Homeಮುಖಪುಟರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ಶಾಸಕರು ಮತ್ತು ಸಂಸದರು ಪದೇ ಪದೇ ಕೋವಿಡ್ ಲಸಿಕೆ ವಿವಾದದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈಗ ಇದೆ ಸಾಲಿಗೆ ಬೆಂಗಳೂರಿನ ಸಿ.ವಿ.ರಾಮನ್ ನಗರ ಶಾಸಕ ಎಸ್.ರಘು, ಸರ್ಕಾರಿ ಲಸಿಕೆಯನ್ನು ಶಾಸಕರು ನೀಡುತ್ತಿರುವ ಉಚಿತ ಲಸಿಕೆ ಎಂದು ಸ್ವಂತ ಸ್ಥಳದಲ್ಲಿ ಲಸಿಕಾ ಅಭಿಯಾನ ನಡೆಸಿದ್ದಾರೆ.

ಬೆಂಗಳೂರಿನ ಭುವನೇಶ್ವರಿ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (PHC) ಮೇ 31 ರಂದು ನಡೆಯಬೇಕಿದ್ದ ವ್ಯಾಕ್ಸಿನೇಷನ್ ಡ್ರೈವ್ ಶಾಸಕರ ಆದೇಶದಂತೆ ರದ್ದುಗೊಳಿಸಲಾಗಿದೆ. ಸುಮಾರು 300 ಜನರಿಗೆ ಮುಂಜಾನೆ ಟೋಕನ್‌ಗಳನ್ನು ನೀಡಲಾಗಿತ್ತು. ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ಲಸಿಕಾ ಅಭಿಯಾನವನ್ನು, ಬಿಜೆಪಿ ಶಾಸಕ ಎಸ್.ರಘು ಅವರ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ನಡೆಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಶಾಸಕರು ಉಚಿತ ವ್ಯಾಕ್ಸಿನೇಷನ್ ಡ್ರೈವ್ ಮಾಡುತ್ತಿದ್ದಾರೆ ಎಂದು ಪ್ರಚಾರ ಪಡಿಸುವ ಬ್ಯಾನರ್‌ನೊಂದಿಗೆ ಲಸಿಕೆ ನೀಡಲಾಗಿದೆ. ಜೊತೆಗೆ ಬಿಜೆಪಿಯ ಕಾರ್ಯಕರ್ತರು, ಶಾಸಕರ ಸ್ನೇಹಿತರು ಮತ್ತು ಕುಟುಂಬಗಳಿಗೆ ಮಾತ್ರ ಲಸಿಕೆ ನೀಡಿದರು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಘಟನೆ ಬಗ್ಗೆ ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಶನಿವಾರವಷ್ಟೇ ಶಾಸಕ ರವಿ ಸುಬ್ರಮಣ್ಯ ಇದೇ ರೀತಿಯ ವಿವಾದಕ್ಕೆ ಸಿಲುಕಿದ್ದರು, ಅಲ್ಲಿ ಅವರು ಲಸಿಕೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ 72 ಮತ್ತು 65 ವರ್ಷದ ಪೋಷಕರಿಗೆ ಲಸಿಕೆ ಟೋಕನ್ ಸಂಗ್ರಹಿಸಲು ಬೆಳಿಗ್ಗೆ 7 ಗಂಟೆಗೆ ಆರೋಗ್ಯ ಕೇಂದ್ರಕ್ಕೆ ತೇರಳಿದ್ದ ಸ್ಥಳೀಯ ನಿವಾಸಿ ಮಂಜು ಹೇಳೂವಂತೆ, ’ಟೋಕನ್ ಪ್ರಕಾರ ಬೆಳಿಗ್ಗೆ 9: 45 ಕ್ಕೆ ಪೋಷಕರನ್ನು ಕರೆತರಲು ತಿಳಿಸಲಾಗಿತ್ತು. ನಾವು ನಿಗದಿತ ಸಮಯಕ್ಕಿಂತ ಮುಂಚೆಯೇ ಅಲ್ಲಿಗೆ ತಲುಪಿದ್ದೇವು.  ಆದರೆ ನಾವು ಅಲ್ಲಿಗೆ ಹೋದಾಗ ಬೆಳಿಗ್ಗೆ 10: 15 ಕ್ಕೆ ಇಲ್ಲಿ ಲಸಿಕೆ ನೀಡುವುದಿಲ್ಲ ಆದರೆ ಎಲ್ಲರೂ ಕಲ್ಯಾಣ ಮಂಟಪಕ್ಕೆ ಹೋಗಬೇಕು ಎಂದು ತಿಳಿಸಿದರು’ ಎಂದರು.

’ಕಲ್ಯಾಣ ಮಂಟಪದ ಬಳಿ ನೂರಾರು ಜನರು ದೈಹಿಕ ಅಂತರ ಕಾಯ್ದುಕೊಳ್ಳದೆ ನಿಂತಿದ್ದರು. ನಾನು ನನ್ನ ತಂದೆ-ತಾಯಿಯನ್ನು ಇಷ್ಟು ದಿನ ಹೊರಗೆ ಕಳುಹಿಸಿಲ್ಲ. ಇಲ್ಲಿನ ಜನಸಂದಣಿ ನೋಡಿ ಭಯವಾಯಿತು. ಅವರಿಗಾಗಿ ನಾನು 45 ನಿಮಿಷಗಳ ಕಾಲ ಸರದಿಯಲ್ಲಿ ಕಾಯುತ್ತಿದ್ದೆ. ಆದರೆ, ಅಲ್ಲೂ ಕೂಡ ಶಾಸಕರು ಬಂದು ಲಸಿಕಾ ಅಭಿಯಾನ ಉದ್ಘಾಟಿಸಬೇಕು ಎಂದು ತಿಳಿಸಿದರು. ಇವು ಸರ್ಕಾರದ ಲಸಿಕೆಗಳು, ಇವುಗಳನ್ನು ಅವರು ಹೇಗೆ ತಮ್ಮ ಜನರಿಗೆ ಮಾತ್ರ ನೀಡಲು ಸಾಧ್ಯ…? ನನ್ನ ಹೆತ್ತವರಿಗೆ ಯಾವಾಗ ಲಸಿಕೆ ದೊರೆಯುತ್ತದೋ ನನಗೆ ತಿಳಿದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನಿವಾಸಿ ಜಗದೀಶ್, “ಶಾಸಕರು ವ್ಯಾಕ್ಸಿನೇಷನ್ ಕೇಂದ್ರವನ್ನು ತಮ್ಮ ಸ್ವಂತ ಆಸ್ತಿಗೆ ಸ್ಥಳಾಂತರಿಸಿದ್ದಾರೆ. ಆದರೆ, ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬೇಕು. ಆರೋಗ್ಯ ಕೇಂದ್ರಗಳಿಗೆ ನೀಡಬೇಕಾದ ಸರ್ಕಾರಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದೇನೆ ಎಂದು ಹೇಳಿಕೊಂಡು ಬಿಜೆಪಿ ಶಾಸಕ ತಮ್ಮ ಫೋಟೋದೊಂದಿಗೆ ಬ್ಯಾನರ್ ಹಾಕಿದ್ದಾರೆ. ಜೊತೆಗೆ ಅವರು ತಮ್ಮ ಪಕ್ಷದ ಜನರಿಗೆ ಲಸಿಕೆಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.


 

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...