Homeಮುಖಪುಟರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ಶಾಸಕರು ಮತ್ತು ಸಂಸದರು ಪದೇ ಪದೇ ಕೋವಿಡ್ ಲಸಿಕೆ ವಿವಾದದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈಗ ಇದೆ ಸಾಲಿಗೆ ಬೆಂಗಳೂರಿನ ಸಿ.ವಿ.ರಾಮನ್ ನಗರ ಶಾಸಕ ಎಸ್.ರಘು, ಸರ್ಕಾರಿ ಲಸಿಕೆಯನ್ನು ಶಾಸಕರು ನೀಡುತ್ತಿರುವ ಉಚಿತ ಲಸಿಕೆ ಎಂದು ಸ್ವಂತ ಸ್ಥಳದಲ್ಲಿ ಲಸಿಕಾ ಅಭಿಯಾನ ನಡೆಸಿದ್ದಾರೆ.

ಬೆಂಗಳೂರಿನ ಭುವನೇಶ್ವರಿ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (PHC) ಮೇ 31 ರಂದು ನಡೆಯಬೇಕಿದ್ದ ವ್ಯಾಕ್ಸಿನೇಷನ್ ಡ್ರೈವ್ ಶಾಸಕರ ಆದೇಶದಂತೆ ರದ್ದುಗೊಳಿಸಲಾಗಿದೆ. ಸುಮಾರು 300 ಜನರಿಗೆ ಮುಂಜಾನೆ ಟೋಕನ್‌ಗಳನ್ನು ನೀಡಲಾಗಿತ್ತು. ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ಲಸಿಕಾ ಅಭಿಯಾನವನ್ನು, ಬಿಜೆಪಿ ಶಾಸಕ ಎಸ್.ರಘು ಅವರ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ನಡೆಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಶಾಸಕರು ಉಚಿತ ವ್ಯಾಕ್ಸಿನೇಷನ್ ಡ್ರೈವ್ ಮಾಡುತ್ತಿದ್ದಾರೆ ಎಂದು ಪ್ರಚಾರ ಪಡಿಸುವ ಬ್ಯಾನರ್‌ನೊಂದಿಗೆ ಲಸಿಕೆ ನೀಡಲಾಗಿದೆ. ಜೊತೆಗೆ ಬಿಜೆಪಿಯ ಕಾರ್ಯಕರ್ತರು, ಶಾಸಕರ ಸ್ನೇಹಿತರು ಮತ್ತು ಕುಟುಂಬಗಳಿಗೆ ಮಾತ್ರ ಲಸಿಕೆ ನೀಡಿದರು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಘಟನೆ ಬಗ್ಗೆ ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಶನಿವಾರವಷ್ಟೇ ಶಾಸಕ ರವಿ ಸುಬ್ರಮಣ್ಯ ಇದೇ ರೀತಿಯ ವಿವಾದಕ್ಕೆ ಸಿಲುಕಿದ್ದರು, ಅಲ್ಲಿ ಅವರು ಲಸಿಕೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ 72 ಮತ್ತು 65 ವರ್ಷದ ಪೋಷಕರಿಗೆ ಲಸಿಕೆ ಟೋಕನ್ ಸಂಗ್ರಹಿಸಲು ಬೆಳಿಗ್ಗೆ 7 ಗಂಟೆಗೆ ಆರೋಗ್ಯ ಕೇಂದ್ರಕ್ಕೆ ತೇರಳಿದ್ದ ಸ್ಥಳೀಯ ನಿವಾಸಿ ಮಂಜು ಹೇಳೂವಂತೆ, ’ಟೋಕನ್ ಪ್ರಕಾರ ಬೆಳಿಗ್ಗೆ 9: 45 ಕ್ಕೆ ಪೋಷಕರನ್ನು ಕರೆತರಲು ತಿಳಿಸಲಾಗಿತ್ತು. ನಾವು ನಿಗದಿತ ಸಮಯಕ್ಕಿಂತ ಮುಂಚೆಯೇ ಅಲ್ಲಿಗೆ ತಲುಪಿದ್ದೇವು.  ಆದರೆ ನಾವು ಅಲ್ಲಿಗೆ ಹೋದಾಗ ಬೆಳಿಗ್ಗೆ 10: 15 ಕ್ಕೆ ಇಲ್ಲಿ ಲಸಿಕೆ ನೀಡುವುದಿಲ್ಲ ಆದರೆ ಎಲ್ಲರೂ ಕಲ್ಯಾಣ ಮಂಟಪಕ್ಕೆ ಹೋಗಬೇಕು ಎಂದು ತಿಳಿಸಿದರು’ ಎಂದರು.

’ಕಲ್ಯಾಣ ಮಂಟಪದ ಬಳಿ ನೂರಾರು ಜನರು ದೈಹಿಕ ಅಂತರ ಕಾಯ್ದುಕೊಳ್ಳದೆ ನಿಂತಿದ್ದರು. ನಾನು ನನ್ನ ತಂದೆ-ತಾಯಿಯನ್ನು ಇಷ್ಟು ದಿನ ಹೊರಗೆ ಕಳುಹಿಸಿಲ್ಲ. ಇಲ್ಲಿನ ಜನಸಂದಣಿ ನೋಡಿ ಭಯವಾಯಿತು. ಅವರಿಗಾಗಿ ನಾನು 45 ನಿಮಿಷಗಳ ಕಾಲ ಸರದಿಯಲ್ಲಿ ಕಾಯುತ್ತಿದ್ದೆ. ಆದರೆ, ಅಲ್ಲೂ ಕೂಡ ಶಾಸಕರು ಬಂದು ಲಸಿಕಾ ಅಭಿಯಾನ ಉದ್ಘಾಟಿಸಬೇಕು ಎಂದು ತಿಳಿಸಿದರು. ಇವು ಸರ್ಕಾರದ ಲಸಿಕೆಗಳು, ಇವುಗಳನ್ನು ಅವರು ಹೇಗೆ ತಮ್ಮ ಜನರಿಗೆ ಮಾತ್ರ ನೀಡಲು ಸಾಧ್ಯ…? ನನ್ನ ಹೆತ್ತವರಿಗೆ ಯಾವಾಗ ಲಸಿಕೆ ದೊರೆಯುತ್ತದೋ ನನಗೆ ತಿಳಿದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನಿವಾಸಿ ಜಗದೀಶ್, “ಶಾಸಕರು ವ್ಯಾಕ್ಸಿನೇಷನ್ ಕೇಂದ್ರವನ್ನು ತಮ್ಮ ಸ್ವಂತ ಆಸ್ತಿಗೆ ಸ್ಥಳಾಂತರಿಸಿದ್ದಾರೆ. ಆದರೆ, ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬೇಕು. ಆರೋಗ್ಯ ಕೇಂದ್ರಗಳಿಗೆ ನೀಡಬೇಕಾದ ಸರ್ಕಾರಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದೇನೆ ಎಂದು ಹೇಳಿಕೊಂಡು ಬಿಜೆಪಿ ಶಾಸಕ ತಮ್ಮ ಫೋಟೋದೊಂದಿಗೆ ಬ್ಯಾನರ್ ಹಾಕಿದ್ದಾರೆ. ಜೊತೆಗೆ ಅವರು ತಮ್ಮ ಪಕ್ಷದ ಜನರಿಗೆ ಲಸಿಕೆಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.


 

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...