Homeಮುಖಪುಟಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕರಾದ ಸುರೇಶ್ ತಿವಾರಿ ಮುಸ್ಲಿಮರಿಂದ ತರಕಾರಿ ಗಳನ್ನು ಖರೀದಿಸಬಾರದು ಎಂದು ಜನರಿಗೆ ಎಚ್ಚರಿಕೆ ನೀಡುವ ವಿಡಿಯೊ ವೈರಲಾಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ತಿವಾರಿ “ನಾನು ಏನಾದರೂ ತಪ್ಪು ಹೇಳಿದ್ದೇನಾ ?” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವೈರಲಾಗಿದ್ದ ವಿಡಿಯೊದಲ್ಲಿ “ಒಂದು ವಿಷಯವನ್ನು ನೆನಪಿನಲ್ಲಿಡಿ. ನಾನು ಎಲ್ಲರಿಗೂ ಹೇಳುತ್ತಿದ್ದೇನೆ. ಮಿಯಾಗಳಿಂದ(ಮುಸ್ಲಿಮರು) ತರಕಾರಿಗಳನ್ನು ಖರೀದಿಸುವ ಅಗತ್ಯವಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ವಿವಾದದ ಬಗ್ಗೆ ಸುರೇಶ್ ತಿವಾರಿ ತನ್ನ ಮಾತನ್ನು ಸಮರ್ಥಿಸಿಕೊಂಡಿದ್ದಾರೆ, “ನಾನು ನನ್ನ ಕ್ಷೇತ್ರದಲ್ಲಿ 10-12 ಜನರ ಗುಂಪಿನೊಂದಿಗೆ ಸಂವಹನ ಮಾಡುತ್ತಾ, ಲಾಕ್ ಡೌನ್ ಬಗ್ಗೆ ನಾವು ಸಂವಾದ ನಡೆದ್ದೆವು. ಮುಸ್ಲಿಂ ತರಕಾರಿ ಮಾರಾಟಗಾರರು ಅದರ ಮೇಲೆ ಉಗುಳುತ್ತಿದ್ದಾರೆ ಎಂದು ನನಗೆ ತಿಳಿಸಿದ್ದರಿಂದ, ನಾನು ಹಾಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಒವೈಸಿ ಹಿಂದೂಗಳ ವಿರುದ್ದ ಆಕ್ಷೇಪಾರ್ಹ ವಿಷಯಗಳನ್ನು ಹೇಳುತ್ತಾರೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?


ಕೊರೊನಾ ಸಾಂಕ್ರಾಮಿಕವು ಎಲ್ಲರನ್ನೂ ಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ಕಳೆದ ವಾರ ಪ್ರಧಾನಿ ಮೋದಿ ಹೇಳಿದ್ದರು. “ಕೊರೊನಾ ಜನಾಂಗ, ಧರ್ಮ, ಬಣ್ಣ, ಜಾತಿ, ಮತ, ಭಾಷೆ ಅಥವಾ ಗಡಿಯನ್ನು ನೋಡುವುದಿಲ್ಲ. ನಾವು ಒಗ್ಗಟ್ಟಿನಿಂದ ಇದಬೇಕು” ಎಂದು ಪ್ರಧಾನಿ ಮೋದಿ ಲಿಂಕ್ಡಿನ್‌ ಪೋಸ್ಟ್‌ನಲ್ಲಿ ತಿಳಿಸಿದ್ದರು.

ತಿವಾರಿಯ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಟೀಕಿಸಿದ್ದಾರೆ. ನಟಿ ಹಾಗೂ ಕಾಂಗ್ರೆಸ್ ನಾಯಕಿ ನಗ್ಮಾ “ಮೋದಿ ಮೊದಲು ನಿಮ್ಮ ಜನರಿಗೆ ಪಾಠ ಕಲಿಸಿ” ಎಂದು ಟ್ವೀಟಿಸಿದ್ದಾರೆ.

 

ಉತ್ತರಪ್ರದೇಶದಲ್ಲಿ, ಕೊರೊನಾ ವೈರಸ್ ಬಗೆಗಿನ ವದಂತಿಗಳನ್ನು ನಂಬಿ ಮುಸ್ಲಿಂ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಹಲವಾರು ಘಟನೆಗಳು ವರದಿಯಾಗಿವೆ.

ಲಖಿಂಪುರದ ಮುಸ್ಲಿಂ ಹಣ್ಣು ಮಾರಾಟಗಾರನನ್ನು ಕಲ್ಲಂಗಡಿಗಳನ್ನು ಮಾರಾಟ ಮಾಡುವ ಮೊದಲು ಉಗುಳಿದ್ದಾರೆ ಎಂದು ಆರೋಪಿಸಲಾಗಿತ್ತು. ವ್ಯಕ್ತಿಯೊಬ್ಬ ಅತ್ತು ಕೈಮುಗಿದು ತಾನು ಯಾವುದೇ ತಪ್ಪು ಮಾಡಿಲ್ಲ ಹಾಗು ನನಗೆ ಹೋಗಲು ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿರುವ ವಿಡಿಯೊ ವೈರಲಾಗಿತ್ತು. ಆದರೆ ಯುಪಿ ಪೊಲೀಸರ ತಂಡ ಸ್ಥಳಕ್ಕೆ ತಲುಪಿ ವ್ಯಕ್ತಿಯನ್ನು ರಕ್ಷಿಸಿ, ಮಾರಾಟಗಾರರ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ತಿಳಿಸಿದೆ.

ಕೆಲವು ದಿನಗಳ ಹಿಂದೆ ಕೂಡಾ ಮಹೋಬಾ ಜಿಲ್ಲೆಯ ತರಕಾರಿ ಮಾರಾಟಗಾರರು ತಮ್ಮನ್ನು ಬೆದರಿಸಲಾಗುತ್ತಿದೆ ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದು ದೂರು ನೀಡಿದ್ದರು. ಆದರೆ ಜಿಲ್ಲಾಡಳಿತವು ವಿಚಾರಣೆ ನಡೆಸಿ ಆರೋಪವನ್ನು ದೃಡೀಕರಿಸಲು ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಕೊರೊನಾ ಹರಡಲು ಮುಸ್ಲಿಂ ವ್ಯಕ್ತಿ ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದನೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...