿಕಾ ಅಭಿಯಾನ ನಡೆಸಿದ್ದಾರೆ.

ಬೆಂಗಳೂರಿನ ಭುವನೇಶ್ವರಿ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (PHC) ಮೇ 31 ರಂದು ನಡೆಯಬೇಕಿದ್ದ ವ್ಯಾಕ್ಸಿನೇಷನ್ ಡ್ರೈವ್ ಶಾಸಕರ ಆದೇಶದಂತೆ ರದ್ದುಗೊಳಿಸಲಾಗಿದೆ. ಸುಮಾರು 300 ಜನರಿಗೆ ಮುಂಜಾನೆ ಟೋಕನ್‌ಗಳನ್ನು ನೀಡಲಾಗಿತ್ತು. ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ಲಸಿಕಾ ಅಭಿಯಾನವನ್ನು, ಬಿಜೆಪಿ ಶಾಸಕ ಎಸ್.ರಘು ಅವರ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ನಡೆಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಶಾಸಕರು ಉಚಿತ ವ್ಯಾಕ್ಸಿನೇಷನ್ ಡ್ರೈವ್ ಮಾಡುತ್ತಿದ್ದಾರೆ ಎಂದು ಪ್ರಚಾರ ಪಡಿಸುವ ಬ್ಯಾನರ್‌ನೊಂದಿಗೆ ಲಸಿಕೆ ನೀಡಲಾಗಿದೆ. ಜೊತೆಗೆ ಬಿಜೆಪಿಯ ಕಾರ್ಯಕರ್ತರು, ಶಾಸಕರ ಸ್ನೇಹಿತರು ಮತ್ತು ಕುಟುಂಬಗಳಿಗೆ ಮಾತ್ರ ಲಸಿಕೆ ನೀಡಿದರು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಘಟನೆ ಬಗ್ಗೆ ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಶನಿವಾರವಷ್ಟೇ ಶಾಸಕ ರವಿ ಸುಬ್ರಮಣ್ಯ ಇದೇ ರೀತಿಯ ವಿವಾದಕ್ಕೆ ಸಿಲುಕಿದ್ದರು, ಅಲ್ಲಿ ಅವರು ಲಸಿಕೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ 72 ಮತ್ತು 65 ವರ್ಷದ ಪೋಷಕರಿಗೆ ಲಸಿಕೆ ಟೋಕನ್ ಸಂಗ್ರಹಿಸಲು ಬೆಳಿಗ್ಗೆ 7 ಗಂಟೆಗೆ ಆರೋಗ್ಯ ಕೇಂದ್ರಕ್ಕೆ ತೇರಳಿದ್ದ ಸ್ಥಳೀಯ ನಿವಾಸಿ ಮಂಜು ಹೇಳೂವಂತೆ, ’ಟೋಕನ್ ಪ್ರಕಾರ ಬೆಳಿಗ್ಗೆ 9: 45 ಕ್ಕೆ ಪೋಷಕರನ್ನು ಕರೆತರಲು ತಿಳಿಸಲಾಗಿತ್ತು. ನಾವು ನಿಗದಿತ ಸಮಯಕ್ಕಿಂತ ಮುಂಚೆಯೇ ಅಲ್ಲಿಗೆ ತಲುಪಿದ್ದೇವು.  ಆದರೆ ನಾವು ಅಲ್ಲಿಗೆ ಹೋದಾಗ ಬೆಳಿಗ್ಗೆ 10: 15 ಕ್ಕೆ ಇಲ್ಲಿ ಲಸಿಕೆ ನೀಡುವುದಿಲ್ಲ ಆದರೆ ಎಲ್ಲರೂ ಕಲ್ಯಾಣ ಮಂಟಪಕ್ಕೆ ಹೋಗಬೇಕು ಎಂದು ತಿಳಿಸಿದರು’ ಎಂದರು.

’ಕಲ್ಯಾಣ ಮಂಟಪದ ಬಳಿ ನೂರಾರು ಜನರು ದೈಹಿಕ ಅಂತರ ಕಾಯ್ದುಕೊಳ್ಳದೆ ನಿಂತಿದ್ದರು. ನಾನು ನನ್ನ ತಂದೆ-ತಾಯಿಯನ್ನು ಇಷ್ಟು ದಿನ ಹೊರಗೆ ಕಳುಹಿಸಿಲ್ಲ. ಇಲ್ಲಿನ ಜನಸಂದಣಿ ನೋಡಿ ಭಯವಾಯಿತು. ಅವರಿಗಾಗಿ ನಾನು 45 ನಿಮಿಷಗಳ ಕಾಲ ಸರದಿಯಲ್ಲಿ ಕಾಯುತ್ತಿದ್ದೆ. ಆದರೆ, ಅಲ್ಲೂ ಕೂಡ ಶಾಸಕರು ಬಂದು ಲಸಿಕಾ ಅಭಿಯಾನ ಉದ್ಘಾಟಿಸಬೇಕು ಎಂದು ತಿಳಿಸಿದರು. ಇವು ಸರ್ಕಾರದ ಲಸಿಕೆಗಳು, ಇವುಗಳನ್ನು ಅವರು ಹೇಗೆ ತಮ್ಮ ಜನರಿಗೆ ಮಾತ್ರ ನೀಡಲು ಸಾಧ್ಯ…? ನನ್ನ ಹೆತ್ತವರಿಗೆ ಯಾವಾಗ ಲಸಿಕೆ ದೊರೆಯುತ್ತದೋ ನನಗೆ ತಿಳಿದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನಿವಾಸಿ ಜಗದೀಶ್, “ಶಾಸಕರು ವ್ಯಾಕ್ಸಿನೇಷನ್ ಕೇಂದ್ರವನ್ನು ತಮ್ಮ ಸ್ವಂತ ಆಸ್ತಿಗೆ ಸ್ಥಳಾಂತರಿಸಿದ್ದಾರೆ. ಆದರೆ, ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬೇಕು. ಆರೋಗ್ಯ ಕೇಂದ್ರಗಳಿಗೆ ನೀಡಬೇಕಾದ ಸರ್ಕಾರಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದೇನೆ ಎಂದು ಹೇಳಿಕೊಂಡು ಬಿಜೆಪಿ ಶಾಸಕ ತಮ್ಮ ಫೋಟೋದೊಂದಿಗೆ ಬ್ಯಾನರ್ ಹಾಕಿದ್ದಾರೆ. ಜೊತೆಗೆ ಅವರು ತಮ್ಮ ಪಕ್ಷದ ಜನರಿಗೆ ಲಸಿಕೆಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.


 

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...