Homeಮುಖಪುಟಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕರಾದ ಸುರೇಶ್ ತಿವಾರಿ ಮುಸ್ಲಿಮರಿಂದ ತರಕಾರಿ ಗಳನ್ನು ಖರೀದಿಸಬಾರದು ಎಂದು ಜನರಿಗೆ ಎಚ್ಚರಿಕೆ ನೀಡುವ ವಿಡಿಯೊ ವೈರಲಾಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ತಿವಾರಿ “ನಾನು ಏನಾದರೂ ತಪ್ಪು ಹೇಳಿದ್ದೇನಾ ?” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವೈರಲಾಗಿದ್ದ ವಿಡಿಯೊದಲ್ಲಿ “ಒಂದು ವಿಷಯವನ್ನು ನೆನಪಿನಲ್ಲಿಡಿ. ನಾನು ಎಲ್ಲರಿಗೂ ಹೇಳುತ್ತಿದ್ದೇನೆ. ಮಿಯಾಗಳಿಂದ(ಮುಸ್ಲಿಮರು) ತರಕಾರಿಗಳನ್ನು ಖರೀದಿಸುವ ಅಗತ್ಯವಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ವಿವಾದದ ಬಗ್ಗೆ ಸುರೇಶ್ ತಿವಾರಿ ತನ್ನ ಮಾತನ್ನು ಸಮರ್ಥಿಸಿಕೊಂಡಿದ್ದಾರೆ, “ನಾನು ನನ್ನ ಕ್ಷೇತ್ರದಲ್ಲಿ 10-12 ಜನರ ಗುಂಪಿನೊಂದಿಗೆ ಸಂವಹನ ಮಾಡುತ್ತಾ, ಲಾಕ್ ಡೌನ್ ಬಗ್ಗೆ ನಾವು ಸಂವಾದ ನಡೆದ್ದೆವು. ಮುಸ್ಲಿಂ ತರಕಾರಿ ಮಾರಾಟಗಾರರು ಅದರ ಮೇಲೆ ಉಗುಳುತ್ತಿದ್ದಾರೆ ಎಂದು ನನಗೆ ತಿಳಿಸಿದ್ದರಿಂದ, ನಾನು ಹಾಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಒವೈಸಿ ಹಿಂದೂಗಳ ವಿರುದ್ದ ಆಕ್ಷೇಪಾರ್ಹ ವಿಷಯಗಳನ್ನು ಹೇಳುತ್ತಾರೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?


ಕೊರೊನಾ ಸಾಂಕ್ರಾಮಿಕವು ಎಲ್ಲರನ್ನೂ ಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ಕಳೆದ ವಾರ ಪ್ರಧಾನಿ ಮೋದಿ ಹೇಳಿದ್ದರು. “ಕೊರೊನಾ ಜನಾಂಗ, ಧರ್ಮ, ಬಣ್ಣ, ಜಾತಿ, ಮತ, ಭಾಷೆ ಅಥವಾ ಗಡಿಯನ್ನು ನೋಡುವುದಿಲ್ಲ. ನಾವು ಒಗ್ಗಟ್ಟಿನಿಂದ ಇದಬೇಕು” ಎಂದು ಪ್ರಧಾನಿ ಮೋದಿ ಲಿಂಕ್ಡಿನ್‌ ಪೋಸ್ಟ್‌ನಲ್ಲಿ ತಿಳಿಸಿದ್ದರು.

ತಿವಾರಿಯ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಟೀಕಿಸಿದ್ದಾರೆ. ನಟಿ ಹಾಗೂ ಕಾಂಗ್ರೆಸ್ ನಾಯಕಿ ನಗ್ಮಾ “ಮೋದಿ ಮೊದಲು ನಿಮ್ಮ ಜನರಿಗೆ ಪಾಠ ಕಲಿಸಿ” ಎಂದು ಟ್ವೀಟಿಸಿದ್ದಾರೆ.

 

ಉತ್ತರಪ್ರದೇಶದಲ್ಲಿ, ಕೊರೊನಾ ವೈರಸ್ ಬಗೆಗಿನ ವದಂತಿಗಳನ್ನು ನಂಬಿ ಮುಸ್ಲಿಂ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಹಲವಾರು ಘಟನೆಗಳು ವರದಿಯಾಗಿವೆ.

ಲಖಿಂಪುರದ ಮುಸ್ಲಿಂ ಹಣ್ಣು ಮಾರಾಟಗಾರನನ್ನು ಕಲ್ಲಂಗಡಿಗಳನ್ನು ಮಾರಾಟ ಮಾಡುವ ಮೊದಲು ಉಗುಳಿದ್ದಾರೆ ಎಂದು ಆರೋಪಿಸಲಾಗಿತ್ತು. ವ್ಯಕ್ತಿಯೊಬ್ಬ ಅತ್ತು ಕೈಮುಗಿದು ತಾನು ಯಾವುದೇ ತಪ್ಪು ಮಾಡಿಲ್ಲ ಹಾಗು ನನಗೆ ಹೋಗಲು ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿರುವ ವಿಡಿಯೊ ವೈರಲಾಗಿತ್ತು. ಆದರೆ ಯುಪಿ ಪೊಲೀಸರ ತಂಡ ಸ್ಥಳಕ್ಕೆ ತಲುಪಿ ವ್ಯಕ್ತಿಯನ್ನು ರಕ್ಷಿಸಿ, ಮಾರಾಟಗಾರರ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ತಿಳಿಸಿದೆ.

ಕೆಲವು ದಿನಗಳ ಹಿಂದೆ ಕೂಡಾ ಮಹೋಬಾ ಜಿಲ್ಲೆಯ ತರಕಾರಿ ಮಾರಾಟಗಾರರು ತಮ್ಮನ್ನು ಬೆದರಿಸಲಾಗುತ್ತಿದೆ ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದು ದೂರು ನೀಡಿದ್ದರು. ಆದರೆ ಜಿಲ್ಲಾಡಳಿತವು ವಿಚಾರಣೆ ನಡೆಸಿ ಆರೋಪವನ್ನು ದೃಡೀಕರಿಸಲು ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಕೊರೊನಾ ಹರಡಲು ಮುಸ್ಲಿಂ ವ್ಯಕ್ತಿ ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದನೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....